ಸಮಾಜದ ಅಭಿವೃದ್ಧಿಗೆ ಸಹಕಾರ ಸಂಸ್ಥೆಗಳು ಸಹಕಾರಿ

1200 ಕೋಟಿ ಸಾಲ ವಿತರಿಸುವ ಜೊತೆಗೆ 300 ಕೋಟಿ ಹಣ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿಲಾಗಿದೆ.

Team Udayavani, Sep 1, 2022, 4:16 PM IST

ಸಮಾಜದ ಅಭಿವೃದ್ಧಿಗೆ ಸಹಕಾರ ಸಂಸ್ಥೆಗಳು ಸಹಕಾರಿ

ಬಾಗಲಕೋಟೆ: ಮನುಷ್ಯ ಸಂಘ ಜೀವಿ, ಪರಸ್ಪರ ಸಹಕಾರ ಹಾಗೂ ವಿಶ್ವಾಸದಿಂದ ಸಾಗಿದರೆ ಜೊತೆಯಾಗಿ ಸಾಗಿದಾಗ ಮಾತ್ರ ವಿಕಾಸ ಸಾಧ್ಯ. ಹೀಗಾಗಿ ಸಮಾಜದ ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳು ಪೂರಕವಾಗಿವೆ ಎಂಬುದನ್ನು ವಿಜಯ ಎಂ.ಆರ್‌.ಎನ್‌. ಸೌಹಾರ್ದ ಸಹಕಾರಿ ನಿರೂಪಿಸಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ಮುಧೋಳದ ನಿರಾಣಿ ಶುಗರ್ಸ್‌ ಆವರಣದಲ್ಲಿ ನಡೆದ ವಿಜಯ ಹಾಗೂ ವಿಶಾಲ ಸೌಹಾರ್ದ ಸಹಕಾರಿ, ಪ್ರಜ್ವಲ್‌ ವಿವಿಧೋದ್ದೇಶಗಳ ಸಹಕಾರಿ ಸಂಘ ಹಾಗೂ ಎಂ.ಆರ್‌.ಎನ್‌. (ನಿರಾಣಿ) ಫೌಂಡೇಶನ್‌ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.

ನಿರಾಣಿ ಸಮೂಹದ 3 ಸಹಕಾರಿ ಸಂಸ್ಥೆಗಳು ರೈತರ, ಕಾರ್ಮಿಕರ ಹಾಗೂ ಎಲ್ಲ ಸಹಕಾರಿ ಸದಸ್ಯರ ಸಹಕಾರದಿಂದ ಸದೃಢವಾಗಿ ಬೆಳೆದಿವೆ. ಈ ಬೆಳವಣಿಗೆ ಮೂಲಕ ನಮ್ಮ ಭಾಗದಲ್ಲಿ ಆದ ಆರ್ಥಿಕ ಪ್ರಗತಿ ನಮ್ಮ ಜವಾಬ್ದಾರಿ ಹೆಚ್ಚಿಸಿದೆ. ಆಧುನಿಕ ಬ್ಯಾಂಕಿಂಗ್‌ ಸೌಲಭ್ಯಗಳನ್ನು ರೈತ ಸಮೂಹಕ್ಕೆ ಪರಿಚಯಿಸುವಲ್ಲಿ ವಿಜಯ ಸೌಹಾರ್ದ ಸಹಕಾರಿ ಯಶಸ್ಸು ಕಂಡಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ಬಾಗಲಕೋಟೆ ಜಿಲ್ಲೆ ಬೆಳ್ಳಿಹಬ್ಬ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಬಾದಾಮಿ ತಾಲೂಕಿನಲ್ಲಿ 1 ಲಕ್ಷ ಎಕರೆಗೆ
ನೀರೊದಗಿಸುವ ನೀರಾವರಿ ಯೋಜನೆಗಳು ಕಾರ್ಯ ಪ್ರಗತಿಯಲ್ಲಿರುವುದು ಖುಷಿ ತಂದಿದೆ. ಮುಂದಿನ 2 ವರ್ಷಗಳಲ್ಲಿ ಬಾದಾಮಿ ತಾಲೂಕಿನಲ್ಲಿ 2 ಸಾವಿರ ಎಕರೆ ಕೈಗಾರಿಕಾ ಪ್ರದೇಶ, ಬಾಗಲಕೋಟೆ-ಬಾದಾಮಿ 2 ಸ್ಥಳಗಳಿಗೆ ಅನುಕೂಲವಾಗಲು ವಿಮಾನ ನಿಲ್ದಾಣ ನಿರ್ಮಾಣ, ಖಜ್ಜಿಡೋಣಿವರೆಗೂ ತಲುಪಿದ ಕುಡಚಿ-ಬಾಗಲಕೋಟೆ ರೈಲು ಮಾರ್ಗ ಪೂರ್ಣಗೊಳಿಸಿದರೆ ಮಹಾರಾಷ್ಟ್ರಕ್ಕೆ ರೈಲು ಸಂಪರ್ಕ ಮತ್ತು ಜಮಖಂಡಿ, ಮುಧೋಳ ಮಾರ್ಗವಾಗಿ ಪೂನಾ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿ ಹೊಸ ಮಾರ್ಗ ಅನುಷ್ಠಾನ ಸೇರಿದಂತೆ ಎಲ್ಲ ಮಹತ್ವಾಕಾಂಕ್ಷಿ ಯೋಜನೆಗಳು ಪೂರ್ಣಗೊಂಡು ಕೈಗಾರಿಕರಣ ಬಲವರ್ಧನೆ ಮಾಡಲಾಗುವುದು ಎಂದು ಹೇಳಿದರು.

ವಿಜಯ ಸಹಕಾರಿಯ ವಾರ್ಷಿಕ ವರದಿ ವಾಚನ ಮಾಡಿದ ಎಂ.ಎಚ್‌. ಪತ್ತೇನ್ನವರ ಮಾತನಾಡಿ, 2021-21ನೇ ಹಣಕಾಸು ವರ್ಷದಲ್ಲಿ ಸಹಕಾರಿಯು 25 ಸಾವಿರ ಕೋಟಿ ವಾರ್ಷಿಕ ವಹಿವಾಟು ನಡೆಸಿ, 1425 ಕೋಟಿ ಠೇವಣಿ ಹೊಂದಿದ್ದು, 1200 ಕೋಟಿ ಸಾಲ ವಿತರಿಸುವ ಜೊತೆಗೆ 300 ಕೋಟಿ ಹಣ ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿಲಾಗಿದೆ.

ಸಹಕಾರಿಯು 4.90 ಕೋಟಿ ಲಾಭಗಳಿಸುವ ಮೂಲಕ ಕರ್ನಾಟಕದಲ್ಲಿಯೇ ಅತ್ಯ ಧಿಕ ಶೇ. 25 ಡಿವಿಡೆಂಟ್‌ ಘೋಷಿಸಿದ ಏಕೈಕ ಸಂಸ್ಥೆಯಾಗಿದೆ ಎಂದರು. ಸಿದ್ದರಾಜ ಪೂಜಾರಿ, ರಾಜಶೇಖರ ಶೀಲವಂತ ಮಾತನಾಡಿದರು.

ಸಂಗಮೇಶ ನಿರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ, ಶಶಿಕಾಂತಗೌಡ ಪಾಟೀಲ, ಬಿಡಿಸಿಸಿ ನಿರ್ದೇಶಕ ಆರ್‌. ಎಸ್‌. ತಳೇವಾಡ, ಶಿವನಗೌಡ ಪಾಟೀಲ-ಹುನಗುಂದ, ಮುತ್ತಣ್ಣ ಕಳ್ಳಿಗುದ್ದಿ, ಸುಶೀಲಕುಮಾರ ಬೆಳಗಲಿ, ಭೀಮಶಿ ಮಗದುಮ್ಮ, ಶ್ಯಾಮ್‌ ಕರವಾ, ಸೊಮಶೇಖರ ಗೋಸಾರ, ಪಿ.ಆರ್‌. ಗೌಡರ, ಕಾಡು ಮಾಳಿ, ಸುರೇಶ ಬಿರಾದಾರ, ಸೋಮನಗೌಡ ಪಾಟೀಲ, ಈಶ್ವರ ಕರಬಸನ್ನವರ, ಎಂ.ಆರ್‌. ಪಾಟೀಲ, ಮಹಾದೇವ ಮಾರಾಪುರ ಇದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.