ಬಾಗಲಕೋಟೆ ಜಿಲ್ಲೆಯಲ್ಲಿ ಕೈ ಮೀರಿದ ಕೋವಿಡ್ ಸೋಂಕು


Team Udayavani, Oct 10, 2020, 5:00 PM IST

ಬಾಗಲಕೋಟೆ ಜಿಲ್ಲೆಯಲ್ಲಿ ಕೈ ಮೀರಿದ ಕೋವಿಡ್ ಸೋಂಕು

ಬಾಗಲಕೋಟೆ: ಕೊರೊನಾ ವೈರಸ್‌ ಜಿಲ್ಲೆಯಲ್ಲಿ ನಿತ್ಯವೂ ಶತಕ ದಾಟುತ್ತಿದೆ. ಈವರೆಗೆ 11,288 ಜನರಿಗೆ ಸೋಂಕು ತಗುಲಿದ್ದು,
ಅದರಲ್ಲಿ ಗುಣಮುಖ ಪ್ರಮಾಣವೂ ಇದೆ. ಆದರೆ, ಮಾ.31ರಂದು ಜಿಲ್ಲೆಗೆ ಎಂಟ್ರಿ ಕೊಟ್ಟ ಈ ಸೋಂಕು ಈವರೆಗೆ ನಿಯಂತ್ರಣಕ್ಕೆ ಬಂದಿಲ್ಲ. ಕೆಮ್ಮು, ನೆಗಡಿ, ಜ್ವರ, ಉಸಿರಾಟ ತೊಂದರೆ ಇದ್ದರೆ ಮಾತ್ರ ಕೊರೊನಾ ದೃಢಪಡುತ್ತಿತ್ತು. ಆದರೆ, ಈಗ ಯಾವುದೇ ಲಕ್ಷಣ ಇಲ್ಲದಿದ್ದರೂ ತಪಾಸಣೆಗೆ ಒಳಗಾದಾಗ ಸೋಂಕು ಖಚಿತವಾಗುತ್ತಿದೆ. ಅಲ್ಲದೇ ಸೋಂಕು ಸಮುದಾಯದಲ್ಲಿ ಹರಡಿದ್ದು, ಯಾರಿಗೆ ಸೋಂಕಿದೆ ಎಂಬುದೂ ತಿಳಿಯದ ಪರಿಸ್ಥಿತಿ ಇದೆ. ಹೀಗಾಗಿ ಪ್ರತಿಯೊಬ್ಬರೂ ಮಾಸ್ಕ ಧರಿಸಿ ಎಂದು ಎಚ್ಚರಿಕೆ ನೀಡಿದರೂ, ದಂಡ ವಸೂಲಿ ಮಾಡುತ್ತಿದ್ದರೂ ಜನರು ಮಾತ್ರ ಕೊರೊನಾ ನಮಗೆ ಬರಲ್ಲ ಎಂಬ ಅತಿಯಾದ ವಿಶ್ವಾಸದಲ್ಲೇ ಮುಂದುವರಿದಿದ್ದಾರೆ.

1.20 ಲಕ್ಷ ದಾಟಿದ ತಪಾಸಣೆ: ಜಿಲ್ಲೆಯಲ್ಲಿ 9,50,111 ಪುರುಷರು, 9,39,641 ಮಹಿಳೆಯರು ಸೇರಿ ಒಟ್ಟು 18,89,752 ಜನಸಂಖ್ಯೆ
ಇದ್ದಾರೆ. ಅಲ್ಲದೇ 602 ಹಳ್ಳಿಗಳು, 15 ನಗರ ಸ್ಥಳೀಯ ಸಂಸ್ಥೆಗಳು ಸಹಿತ ಒಟ್ಟು 1027 (ತಾಂಡಾ, ದೊಡ್ಡಿ, ಇತರೆ ಸೇರಿ) ಜನ
ವಸತಿ ಪ್ರದೇಶಗಳಿವೆ. ಒಟ್ಟು ಜನಸಂಖ್ಯೆಯಲ್ಲಿ 12,91,906 ಜನರು ಗ್ರಾಮೀಣ ಪ್ರದೇಶದಲ್ಲಿದ್ದರೆ, 5,97,846 ಜನರು ನಗರ
ಪ್ರದೇಶದಲ್ಲಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈಗ ಪೊಲೀಸ್‌ ಇಲಾಖೆ, ನಗರಸಭೆ-ಪುರಸಭೆ, ಪಪಂ ಸಿಬ್ಬಂದಿ, ಪೌರ ಕಾರ್ಮಿಕರು, ವಿವಿಧ
ಸರ್ಕಾರಿ ಕಚೇರಿಗಳ ಸಿಬ್ಬಂದಿಯನ್ನು ರ್‍ಯಾಂಡಮ್‌ ಆಗಿ ಕೊರೊನಾ ತಪಾಸಣೆ ಮಾಡಲಾಗಿದೆ. ಬಾಗಲಕೋಟೆ ನಗರಸಭೆಯ 217 ಜನ ಸಿಬ್ಬಂದಿ-ಪೌರ ಕಾರ್ಮಿಕರ ತಪಾಸಣೆ ವೇಳೆ 45 ಜನರಿಗೆ ಕೊರೊನಾ ಖಚಿತವಾಗಿತ್ತು. ಇವರಿಗೆಲ್ಲ ಯಾವುದೇ ಲಕ್ಷಣ ಇಲ್ಲದಿದ್ದರೂ ಸೋಂಕು ತಗುಲಿತ್ತು.

ಸದ್ಯ ಜಿಲ್ಲೆಯಲ್ಲಿ 1,20,738 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ. ಇದರಲ್ಲಿ 1,07,769 ಜನರಿಗೆ ಕೊರೊನಾ ತಗುಲಿಲ್ಲ
ಎಂಬುದು ಸಮಾಧಾನಕರ ಸಂಗತಿ. ಆದರೆ, 11,288 ಜನರಿಗೆ ಈವರೆಗೆ ಸೋಂಕು ಖಚಿತವಾಗಿದ್ದು, ಅದರಲ್ಲಿ 10,501 ಜನರು
ಕೊರೊನಾ ಮುಕ್ತರಾಗಿದ್ದಾರೆ. ಸರ್ಕಾರಿ ಅಧಿಕೃತ ದಾಖಲೆಗಳ ಪ್ರಕಾರ ಈವರೆಗೆ 116 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಮೃತಪಟ್ಟವರ ದಾಖಲೆ ಮಾಡಿಲ್ಲ ಎನ್ನಲಾಗಿದೆ.

359 ಮನೆಯಲ್ಲೇ ಚಿಕಿತ್ಸೆ: ಯಾವುದೇ ಲಕ್ಷಣ ಇಲ್ಲದಿದ್ದರೂ ತಪಾಸಣೆ ವೇಳೆ ಸೋಂಕು ಖಚಿತವಾದ 359 ಜನರು ತಮ್ಮ ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ಕೇರ್‌ ಸೆಂಟರ್‌ ಮತ್ತು ಜಿಲ್ಲಾ ಕೋವಿಡ್‌-19 ಆಸ್ಪತ್ರೆಯಲ್ಲಿ ಮಾತ್ರ ಪಡೆದು ಹೋಂ ಐಸೋಲೇಶನ್‌ ಗೆ ಒಳಗಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 5 ಕೋವಿಡ್‌ ಕೇರ್‌ ಸೆಂಟರ್‌ ಇದ್ದು, ಅವುಗಳಲ್ಲಿ 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಏ.2ರಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಿದ್ದು, ಸದ್ಯ 114 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ 27 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ಕ‌ಳೆದ ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಮೊದಲು ನಿತ್ಯ
180ರಿಂದ 200ಕ್ಕೂ ಹೆಚ್ಚು ಜನರಿಗೆ ಸೋಂಕು ಖಚಿತವಾಗುತ್ತಿತ್ತು. ಈಗ 95ರಿಂದ 110ರವರೆಗೆ ಸೋಂಕಿತರು
ಪತ್ತೆಯಾಗುತ್ತಿದ್ದಾರೆ. ರ್‍ಯಾಂಡಮ್‌ ತಪಾಸಣೆ ಸಹಿತ ಜಿಲ್ಲೆಯ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ
ಮಾಡಲಾಗುತ್ತಿದೆ. ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ ಲಭ್ಯವಿದೆ. ಜಿಲ್ಲಾ ಕೋವಿಡ್‌
ಆಸ್ಪತ್ರೆ, ಸೋಂಕಿತರಿಗೆ ಅತ್ಯುತ್ತಮವಾಗಿ ಚಿಕಿತ್ಸೆ ನೀಡುತ್ತಿದೆ.
– ಡಾ|ಅನಂತ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.