ಎಲ್ಲೆಡೆ ಕಟ್ಟುನಿಟ್ಟು; ರಸ್ತೆಗಿಳಿದರೆ ಬಸ್ಕಿ ಪೆಟ್ಟು
ಕೊರೊನಾ ಕರ್ಫ್ಯೂ 2ನೇ ದಿನವೂ ಬಿಗಿ! ಕೆಲಸವಿಲ್ಲದೇ ರಸ್ತೆಗಿಳಿದವರಿಗೆ ಲಾಠಿ ರುಚಿ
Team Udayavani, Apr 30, 2021, 6:56 PM IST
ಬಾಗಲಕೋಟೆ: ಕೊರೊನಾ ಕರ್ಫ್ಯೂ ಜಾರಿಯಲ್ಲಿದ್ದು, ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಠೀಣವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಅನಗತ್ಯವಾಗಿ ರಸ್ತೆಗಿಳಿದ ವಾಹನ ಸೀಜ್ ಮಾಡುವ ಜತೆಗೆ ಹಲವು ಯುವಕರಿಗೆ ಬಸ್ಕಿ ಹೊಡೆಸುವ ಶಿಕ್ಷೆ ಕೂಡ ನೀಡಲಾಗಿದೆ.
2ನೇ ಅಲೆ ದಿನೇ ದಿನ ಹೆಚ್ಚುತ್ತಿದ್ದು, ಗುರುವಾರವೂ ನವನಗರದ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. 2ನೇ ಅಲೆಗೆ ಈ ವರೆಗೆ ಒಟ್ಟು 9 ಜನ ಮೃತಪಟ್ಟಿದ್ದು, ಜನರು ತಮ್ಮ ಆರೋಗ್ಯಕ್ಕೆ ಮನೆಯಲ್ಲೇ ಇದ್ದು ಜಾಗೃತಿ ವಹಿಸಲು ಜಿಲ್ಲಾಡಳಿತ ಮನವಿ ಮಾಡಿದೆ.
ಕೊರೊನಾ ಕರ್ಫ್ಯೂ ಮಧ್ಯೆಯೂ ಗ್ರಾಮೀಣ ಭಾಗವೂ ಸೇರಿದಂತೆ ವಿವಿಧೆಡೆ ಮದುವೆ ನಡೆಯುತ್ತಿದ್ದು, ಬಾಗಲಕೋಟೆ ಉಪವಿಭಾಗ ವ್ಯಾಪ್ತಿಯಲ್ಲಿ 13 ಕಡೆ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಮದುವೆಗೆ ಪರವಾನಗಿ ಪಡೆಯದೇ ವಿವಿಧ ದೇವಸ್ಥಾನಗಳಲ್ಲಿ ನಡೆಯುವ ಮದುವೆಗಳ ಮೇಲೂ ಜಿಲ್ಲಾಡಳಿತ ಕಣ್ಣಿಟ್ಟಿದೆ. ಗುರುವಾರ ಮಧ್ಯಾಹ್ನ ನಗರದ ಬಸವೇಶ್ವರ ವೃತ್ತದ ಬಳಿಕ ಯಾವುದೇ ಕೆಲಸವಿಲ್ಲದೇ ರಸ್ತೆಗಿಳಿದ ಯುವಕರಿಗೆ ಬಸ್ತಿ ಹೊಡೆಸುವ ಮೂಲಕ ಪೊಲೀಸರು ಬಿಸಿ ಮುಟ್ಟಿಸಿದರು.
ಕೊರೊನಾ ಅಲೆ ಎದುರಿಸಲು ಸಿದ್ಧರಾಗಿ:
ಬೀಳಗಿ ವರದಿ: ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು, ತಾಲೂಕಿನಲ್ಲಿ ಈ ಸೋಂಕು ನಿಯಂತ್ರಣಕ್ಕಾಗಿ ಅಧಿಕಾರಿಗಳು ಎಲ್ಲ ರೀತಿಯಿಂದಲೂ ಸಿದ್ಧರಾಗಿರಬೇಕು. ಜನರೂ ಸಹಕಾರ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಬೀಳಗಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕೊರೊನಾ ಪ್ರಕರಣಗಳ ಕಡಿಮೆ ಇವೆ ಎಂದು ನಿರ್ಲಕ್ಷé ಮಾಡಬಾರದು. ತಾಲೂಕಾಸ್ಪತ್ರೆಯಲ್ಲಿ ಈಗಾಗಲೇ 24 ಕೋವಿಡ್ ಬೆಡ್ ನಿರ್ಮಿಸಲಾಗಿದೆ. ಅಲ್ಲದೆ ಮೊರಾರ್ಜಿ ವಸತಿ ನಿಲಯದಲ್ಲಿ 90 ಬೆಡ್ ಸಿದ್ಧವಾಗಿವೆ. ಪ್ರಕರಣಗಳು ಹೆಚ್ಚಾದರು ಸದ್ಯ ನಿಭಾಯಿಸಲು ತಾಲೂಕು ಆಡಳಿತ ಸಿದ್ಧವಾಗಿದ್ದು, ಆಕ್ಸಿಜನ್ ಕೊರತೆ ನಿಗಿಸಲು ಕೂಡಲೇ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ 126 ಪ್ರಕರಣಗಳು ಇದ್ದು ಹೋಮ ಕ್ವಾರಂಟೈನ್ನಲ್ಲಿದ್ದಾರೆ. ಅವರ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡ ನಿಯಮ ಪಾಲಿಸಿ ಸಹಕರಿಸಬೇಕು. ಉತ್ತಮ ಆರೋಗ್ಯಕ್ಕಾಗಿ ಎಲ್ಲರ ಸಹಕಾರ ಮುಖ್ಯವಾಗಿದೆ. ಜನರು ಕೊರೊನಾ ಕರ್ಪೂé ಕಡ್ಡಾಯ ಪಾಲನೆ ಮಾಡಿ, ಕೋವಿಡ್ ಲಸಿಕೆ ಪಡೆಯಲು ಮುಂದಾಗಿ ರೋಗ ಹರಡದಂತೆ ನಿಗಾ ವಹಿಸಿ ಎಂದರು. ಸಿಪಿಐ ಸಂಜೀವ ಬಳಿಗಾರ ಮಾತನಾಡಿ, ಕೊರೊನಾ ಬೆಳಗ್ಗೆ 6ರಿಂದ 10 ಗಂಟೆಯವರಿಗೆ ಜನರು ಮಾರುಕಟ್ಟೆಯಲ್ಲಿ ಅಗತ್ಯ ವಸ್ತು ಪಡೆದುಕೊಳ್ಳುವುದು ಮತ್ತು ಮಾಸ್ಕ್, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಿದ್ದೇವೆ. ತರಕಾರಿ ಮಾರುಕಟ್ಟೆ ಎಪಿಎಂಸಿ ಆವರಣಕ್ಕೆ ಸ್ಥಳಾಂತರ ಮಾಡಲಾಗಿದ್ದು ಎಲ್ಲರು 10 ಗಂಟೆಯೊಳಗೆ ಖರೀದಿಗೆ ಸೂಚಿಸಲಾಗಿದೆ. ಮದುವೆ ಸಮಾರಂಭಕ್ಕೆ 50 ಜನ ಮತ್ತು ಅಂತ್ಯಕ್ರಿಯೆಗೆ 5 ಜನರು ಮಾತ್ರ ಭಾಗಿಯಾಗಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ, ತಹಶೀಲ್ದಾರ್ ಶಂಕರ ಗೌಡಿ, ತಾಪಂ ಇಒ ಎಂ.ಕೆ. ತೋದಲಬಾಗಿ, ಬಿಇಒ ಮಿರ್ಜಿ, ವೈದ್ಯಾಧಿಕಾರಿ ಡಾ|ವಿಕಾಸ, ಮುಖ್ಯಾಧಿಕಾರಿ ಐ.ಕೆ. ಗುಡದಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ