ಕೊರೊನಾ ಹಾನಿ ಅಭಿಯಾನ; ರಾಜಕಾರಣ ಬದಿಗಿಡಿ

ಮಾಹಿತಿ ಕ್ರೋಢೀಕರಣ ಮಾಡಿ ತಹಶೀಲ್ದಾರ್‌ಗೆ ಮನವಿ ನೀಡಿ | ಕಾರ್ಯಕರ್ತರಿಗೆ ಮಾಜಿ ಶಾಸಕ ಪಾಟೀಲ ಮನವಿ

Team Udayavani, Jul 2, 2021, 8:20 PM IST

1 bgk-3

ಬೀಳಗಿ: ತಾಲೂಕಿನಲ್ಲಿರುವ ಪ್ರತಿಯೊಂದು ಮನೆ-ಮನೆಗೂ ತೆರಳಿ ಅವರನ್ನು ಸಂಪರ್ಕ ಮಾಡಿ ಮನೆಯಲ್ಲಿ ಕೊರೊನಾದಿಂದ ಆಗಿರುವ ಹಾನಿ, ಸಾವು ಮತ್ತು ಉದ್ಯೋಗ ಕಳೆದುಕೊಂಡಿರುವ ಮಾಹಿತಿಯನ್ನು ಜಾತಿ, ಪಕ್ಷ ಪಂಗಡ ಎನ್ನದೆ ಯಾವುದೆ ರಾಜಕಾರಣವಿಲ್ಲದೆ ಅಭಿಯಾನ ನಡೆಯಬೇಕು ಎಂದು ಮಾಜಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.

ತಾಲೂಕಿನ ಗಲಗಲಿ ಗ್ರಾಮದ ಈದ್ಗಾ ಆವರಣದಲ್ಲಿ ಕಾಂಗ್ರೆಸ್‌ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕೊರೊನಾ ಪೀಡಿತರ ಸಂಪರ್ಕ ಅಭಿಯಾನದ ಪ್ರತಿಗಳನ್ನು ಬೂತ್‌ಮಟ್ಟದ ಕಾರ್ಯಕರ್ತರಿಗೆ ವಿತರಿಸಿ ಅವರು ಮಾತನಾಡಿದರು. ಗ್ರಾಮಗಳಲಿ ಕೊರೊನಾ ಎರಡು ಅಲೆಯಲ್ಲಿ ಆಗಿರುವ ಸಮಗ್ರ ಚಿತ್ರಣ ಕಂಡು ಹಿಡಿದು ಸರ್ಕಾರಗಳಿಂದ ನಿಜವಾದ ಫಲಾನುಭವಿಗಳಿಗೆ ಸಿಗಬೇಕಾದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಬರುವ 15 ದಿನಗಳಲ್ಲಿ ತಾಲೂಕಿನ ಎಲ್ಲ ಹಳ್ಳಿಗಳಿಗೂ ಸಂಪರ್ಕ ಸಾಧಿಸಿ ಕೊರೊನಾ ಸಾವು ಮತ್ತು ಹಾನಿಗಳ ಕುರಿತಾಗಿ ಮಾಹಿತಿ ಕ್ರೋಢಿಕರಣ ಮಾಡಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜತೆಗೆ ರಾಜ್ಯ ಕಾಂಗ್ರೆಸ್‌ ವತಿಯಿಂದ ನಿಜವಾದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸುಪ್ರಿಂಕೋರ್ಟ್‌ ನಲ್ಲಿ ದೂರು ದಾಖಲಿಸಲು ಚಿಂತನೆ ನಡೆದಿದೆ ಎಂದರು.

ಕೊರೊನಾ ನಿಯಂತ್ರಣ ಮತ್ತು ರಾಜ್ಯದ ಅಭಿವೃದ್ಧಿ ವಿಷಯಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇಂತಹ ಸರ್ಕಾರದಿಂದ ಇಂದು ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಜನರಿಗಾಗಿ ಏನು ಮಾಡಿದೆ ಎನ್ನುವುದು ಜನರಿಗೆ ಅರ್ಥವಾಗಬೇಕು. ಕೊರೊನಾ ಕಾಲದಲ್ಲಿ 20 ಲಕ್ಷ ಕೋಟಿ ರೂ ಪ್ಯಾಕೇಜ್‌ ನೀಡಿದ್ದ ಕೇಂದ್ರದ ಹಣ ಯಾರಿಗೆ ಬಂದಿದೆ ಎನ್ನುವುದು ತಿಳಿಯುತ್ತಿಲ್ಲ. ರಾಜ್ಯ ಸರ್ಕಾರ ನೀಡಿದ ಪ್ಯಾಕೇಜ್‌ ಕೂಡಾ ನಿಜವಾದ ಫಲಾನುಭವಿಗಳಿಗೆ ತಲುಪುತ್ತಿದೆ ಇಲ್ಲವೋ ಎನ್ನುವುದು ಅರ್ಥವಾಗದೆ ಜನರು ರೋಷಿ ಹೋಗಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ ಮಾತನಾಡಿ, ಚುನಾವಣೆ ಬಂದಾಗ ಸುಳ್ಳು ಭರವಸೆ ನೀಡಿ ಗೆಲ್ಲುವ ವರಸೆ ಜನರಿಗೆ ಅರ್ಥವಾಗಿದೆ. 2014 ರಲ್ಲಿ ಪೆಟ್ರೋಲ್‌ ಬೆಲೆ ಇಳಿಸುವುದಾಗಿ, ಬಡವರ ಖಾತೆಗೆ ಹಣ ನೀಡುವುದಾಗಿ, ಭಾರತ ಸುಂದರ ದೇಶ ಮಾಡುವ ಬಗ್ಗೆ ತಿಳಿಸಿ ಯಾವುದನ್ನು ಮಾಡದೆ ಅಧಿಕಾರ ಪೂರ್ಣ ಮಾಡಿದ್ದೀರಿ. 2019ರಲ್ಲಿ ಫುಲ್ವಾಮಾ ದಾಳಿ ಮುಂದಿಟ್ಟು ಜನರಿಗೆ ಸುಳ್ಳು ಹೇಳಿ ಗೆದ್ದು, ಮೋಸ ಮಾಡಲಾಗಿದೆ ಎಂದರು.

ದೇಶವನ್ನು ಮಾರಾಟ ಮಾಡುವ ಕೆಲಸ, ಕೆಲ ಬಲಾಡ್ಯ ಶಕ್ತಿಗಳಿಗೆ ದೇಶವನ್ನು ಮಾರಾಟ ಮಾಡಿ ದೇಶದ ಜನರಲ್ಲಿ ಜಾತಿ ವಿಷ ಬೀಜ ಬಿತ್ತಿ ಅಧಿಕಾರ ಮಾಡುವ ನೀವು ಜನರಿಂದಲೇ ಮನೆಗೆ ಹೋಗುವ ಕಾಲ ಬಂದಿದೆ,ಅದಕ್ಕಾಗಿ ಕಾಂಗ್ರೆಸ ಪಕ್ಷದ ಕಾರ್ಯಕರ್ತರು ಇಂದಿನಿಂದಲೇ ಕಾರ್ಯೋನ್ಮುಖರಾಗಿ ಕೆಲಸ ಮಾಡಿ, ನಾವು ದೇಶ ದೇಶದ ಜನರಿಗಾಗಿ ಕೆಲಸ ಮಾಡಿ ಜನರ ಮನಸ್ಸು ಗೆಲ್ಲುವ ಕೆಲಸ ಮಾಡೋನಾ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಬಸವರಾಜ ಖೋತ, ಮಗಿಯಪ್ಪ ದೇವನಾಳ, ಎಂ.ಎಲ್‌. ಕೆಂಪಲಿಂಗಣ್ಣವರ, ಶ್ರೀಶೈಲ ಅಂಟೀನ, ಮಂಜು ಕಣಬೂರಮಠ, ಸಂತೋಷ ಬಗಲಿ, ರಾಜು ಹಿರೇಮಠ, ವೆಂಕಟೇಶ ಜಂಬಗಿ, ರವಿ ನಾಗನಗೌಡರ, ಮನೋಜ ಹಾದಿಮನಿ, ಮಲ್ಲಪ್ಪ ಕಾಳಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.