ಕೋವಿಡ್ ಜಾಗೃತಿ ಮೂಡಿಸಿದ ಸಿಇಒ
Team Udayavani, May 21, 2020, 10:35 AM IST
ಶಿರೂರ: ಕೋವಿಡ್ ಮಹಾಮಾರಿ ತಡೆಗಟ್ಟಲು ಪ್ರತಿಯೊಬ್ಬರು ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.
ಶಿರೂರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೋವಿಡ್ ಜಾಗೃತಿ ಹಾಗೂ ಸ್ವಚ್ಛತೆ ಅರಿವು ಮೂಡಿಸಿದರು. ನಂತರ ಗ್ರಾಮದ ಬಸ್ ನಿಲ್ದಾಣದ ಹತ್ತಿರ, ಕೆನರಾ ಬ್ಯಾಂಕ್, ಹೊಸಭಾವಿ ಹತ್ತಿರ, ಗ್ರಾಪಂ ಮುಂಭಾಗ, ಹೀಗೆ ಗ್ರಾಮದಲ್ಲಿ ಸಂಚರಿಸಿ ಕೋವಿಡ್ ಜಾಗೃತಿ ಮೂಡಿಸಿದರು. ಮಾಸ್ಕ್ ಹಾಕದೆ ಬೈಕ್ ಮೇಲೆ ಸಂಚರಿಸುವವರಿಗೆ ದಂಡ ವಿಧಿಸಿದರು. ನಂತರ ದುರ್ಗದ ಬೈಲಿನಲ್ಲಿನ ಮುಂಭಾಗದಿಂದ ಕೃಷಿಗಳಿಗೆ ತೆರಳುತ್ತಿದ್ದ ಅಜ್ಜಿಗೆ ಮಾಸ್ಕ್ ಹಾಕಿ ಅರಿವು ಮೂಡಿಸದರು.
ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಮಹಿಳಾ ಸೌಚಾಲಯವನ್ನು ತೆರುವುಗೊಳಿಸಿ ಪಕ್ಕದಲ್ಲಿಯೇ ಇರುವ ಲಂಡಿ ಹಳ್ಳವನ್ನು ಸcತ್ಛಗೊಳಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ಚರಂಡಿ ನಿರ್ಮಾಣ ಮಾಡುವಂತೆ ಗ್ರಾಪಂ ಪಿಡಿಒ ಅಮರೇಗೌಡ ಜಾರಡ್ಡಿ ಅವರಿಗೆ ಆದೇಶ ಮಾಡಿದರು. ತಾಪಂ ಇಒ ಎನ್.ವೈ. ಬಸರಿಗಿಡದ, ಪಿಡಿಒ ಅಮರೇಗೌಡ ಜಾರಡ್ಡಿ, ಗ್ರಾಪಂ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು