ಬಾಳೆ ಬೆಳೆದವರ ಬದುಕಿಗೆ ಕೋವಿಡ್ 19 ಕಂಟಕ!


Team Udayavani, Apr 1, 2020, 3:55 PM IST

bk-tdy-1

ಬಾಗಲಕೋಟೆ: ಜಿಲ್ಲೆಯ ರೈತರು ಕಷ್ಟಪಟ್ಟು ದುಡಿದು ಇನ್ನೇನು ಹೊಟ್ಟೆತುಂಬ ಊಟ ಮಾಡಬೇಕೆನ್ನುವಷ್ಟರಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಕೋವಿಡ್ 19 ಕಂಟಕವಾಗಿ ಕಾಡುತ್ತಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರವಾಹದಿಂದ ನಲುಗಿದ್ದ ಜಿಲ್ಲೆಯ ರೈತರು, ಇದೀಗ ಕೋವಿಡ್ 19 ವೈರಸ್‌ ಭೀತಿಯಿಂದ ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ ಕಂಗಾಲಾಗಿದ್ದಾರೆ.

ಜನರ ಕೈಗೆ ಸಿಗ್ತಿಲ್ಲ ; ರೈತರಿಗೆ ಮಾರಲು ಆಗ್ತಿಲ್ಲ : ಜನರಿಗೆ ತರಕಾರಿ, ಹಣ್ಣು ಎಲ್ಲವೂ ಬೇಕಿವೆ. ಆದರೆ, ಖರೀದಿ ಮಾಡಲು ಆಗುತ್ತಿಲ್ಲ. ಮಾರುಕಟ್ಟೆಗಳು ಸಂಪೂರ್ಣ ಬಂದ್‌ ಆಗಿವೆ. ಇನ್ನು ಕಷ್ಟಪಟ್ಟು ಬೆಳೆದ ರೈತರೂ ಮಾರಾಟ ಮಾಡಲು ಸಿದ್ಧರಿದ್ದಾರೆ. ಹಾಕಿರುವ ಹಣವಾದರೂ ಬರಲಿ ಎಂದು ತುಡಿಯುತ್ತಿದ್ದಾರೆ. ಆದರೆ, ಅವರಿಗೆ ಮಾರಾಟ ಮಾಡಲು ಆಗುತ್ತಿಲ್ಲ.

ಯಾವ ಬೆಳೆ ಎಷ್ಟು ?: ಜಿಲ್ಲೆಯಲ್ಲಿ 56,486.56 ಹೆಕ್ಟೇರ್‌ ಪ್ರದೇಶದಲ್ಲಿ ತರಕಾರಿ ಹಾಗೂ ವಿವಿಧ ಹಣ್ಣು ಬೆಳೆ ಬೆಳೆಯಲಾಗುತ್ತದೆ. 665.45 ಹೆಕ್ಟೇರ್‌ ಮಾವು, 1250 ಹೆಕ್ಟೇರ್‌ ಲಿಂಬೆ, 358.37 ಸಪೋಟ, 2911 ಹೆಕ್ಟೇರ್‌ ದಾಳಿಂಬೆ, 3165 ಹೆಕ್ಟೇರ್‌ ದ್ರಾಕ್ಷಿ, 520ರಿಂದ 700 ಹೆಕ್ಟೇರ್‌ ಕಲ್ಲಂಗಡಿ ಹೀಗೆ ವಿವಿಧ ಬೆಳೆ ಬೆಳೆಯಲಾಗಿದೆ. ತೋಟಗಾರಿಕೆ ಇಲಾಖೆಯ ಪ್ರಕಾರ 10233.31 ಹೆಕ್ಟೇರ್‌ ಪ್ರದೇಶದಲ್ಲಿ ವಿವಿಧ ಹಣ್ಣು ಬೆಳೆಯುತ್ತಿದ್ದು, ಇದರಿಂದ 2,18,596.78 ಮೆಟ್ರಿಕ್‌ ಟನ್‌ ಉತ್ಪಾದನೆಯಾಗುತ್ತದೆ. ಇದರಿಂದ 48047.22 ಲಕ್ಷ ವಾರ್ಷಿಕ ಮೌಲ್ಯದ ಹಣ್ಣು ಬೆಳೆ ಮಾರುಕಟ್ಟೆಗೆ ಬರುತ್ತಿತ್ತು. ಆದರೆ, ಈ ಬಾರಿ ಇಷ್ಟೊಂದು ಬೆಳೆ ಬೆಳೆದರೂ ಅದಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗದ ಪರಿಸ್ಥಿತಿ ಬಂದೋದಗಿದೆ.

ಹಾಪ್‌ಕಾಮ್ಸ್‌ ಸಕ್ರಿಯವಾಗಲಿ: ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲೆಂದೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಹಾಪ್‌ಕಾಮ್ಸ್‌ ಇವೆ. ಸರ್ಕಾರದ ಅಧೀನದಲ್ಲೇ ಬರುವ ಈ ಸಂಸ್ಥೆಗಳೂ, ಕೋವಿಡ್ 19  ಭೀತಿಗೆ ಯಾವುದೇ ಕಾರ್ಯ ಮಾಡದ ಅನಿವಾರ್ಯತೆಯಲ್ಲಿ ಸಿಲುಕಿವೆ. ಆದರೆ, ತಕ್ಷಣಕ್ಕೆ ಹಾನಿಯಾಗುವ ಬಾಳೆ, ಕಲ್ಲಂಗಡಿ, ಟೊಮ್ಯಾಟೋ, ಬದನೆಕಾಯಿ ಸಹಿತ ವಿವಿಧ ತರಕಾರಿ ಮಾರಾಟದ ವ್ಯವಸ್ಥೆಗೆ ಹಾಪ್‌ಕಾಮ್ಸ್‌ ಮೂಲಕ ವ್ಯವಸ್ಥೆ ಮಾಡಲು ಅವಕಾಶವಿದೆ.

ತೋಟಗಾರಿಕೆ ಬೆಳೆ ಬೆಳೆಯುವ ರೈತರು ತೀವ್ರ ಸಂಕಷ್ಟದಲ್ಲಿದ್ದೇವೆ. ಪ್ರವಾಹದಿಂದ ಚೇತರಿಸಿಕೊಳ್ಳಲಾಗದ ರೈತರು, ಈಗ ಮತ್ತೆ ಕೋವಿಡ್ 19 ಭೀತಿಯಿಂದ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಂಗಾಲಾಗಿದ್ದಾರೆ. ಹಣ್ಣು, ತರಕಾರಿ ಮಾರಾಟಕ್ಕೆ ಜಿಲ್ಲಾಡಳಿತ ಪರವಾನಿಗೆ ನೀಡಿದೆಯಾದರೂ, ಬೇರೆ ಬೇರೆ ಕಡೆ ಪೂರೈಕೆ ಮಾಡುವಷ್ಟು ವಿವಿಧ ಹಣ್ಣು ನಮ್ಮ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಹೀಗಾಗಿ ಎಲ್ಲೂ ಮಾರುಕಟ್ಟೆ ವ್ಯವಸ್ಥೆ ಇಲ್ಲ. ಕೊಪ್ಪಳದ ಮಾದರಿಯಂತೆ ಹಾಪ್‌ಕಾಮ್ಸ್‌ ನಮ್ಮ ನೆರವಿಗೆ ಬರಬೇಕು.  ಬಿ.ಎಂ. ದೇಸಾಯಿ, ಅಧ್ಯಕ್ಷ, ಕೃಷಿಕ ಸಮಾಜ, ಬಾಗಲಕೋಟೆ

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.