ಆಸ್ಪತ್ರೆ ಸಿಬ್ಬಂದಿಗೆ ಸೋಂಕು: ಗರ್ಭಿಣಿಯರ ಪರದಾಟ

ಮುಖ್ಯ ವೈದ್ಯಾಧಿಕಾರಿ ಸೇರಿ ಏಳು ಜನ ಸಿಬ್ಬಂದಿಗೆ ಕೊರೊನಾ­! ತಾಲೂಕಿನಲ್ಲಿದ್ದಾರೆ 967 ಗರ್ಭಿಣಿಯರು

Team Udayavani, May 12, 2021, 11:33 AM IST

hjghjygyutyu

ಗುಳೇದಗುಡ್ಡ: ಸರಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿ ಕಾರಿ ಸೇರಿ ಏಳು ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದರಿಂದ ಆಸ್ಪತ್ರೆ ಸಂಪೂರ್ಣವಾಗಿ ಬಂದ್‌ ಆಗಿದ್ದು, ಗರ್ಭಿಣಿಯರು ಪರದಾಡುವಂತಾಗಿದೆ.

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ರೋಗಿಗಳನ್ನು ಡಿಸ್ಚಾರ್ಜ್‌ ಮಾಡಿದ್ದು, ತುರ್ತು ಚಿಕಿತ್ಸೆ ಮಾತ್ರ ನೀಡಲಾಗುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ ಒಬ್ಬರು ಸಾಮಾನ್ಯ ರೋಗಳಿಗೆ ಚಿಕಿತ್ಸೆ ನೀಡುವ, ಚಿಕ್ಕಮಕ್ಕಳ ವೈದ್ಯ, ಆಯುಷ್‌ ಹಾಗೂ ಅರವಳಿಕೆ ತಜ್ಞ, ಶುಶ್ರೂಷಕರು, ಸಿಬ್ಬಂದಿ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ.

ಹೆರಿಗೆಗೆ ಪ್ರಸಿದ್ಧ ಆಸ್ಪತ್ರೆ: ಪಟ್ಟಣದ ಸರಕಾರಿ ಆಸ್ಪತ್ರೆಯಿಂದ ಗರ್ಭಿಣಿಯರಿಗೆ ಅನುಕೂಲಕರ ವಾಗಿದ್ದು, ಇಲ್ಲಿಯ ಮುಖ್ಯ ವೈದ್ಯಾಧಿ ಕಾರಿ ಡಾ| ನಾಗರಾಜ ಕುರಿ ಹಾಗೂ ವೈದ್ಯರು ಗರ್ಭಿಣಿಯರಿಗೆ ಸುಲಭವಾಗಿ ಹೆರಿಗೆ ಮಾಡುತ್ತ ಬಡವರಿಗೆ ಸರಕಾರಿ ಆಸ್ಪತ್ರೆ ಹತ್ತಿರವಾಗುವಂತೆ ಮಾಡಿದ್ದಾರೆ. ಸರಕಾರಿ ಆಸ್ಪತ್ರೆಯನ್ನು ಹೆರಿಗೆಗಾಗಿ ಮೀಸಲಿಟ್ಟಿದ್ದು, ಇದರಿಂದ ಇಲ್ಲಿ ನಿತ್ಯವು ಗರ್ಭಿಣಿಯರಿಂದಲೇ ಆಸ್ಪತ್ರೆ ತುಂಬಿರುತ್ತಿತ್ತು. ಆದರೆ ಈ ವಿಭಾಗದ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಚಿಕ್ಕಮಕ್ಕಳ ವೈದ್ಯರೇ ಆಸರೆ: ಸದ್ಯ ಎರಡು ದಿನಗಳಿಂದ ಚಿಕ್ಕಮಕ್ಕಳ ವೈದ್ಯ ಡಾ| ಕುಳಗೇರಿ, ಡಾ| ಕವಿತಾ ಸಂಕ್‌, ಅರವಳಿಕೆ ತಜ್ಞ ಅನಿಲ ಉಕ್ಕಲಿ ಸೇರಿದಂತೆ ಎಲ್ಲ ಸಿಬ್ಬಂದಿ ಗರ್ಭಿಣಿಯರಿಗೆ ಹೆರಿಗೆ ಮಾಡಿಸುತ್ತಿದ್ದಾರೆ. ಈ ವೈದ್ಯರು ಸಹಜ ಹೆರಿಗೆ ಮಾಡಿಸುತ್ತಿದ್ದಾರೆ. ಆದರೂ ಸದ್ಯ ಆಸ್ಪತ್ರೆಗೆ ಮಹಿಳಾ ತಜ್ಞ ವೈದ್ಯರ ಅವಶ್ಯಕತೆ ಇದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ತಾಲೂಕಿನಲ್ಲಿ ಸದ್ಯ 967 ಗರ್ಭಿಣಿಯರಿದ್ದು, ಗುಳೇದಗುಡ್ಡ ಪಟ್ಟಣದಲ್ಲಿ 296 ಗರ್ಭಿಣಿಯರಿದ್ದಾರೆ.

ತಾಲೂಕಿಗೆ 2 ಹೆರಿಗೆ ಆಸ್ಪತ್ರೆ: ಕೋವಿಡ್‌ ಹೆಚ್ಚಳವಾಗುತ್ತಿರುವದರಿಂದ ಗರ್ಭಿಣಿಯರಿಗೆ ಕೋವಿಡ್‌ ತಗುಲಬಾರದೆಂದು ಗುಳೇದಗುಡ್ಡ, ಕೆರೂರು ಆಸ್ಪತ್ರೆಯಲ್ಲಿ ಹೆರಿಗೆಗೆ ಮೀಸಲಿರಿಸಲಾಗಿದೆ. ಅಷ್ಟೇ ಅಲ್ಲದೇ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯು ಹೆರಿಗೆಗೆ ಮಾಡಲಾಗುತ್ತಿದೆ. ಆದರೆ ಅತಿ ಹೆಚ್ಚು ಹೆರಿಗೆಗಳು ಮಾಡುವುದು ಗುಳೇದಗುಡ್ಡ ಸರಕಾರಿ ಆಸ್ಪತ್ರೆಯಲ್ಲಿ. ಬಾದಾಮಿಯಲ್ಲಿನ ಸರಕಾರಿ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಮಾಡಿರುವುದರಿಂದ ಅಲ್ಲಿಯವರು ಸಹ ಇಲ್ಲಿಗೆ ಬರುವಂತಹ ಸ್ಥಿತಿ ಎದುರಾಗಿದೆ. ಈಗ ಇಲ್ಲಿರುವ ವೈದ್ಯರಿಗೂ ಕೊರೊನಾ ಪಾಸಿಟಿವ್‌ ಬಂದಿದ್ದರಿಂದ ಗರ್ಭಿಣಿಯರು ಪರದಾಡುವಂತಾಗಿದೆ.

ವೈದ್ಯರ ನೇಮಕವಾಗಿಲ್ಲ: ಸದ್ಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಯರು ಪರದಾಡುವಂತಾಗಿದ್ದು, ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿಯವರು ಕೂಡಲೇ ತಾತ್ಕಾಲಿಕವಾಗಿ ವೈದ್ಯರನ್ನು ಒದಗಿಸುವಂತೆ ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಜೆಪಿ ಮುಖಂಡರು ಸಹ ವೈದ್ಯರ ನೇಮಕಕ್ಕೆ ಆಗ್ರಹಿಸಿದ್ದರು, ಆದರೆ ಇನ್ನೂ ವೈದ್ಯರ ನೇಮಕವಾಗಿಲ್ಲ. ಕೆಲ ಗರ್ಭಿಣಿಯರಿಗೂ ಕೋವಿಡ್‌ ಕಂಡು ಬಂದಿರುವುದರಿಂದ ಸಿಬ್ಬಂದಿ ಹೆರಿಗೆ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ. ಮುಖ್ಯ ವೈದ್ಯಾಧಿಕಾರಿ ಡಾ| ನಾಗರಾಜ ಕುರಿ ಇದ್ದರೇ ಹೆರಿಗೆಗೆ ಹೆಚ್ಚು ಗರ್ಭಿಣಿಯರು ಬರುತ್ತಿದ್ದರು. ಈಗ ಅದೇ ವೈದ್ಯರು ಕ್ವಾರೈಂಟೈನಲ್ಲಿರುವುದರಿಂದ ಗರ್ಭಿಣಿಯರು ಸಹ ಸರಕಾರಿ ಆಸ್ಪತ್ರೆಗೆ ಬರಲು ಹಿಂಜರಿಕೆ ಪಡುತ್ತಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.