77 ಜನ ಗುಣಮುಖ : 83 ಜನರಿಗೆ ಕೋವಿಡ್ ದೃಢ
Team Udayavani, Aug 26, 2020, 3:44 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಮಂಗಳವಾರ 77 ಜನ ಕೋವಿಡ್ನಿಂದ ಗುಣಮುಖರಾಗಿದ್ದು, ಹೊಸದಾಗಿ 83 ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5335 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 4498 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕು 27, ಬಾದಾಮಿ 13, ಹುನಗುಂದ 10, ಬೀಳಗಿ 4, ಮುಧೋಳ 20, ಜಮಖಂಡಿ 7 ಹಾಗೂ ಬೇರೆ ಜಿಲ್ಲೆಯ ಇಬ್ಬರು ಇದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 889 ಸ್ಯಾಂಪಲಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 495 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 50566 ಸಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 45233 ನೆಗಟಿವ್, 5335 ಪಾಸಿಟಿವ್ ಬಂದಿದ್ದು, 66 ಜನ ಮೃತಪಟ್ಟಿದ್ದಾರೆ. 771 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿವರೆಗೆ ಒಟ್ಟು 210 ಸ್ಯಾಂಪಲ್ಗಳು ರಿಜೆಕ್ಟ್ ಆಗಿವೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ 585 ಇದ್ದು, ಇನ್ಸ್ಟಿಟ್ಯೂಶನ್ ಕ್ವಾರಂಟೈನ್ನಲ್ಲಿದ್ದ 8455 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮಹಾಲಿಂಗಪುರದಲ್ಲಿ ನಾಲ್ವರಿಗೆ ಕೋವಿಡ್ ಸೋಂಕು ದೃಢ : ಪಟ್ಟಣದಲ್ಲಿ ನಾಲ್ಕು ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್ ಸೋಂಕಿತರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ. 16 ವರ್ಷದ ಬಾಲಕಿ, 20 ವರ್ಷದ ಯುವತಿ, 54 ವರ್ಷದ ಮಹಿಳೆ, 45 ವರ್ಷದ ಪುರುಷ ಸೇರಿದಂತೆ ನಾಲ್ವರಿಗೆ ಪಾಸಿಟಿವ್ ದೃಢಪಟ್ಟಿದೆ. ಪಟ್ಟಣದ ಸಾಧುನಗುಡಿ ಹತ್ತಿರದ ನಿವಾಸಿ 45 ವರ್ಷದ ಪುರುಷ ಸೋಮವಾರ ರಾತ್ರಿಯೇ ಬಾಗಲಕೋಟೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಪುರಸಭೆಯ ಅಧಿ ಕಾರಿಗಳು ಕೊರೊನಾ ಸೋಂಕಿತರಿಗೆ ಸಂಬಂಧಿ ಸಿದ ಮನೆಗಳನ್ನು ಸೀಲ್ಡೌನ್ ಮಾಡಿ, ಮನೆಯ ಸದಸ್ಯರನ್ನು ಹೋಮ್ಕ್ವಾರಂಟೈನ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್