ಹಳ್ಳಿಗೂ ವ್ಯಾಪಿಸಿತೇ ಕೊರೊನಾ?

ಈ ರೀತಿ ಮುಂದುವರಿದರೇ ಹಳ್ಳಿಗಳು ಕೊರೊನಾ ಹಾಟ್‌ಸ್ಪಾಟ್‌ ಆಗುವುದರಲ್ಲಿ ಸಂದೇಹವಿಲ್ಲ.

Team Udayavani, May 3, 2021, 7:08 PM IST

Halli

ಹುನಗುಂದ: ಮನುಕುಲವನ್ನು ಬೆಚ್ಚಿ ಬೀಳಿಸಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್‌ ಕೊರೊನಾ ಸದ್ಯ ವಲಸಿಗರಿಂದ ಗ್ರಾಮೀಣ ಪ್ರದೇಶಕ್ಕೂ ಒಕ್ಕರಿಸಿಕೊಳ್ಳುವ ಎಲ್ಲ ಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೌದು, ಕೊರೊನಾ ಎರಡನೆಯ ಅಲೆಯು ತಾಲೂಕಿನಲ್ಲಿ ನಿತ್ಯ ಕೊರೊನಾ ಪ್ರಕರಣಗಳು ಎರಡಂಕಿ ದಾಟಿ ಮುನ್ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲೂ ಕೊರೊನಾದ ಕರಾಳ ಛಾಯೆ ವ್ಯಾಪಿಸುತ್ತಿದೆ.

ಕೊರೊನಾ ತಡೆಗೆ ಸರ್ಕಾರ ಕೊರೊನಾ ಕರ್ಫ್ಯೂ ಮುಂದುವ ರಿಸಿರುವುದರಿಂದ ಮಹಾರಾಷ್ಟ್ರ ಸೆರಿದಂತೆ ವಿವಿಧ ನಗರಗಳಿಗೆ ತೆರಳಿದ್ದ ವಲಸಿಗರು ತಾಲೂಕಿಗೆ ಮರಳುತ್ತಿದ್ದು, ಸೋಂಕು ಹರಡುವ ಆತಂಕ ಜನರಲ್ಲಿ ಮೂಡಿದೆ. ಅಲ್ಲದೇ ತಾಲೂಕಿನಲ್ಲಿ ದಿನದಿಂದ ದಿನ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ತಾಲೂಕು ಆಡಳಿತ ಗಮನಹರಿಸುತ್ತಿಲ್ಲ ಎಂದು ನಾಗರಿಕರ ಆರೋಪವಾಗಿದೆ.

ಮೊದಲ ಹಂತದ ಕೊರೊನಾ ಸಂದರ್ಭದಲ್ಲಿ ವಲಸಿ ಬಂದ ಜನರನ್ನು ಕನಿಷ್ಠ 14 ರಿಂದ 28 ದಿನಗಳವರಗೆ ಕ್ವಾರಂಟೈನ್‌ ಮಾಡಿ ರೋಗ ಲಕ್ಷಣಗಳು ಕಂಡು ಬರದೇ ಇದ್ದಾಗ ಅವರ ಮನೆ ಕಳುಹಿಸುತ್ತಿದ್ದರು. ಆದರೆ, ಸದ್ಯ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದರೂ ಸಹ ಅವರ ಬಗ್ಗೆ ತಾಲೂಕು ಆಡಳಿತವಾಗಲಿ ಮತ್ತು ಆರೋಗ್ಯ ಇಲಾಖೆಯಾಗಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದ ವಲಸೆ ಬಂದ ಜನರಲ್ಲಿ ರೋಗ ಲಕ್ಷಣಗಳಿದ್ದರೂ ಸಹ ಹಳ್ಳಿಗಳಲ್ಲಿ ಇತರರೊಂದಿಗೆ ಸೇರಿ ಸಂಚರಿಸುತ್ತಿರುವುದರಿಂದ ಇಲ್ಲಿವರೆಗೂ ಸೇಫ್‌ ಆಗಿದ್ದ ಹಳ್ಳಿಗಳಲ್ಲಿ ಈಗ ಕೊರೊನಾದ ಆರ್ಭಟ ಆರಂಭಗೊಂಡಿದೆ.

ಹಳ್ಳಿಗಳು ಯಾವಾಗಲೂ ರೋಗಗಳಿಂದ ಸುರಕ್ಷಿತ ಎಂದು ಹೇಳಲಾಗುತ್ತಿತ್ತು. ಆದರೆ ದುಡಿಯಲು ಹೋಗಿ ಬಂದ ಜನರು ಗ್ರಾಮಗಳಿಗೆ ಪ್ರವೇಶಿಸುತ್ತಿದ್ದಂತೆ ಹಳ್ಳಿಗಳಲ್ಲಿ ಕೊರೊನಾ ಕರಿನೆರಳು ಆವರಿಸುತ್ತಿದೆ. ಪ್ರತಿಯೊಂದು ಹಳ್ಳಿಗರು ಜ್ವರ, ಶೀತ, ಕೆಮ್ಮಿನಿಂದ ಬೆಳಲುತ್ತಿದ್ದು. ಗ್ರಾಮೀಣ ಭಾಗದಲ್ಲಿರುವ ಆಸ್ಪತ್ರೆಗಳಲ್ಲೀಗ ಜ್ವರ, ಶೀತ ಕೆಮ್ಮುನಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಈ ರೀತಿ ಮುಂದುವರಿದರೇ ಹಳ್ಳಿಗಳು ಕೊರೊನಾ ಹಾಟ್‌ಸ್ಪಾಟ್‌ ಆಗುವುದರಲ್ಲಿ ಸಂದೇಹವಿಲ್ಲ.

ಆರೋಗ್ಯ ಇಲಾಖೆ ನಿರ್ಲಕ್ಷ್ಯ:
ಕೊರೊನಾ ಮಹಾಮಾರಿ ರೋಗಕ್ಕೆ ಪಟ್ಟಣದಿಂದ ಹಳ್ಳಿಯ ಕಡೆಗೆ ನಿಧಾನವಾಗಿ ತಿರುಗುತ್ತಿದ್ದು. ರೋಗದ ತೀವ್ರತೆಯ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾದ ಆರೋಗ್ಯ ಇಲಾಖೆ ಕೇವಲ ನಾಮಕಾವಸ್ತೆ ಪರೀಕ್ಷೆ ಮಾಡಿ ರೋಗಿಗಳನ್ನು ಹೋಮ್‌ ಕ್ವಾರಂಟೈನ್‌ ಮಾಡುತ್ತಿದ್ದಾರೆ. ಜನರು ರೋಗದ ಬಗ್ಗೆ ಭಯ ಪಡದೇ ನಮ್ಮಗೇನು ರೋಗವಿಲ್ಲ ಎಂದು ಅನಗತ್ಯ ಸಂಚರಿಸಲು ಅವಕಾಶ ನೀಡಿದ್ದು ಆರೋಗ್ಯ ಇಲಾಖೆಯ ನಿರ್ಲಕ್ಷ ಎತ್ತಿ ತೋರಿಸುತ್ತದೆ. ಒಬ್ಬರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ತಕ್ಷಣವೇ ಸೂಕ್ತ ಚಿಕಿತ್ಸೆ ಮತ್ತು ಜಾಗೃತಿ ವಹಿಸಿದರೇ ಮತ್ತೂಬ್ಬರಿಗೆ ಹರಡುವುದಿಲ್ಲ. ಆದರೇ ಜ್ವರ, ಕೆಮ್ಮು, ಶೀತದಂತ ಲಕ್ಷಣಗಳು ಹಳ್ಳಿ ಹಳ್ಳಿಗಳಲ್ಲಿಗ ಕಾಣಿಸಿಕೊಳ್ಳುತ್ತಿದೆ.

ಈ ರೀತಿ ಮುಂದುವರಿದರೇ ಬೆಂಗಳೂರನಲ್ಲಿ ನಿತ್ಯ ಬರುವ ಪ್ರಕರಣಗಳಿಗಿಂತ ಹೆಚ್ಚು ಪಾಸಿಟಿವ್‌ ಕೇಸ್‌ಗಳು ಹಳ್ಳಿಗಳಿಂದ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ಕೊರೊನಾ ಗ್ರಾಮೀಣ ಭಾಗದ ಜನತೆಗೆ ಆವರಿಸುವುದಕ್ಕಿಂತ ಮುಂಚೆ ತಾಲೂಕು ಆಡಳಿತ ಎಚ್ಚೆತ್ತುಕೊಂಡು ಪಟ್ಟಣಗಳಿಂದ ಹಳ್ಳಿಗೆ ಬಂದ ಜನರನ್ನು ಸರಿಯಾಗಿ ಪರೀಕ್ಷಿಸಿ ರೋಗ ಲಕ್ಷಣಗಳಿದ್ದರೇ ಪ್ರತ್ಯೇಕವಾಗಿ ಇರಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಹಳ್ಳಿಯ ಜನರಿಗೆ ಜಾಗೃತಿ ಮೂಡಿಸುವುದು ಮುಖ್ಯ.

ಮೇ 1ರವರೆಗೆ ತಾಲೂಕಿನಾದ್ಯಂತ 323 ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿದ್ದು. ಅದರಲ್ಲಿ 195 ಸಕ್ರಿಯ ಪ್ರಕರಣಗಳಿವೆ. 115 ಜನರು ಗುಣಮುಖವಾಗಿ ಮನೆ ಸೇರಿದರೇ, ಐವರು ತಾಲೂಕು ಆಸ್ಪತ್ರೆ ಹಾಗೂ 11 ಜನರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗ ಲಕ್ಷಣಗಳು ಕಂಡು ಬಂದ 55 ಜನರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ಮೇ 2ರಂದು ಮತ್ತೇ 48 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ.
ಡಾ| ಪ್ರಶಾಂತ ತುಂಬಗಿ, ತಾಲೂಕು ವೈದ್ಯಾಧಿಕಾರಿ ಹುನಗುಂದ.

*ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.