ಕೋವಿಡ್ ಆತಂಕ; 1.68 ಲಕ್ಷ ಜನ ಹೈ ರಿಸ್ಕ್!

5,205 ಜನರಿಗೆ ಜ್ವರ-ಕೆಮ್ಮು-ನೆಗಡಿ

Team Udayavani, Jul 5, 2020, 3:33 PM IST

ಕೋವಿಡ್ ಆತಂಕ; 1.68 ಲಕ್ಷ ಜನ ಹೈ ರಿಸ್ಕ್!

ಬಾಗಲಕೋಟೆ: ದಿನೇ ದಿನೇ ಭೀತಿ ಹುಟ್ಟಿಸುತ್ತಲೇ ಇರುವ ಕೋವಿಡ್ ಸೋಂಕು ಜಿಲ್ಲೆಯಲ್ಲೂ ತನ್ನ ಅಟ್ಟಹಾಸ ಮುಂದುವರಿಸಿದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ನಡೆಸಿದ ಆರೋಗ್ಯ ಸಮೀಕ್ಷೆಯಲ್ಲಿ ಮತ್ತಷ್ಟು ಭೀತಿಯ ಅಂಶಗಳು ಹೊರ ಬಿದ್ದಿದ್ದು, ಜನರು ಎಚ್ಚೆತ್ತುಕೊಳ್ಳದಿದ್ದರೆ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಎದುರಾಗಿದೆ.

ಮುಂಗಾರು ಮಳೆಗಾಲ ಆರಂಭದ ದಿನಗಳಾಗಿದ್ದರಿಂದ ಈ ಸಂದರ್ಭದಲ್ಲಿ ಕೆಮ್ಮು-ನೆಗಡಿ-ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಅದರಲ್ಲೂ ಬಿಪಿ, ಶುಗರ್‌ ಇದ್ದವರು ಸ್ವಲ್ಪ ನಿರ್ಲಕ್ಷ್ಯ ಮಾಡಿದರೂ ಜ್ವರ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಇಡೀ ಜಿಲ್ಲೆಯ ಅಷ್ಟೂ ಕುಟುಂಬಗಳ ಸಮೀಕ್ಷೆ ನಡೆಸಿ ಯಾರಿಗೆ ಯಾವ ರೋಗದ ಲಕ್ಷಣಗಳಿವೆ. ಅವರಿಗೆ ಯಾವ ರೀತಿ ಆರೋಗ್ಯ ಕಾಳಜಿ ವಹಿಸಬೇಕು ಎಂಬುದರ ಕುರಿತು ಸಲಹೆ ನೀಡಲು ಜಿಲ್ಲಾಡಳಿತ ನಡೆಸಿದ ಸಮೀಕ್ಷೆ ನೆರವಾಗಲಿದೆ.

ಜಿಲ್ಲೆಯಾದ್ಯಂತ ಕಳೆದ ಒಂದೂವರೆ ತಿಂಗಳಿಂದ ಮತಗಟ್ಟೆವಾರು ಬಿಎಲ್‌ಒಗಳ ನೇತೃತ್ವದಲ್ಲಿ ಜಿಲ್ಲೆಯ 9 ತಾಲೂಕು ವ್ಯಾಪ್ತಿಯಲ್ಲಿ 3,61,729 ಕುಟುಂಬಗಳಿದ್ದು, ಅದರಲ್ಲಿ 3,50,956 ಕುಟುಂಬಗಳ ಆರೋಗ್ಯ ಸಮೀಕ್ಷೆ ನಡೆಸಲಾಗಿದೆ. ಅದರಲ್ಲಿ 1,68,909 ಜನರು ಹೈ ರಿಸ್ಕ್ ನಲ್ಲಿದ್ದಾರೆ. ಅವರ ಮನೆ ವಿಳಾಸ, ದೂರವಾಣಿ ಸಂಖ್ಯೆ, ವಯಸ್ಸು, ರೋಗಗಳ ಮಾಹಿತಿ ಎಲ್ಲವನ್ನೂ ಪಡೆಯಲಾಗಿದ್ದು, ಅತಿ ಹೈರಿಸ್ಕ್ ಇರುವ ಜನರ ಪಟ್ಟಿ ಮಾಡಿಕೊಂಡು ನಿಯಮಿತವಾಗಿ ದೂರವಾಣಿ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುವ ಕೆಲಸ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಡುತ್ತಿದೆ. ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಮಾಹಿತಿ ಅಳವಡಿಸಲಾಗಿದೆ.

ಮಾರುಕಟ್ಟೆ-ಸಂತೆಯಲ್ಲಿ ರಷ್‌: ಮಾ.22ರಿಂದ ಮೇ 8ರವರೆಗೆ ಕಠಿಣ ಲಾಕ್‌ಡೌನ್‌ ವಿಧಿಸಿದ ವೇಳೆ ಹಲವರು ಹಲವು ರೀತಿಯ ಸಮಸ್ಯೆ ಅನುಭವಿಸಿದ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ತೊಂದರೆ ಮುಂದುವರಿಸುವುದು ಬೇಡ ಎಂಬ ಕಾರಣದಿಂದ ಸರ್ಕಾರ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಲಾಕ್‌ ಡೌನ್‌ ಸಡಿಲಿಕೆವರೆಗೂ ಜಿಲ್ಲೆಯಲ್ಲಿ 91 ಜನರಿಗೆ ಮಾತ್ರ ಸೋಂಕು ತಗುಲಿತ್ತು. ಏ.2ರಂದು ಜಿಲ್ಲೆಯಲ್ಲಿ ಮೊದಲ ಸೋಂಕಿತ ಪತ್ತೆಯಾಗಿದ್ದು, ಮೇ 8ರವರೆಗೆ ಸೋಂಕಿತರ ಸಂಖ್ಯೆ ಕೇವಲ 91ರವರೆಗೆ ಇತ್ತು. ಆದರೆ, ಮೇ 8ರಿಂದ ಜು.4ರ ತನಕ ಸೋಂಕಿತರ ಸಂಖ್ಯೆ ಬರೋಬ್ಬರಿ 226ಕ್ಕೆ ಏರಿಕೆಯಾಗಿವೆ.

ಈಗಲಾದರೂ ಎಚ್ಚೆತ್ತುಕೊಳ್ಳಿ: ಕೆಮ್ಮು-ನೆಗಡಿ, ಜ್ವರ, ಉಸಿರಾಟದ ತೊಂದರೆಯಂತಹ ಸಾಮಾನ್ಯ ರೋಗದ ಲಕ್ಷಣ ಇರುವ ಜನರಿಗೂ ಕೊರೊನಾ ಕಾಣಿಸಿಕೊಂಡಿದೆ. ಈ ವರೆಗೆ ಆರಂಭದಲ್ಲಿ ಸೋಂಕಿತರ ಸಂಪರ್ಕ, ಮಹಾರಾಷ್ಟ್ರ ಸಹಿತ ಬೇರೆ ರಾಜ್ಯದಿಂದ ಬಂದವರಲ್ಲಿ ಕೋವಿಡ್ ಕಾಣಿಸಿಕೊಂಡಿತ್ತು. ಆದರೆ ಇದೀಗ ಎಲ್ಲೂ ಪ್ರಯಾಣ ಮಾಡದ, ರೋಗದ ಲಕ್ಷಣವೂ ಇಲ್ಲದ ಹಲವು ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಅಂತಹ ವ್ಯಕ್ತಿಗಳಿಗೆ ಈ ಸೋಂಕು ಹೇಗೆ ಬಂತು ಎಂಬುದನ್ನು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗಳೂ ತಮ್ಮ ಪ್ರಯಾಣದ ಹಿನ್ನೆಲೆ ಸರಿಯಾಗಿ ಬಿಟ್ಟುಕೊಡುತ್ತಿಲ್ಲ. ಇದು ಕೋವಿಡ್ ನಿಯಂತ್ರಣಕ್ಕೆ ಆಯಾ ಪ್ರದೇಶ ಗುರುತಿಸಿ ಕ್ರಮ ಕೈಗೊಳ್ಳಲು ಹಿನ್ನಡೆ ಆಗುತ್ತಿದೆ. ಜನರು, ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಕೆಯನ್ನು ತಮ್ಮ ದೈನಂದಿನ ಕಾರ್ಯಗಳಲ್ಲಿ ಒಂದು ಎಂದು ಭಾವಿಸಲೇಬೇಕಿದೆ ಎಂಬ ಮಾತು ಕೇಳಿ ಬರುತ್ತಿದೆ.

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ 3,50,956 ಕುಟುಂಬಗಳ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗಿದೆ. ಅದರಲ್ಲಿ 1.68 ಲಕ್ಷ ಜನರು ಹೈ ರಿಸ್ಕ್ನಲ್ಲಿ ಇರುವುದನ್ನು ಗುರುತಿಸಿದ್ದು, ಅವರಿಗೆ ಆರೋಗ್ಯ ತಿಳವಳಿಕೆ ನೀಡಲಾಗಿದೆ. 5,205 ಜನರಿಗೆ ಕೆಮ್ಮು, ನೆಗಡಿ, ಜ್ವರ ಲಕ್ಷಣಗಳಿದ್ದು, ಅವರಿಗೂ ಅಗತ್ಯ ತಿಳಿವಳಿಕೆ ನೀಡಿದ್ದೇವೆ. ಜನರು ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಜಾಗೃತಿ ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಮಾಡಿಕೊಳ್ಳಬೇಕು.  ಡಾ| ಅನಂತ ದೇಸಾಯಿ, ಡಿಎಚ್‌ಒ, ಬಾಲಕೋಟೆ

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.