ಕಾಟನ್‌ ಮಾರ್ಕೆಟ್‌: ರಣಾಂಗಣವಾದ ನಗರಸಭೆ

ತೀವ್ರ ಗದ್ದಲ-ವಾಗ್ವಾದ ನಡೆದಿದ್ದ ಸಭೆಯಲ್ಲಿ ಸಂಪೂರ್ಣ ಶಾಂತ ವಾತಾವರಣ ಸೃಷ್ಟಿಯಾಯಿತು.

Team Udayavani, Feb 8, 2022, 6:17 PM IST

ಕಾಟನ್‌ ಮಾರ್ಕೆಟ್‌: ರಣಾಂಗಣವಾದ ನಗರಸಭೆ

ಬಾಗಲಕೋಟೆ: ಇಲ್ಲಿನ ನಗರಸಭೆಯ ಬಹುಕೋಟಿ ಮೊತ್ತದ ಕಾಟನ್‌ ಮಾರ್ಕೆಟ್‌ ಆಸ್ತಿಯನ್ನು ಲೀಜ್‌ ದಾರರಿಗೆ ಮಾರಾಟ ಮಾಡಲು ಸರ್ಕಾರಕ್ಕೆ ಅನುಮತಿ ಕೊಡುವ ಪ್ರಸ್ತಾವನೆ ಕುರಿತು ಸೋಮವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಕಳೆದ ತಿಂಗಳು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಕಾಟನ್‌ ಮಾರ್ಕೆಟ್‌ ಆಸ್ತಿಯನ್ನು ಲೀಜ್‌ ದಾರರಿಗೆ ಮಾರಾಟ ಮಾಡಲು ನಗರಸಭೆ ಠರಾವು ಕೈಗೊಳ್ಳಲಾಗಿತ್ತು. ಆಗ ಕಾಂಗ್ರೆಸ್‌ನ ಹಾಜಿಸಾಬ ದಂಡಿನ ಸಹಿತ ಕೆಲ ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸೋಮವಾರ ನಡೆದ ಸಭೆಯಲ್ಲಿ ಹಿಂದಿನ ಸಭೆಯ ನಡಾವಳಿ ಕುರಿತು ಚರ್ಚೆಯ ವೇಳೆ ಇದೇ ವಿಷಯದ ಕುರಿತು ಠರಾವು ಅನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು
ನಮೂದಿಸಲಾಗಿತ್ತು.

ಈ ವೇಳೆ ಕಾಂಗ್ರೆಸ್‌ನ ಹಾಜಿಸಾಬ ದಂಡಿನ ಮಾತನಾಡಿ, ಕಾಟನ್‌ ಮಾರ್ಕೆಟ್‌ ಮಾರಾಟದ ವಿಷಯದಲ್ಲಿ ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಆದರೆ, ಸರ್ವಾನುಮತದಿಂದ ಠರಾವು ಪಾಸ್‌ ಮಾಡಲಾಗಿದೆ ಎಂದು ಬರೆಯಲಾಗಿದೆ. ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ. ಈ ಆಸ್ತಿ ಮಾರಾಟ ಮಾಡಬೇಕಾದರೆ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ಒತ್ತಾಯಿಸಿದರು.

ದಂಡಿನ ಅವರ ಈ ಮಾತಿನಿಂದ ಕೆರಳಿದ ಶಾಸಕ ಡಾ|ವೀರಣ್ಣ ಚರಂತಿಮಠ, ಕಾಂಗ್ರೆಸ್‌ನವರಿಂದಲೇ ಇಡೀ ಕಾಟನ್‌ ಮಾರ್ಕೆಟ್‌ ಹಾಳಾಗಿದೆ. ಸಾವಿರಾರು ಕುಟುಂಬಗಳು ಕೆಲಸ ಕಳೆದುಕೊಂಡಿವೆ. ಬಾಗಲಕೋಟೆಯ ಮಾರುಕಟ್ಟೆಯನ್ನೇ ಬೀದಿಗೆ ತರಲಾಗಿದೆ. ಒಂದೇ ಜಾಗದಲ್ಲಿ 10 ವರ್ಷ ನಿರಂತರವಾಗಿ ವಾಸ ಮಾಡಿದರೆ, ಆ ಜಾಗೆಯನ್ನು ಉಪಯೋಗ ಮಾಡುತ್ತಿದ್ದರೆ ಆಗ ಜಾಗ ಅವರಿಗೆ ನೀಡಬೇಕೆಂಬುದು ಸುಪ್ರೀಂ ಕೋರ್ಟ್‌ ಆದೇಶ ಇದೆ.

ಆದರೆ, ಹಿಂದಿನ ನಗರಸಭೆ ಪೌರಾಯುಕ್ತರೊಂದಿಗೆ ಕೂಡಿಕೊಂಡು ಕಾಂಗ್ರೆಸ್‌ನವರು ಬಾಗಲಕೋಟೆ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಹೀಗಾಗಿ ವ್ಯಾಪಾರಸ್ಥರು ತೀವ್ರ ತೊಂದರೆ ಅನುಭವಿಸಿದ್ದಾರೆ ಎಂದು ಹಾಜಿಸಾಬ ದಂಡಿನ ಅವರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಹಾಜಿಸಾಬ ದಂಡಿನ ಮತ್ತು ಶಾಸಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಶಾಸಕರು, ಸದಸ್ಯ ದಂಡಿನ ಅವರಿಗೆ ಏರಿದ ಧ್ವನಿಯಲ್ಲಿ ಮಾತನಾಡಿ, ಇಲ್ಲಿ ಜಾಸ್ತಿ ಮಾತನಾಡಬೇಡ ಎಂದರು. ಮಧ್ಯ ಪ್ರವೇಶಿಸಿದ ಕಾಂಗ್ರೆಸ್‌ನ ಇನ್ನೋರ್ವ ಹಿರಿಯ ಸದಸ್ಯ ಚನ್ನವೀರ ಅಂಗಡಿ, ನೀವು ಶಾಸಕರು, ನಾವು ನಗರಸಭೆ ಸದಸ್ಯರು. ನಮಗೂ ಗೌರವವಿದೆ.

ಸದಸ್ಯರೆಂದರೆ ಬಾಯಿಗೆ ಬಂದಂತೆ ಮಾತನಾಡಬೇಡಿ ಎಂದರು. ಆಗ ಕಾಂಗ್ರೆಸ್‌ ಸದಸ್ಯರು, ಶಾಸಕರು ಹಾಗೂ ಬಿಜೆಪಿ ಸದಸ್ಯರ ಮಧ್ಯ ವಾಗ್ವಾದ ನಡೆಯಿತು. ತೀವ್ರ ವಾಗ್ವಾದ ನಡೆಯುತ್ತಿರುವಾಗ ವಿಧಾನಪರಿಷತ್‌ ಸದಸ್ಯರಾಗಿ, ಮೊದಲ ಬಾರಿಗೆ ನಗರಸಭೆ ಸಾಮಾನ್ಯ ಸಭೆಗೆ ಹಿರಿಯ ಮುಖಂಡ ಪಿ.ಎಚ್‌. ಪೂಜಾರ ಆಗಮಿಸಿದರು. ತೀವ್ರ ಗದ್ದಲ-ವಾಗ್ವಾದ ನಡೆದಿದ್ದ ಸಭೆಯಲ್ಲಿ ಸಂಪೂರ್ಣ ಶಾಂತ ವಾತಾವರಣ ಸೃಷ್ಟಿಯಾಯಿತು. ಬಳಿಕ ಈ ಗಲಾಟೆಗೆ ಏನು ಕಾರಣ ಎಂದು ಪಿ.ಎಚ್‌. ಪೂಜಾರ ಅವರು ಕೆಲ ಸದಸ್ಯರಿಂದ ಮಾಹಿತಿ ಪಡೆದುಕೊಂಡರು.

12.41 ಲಕ್ಷ ಉಳಿತಾಯ ಬಜೆಟ್‌: ಬಳಿಕ ನಗರಸಭೆಯು 2022-23 ನೇ ಸಾಲಿಗೆ 12.41 ಲಕ್ಷ ರೂ.ಗಳ ಉಳಿತಾಯ ಬಜೆಟ್‌ ಮಂಡಿಸಲಾಯಿತು. ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅವರು, 85.03 ಕೋಟಿ ರೂ. ನಿರೀಕ್ಷಿತ ಆದಾಯಗಳು, 84.91 ಕೋಟಿ ರೂ. ನಿರೀಕ್ಷಿತ ವೆಚ್ಚಗಳೊಂದಿಗೆ ಈ ಬಾರಿ ನಗರಸಭೆ 12.41 ಲಕ್ಷ ರೂ.ಗಳ ಉಳಿತಾಯ ಬಜೆಟ್‌ ಮಂಡಿಸಿದರು. ಇದಕ್ಕೆ ಸಭೆ ಸರ್ವಾನುಮತದ ಒಪ್ಪಿಗೆ ಸೂಚಿಸಿತು.

ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ, ನೂತನ ಸಭಾಪತಿ ಅಂಬಾಜಿ ಜೋಶಿ, ನಗರಸಭೆ ಆಯುಕ್ತ ವಿ. ಮುನಿಶಾಮಪ್ಪ, ಸದಸ್ಯರಾದ ವಿ.ವಿ. ಶಿರಗಣ್ಣವರ, ಯಲ್ಲಪ್ಪ ನಾರಾಯಣಿ ಮುಂತಾದವರಿದ್ದರು.

ಸಭಾಪತಿಯಾಗಿ ಅಂಬಾಜಿ ಆಯ್ಕೆ
ನಗರಸಭೆಗೆ ನೂತನ ಸಭಾಪತಿಯಾಗಿ ಸದಸ್ಯ ಅಂಬಾಜಿ ಜೋಶಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸದಸ್ಯ ಯಲ್ಲಪ್ಪ ನಾರಾಯಣಿ ಅವರು ಸದಸ್ಯ ಅಂಬಾಜಿ ಜೋಶಿ ಅವರ ಹೆಸರು ಸೂಚಿಸಿದರು. ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.