ಜಿಲ್ಲೆಯಲ್ಲಿ 5 ಸಾವಿರ ಜನರಿಗೆ ಕೋವಿಡ್ ಲಸಿಕೆ


Team Udayavani, Feb 1, 2021, 12:42 PM IST

Covid vaccine for 5 thousand people in the district

ಬಾಗಲಕೋಟೆ: ಮಹಾಮಾರಿ ಕೋವಿಡ್ ಸೋಂಕಿಗಾಗಿ ವ್ಯಾಕ್ಸಿನ್‌ ಹಾಕುವ ಅಭಿಯಾನ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಈವರೆಗೆ ವ್ಯಾಕ್ಸಿನ್‌ ತೆಗೆದುಕೊಂಡವರು 2ನೇ ಬಾರಿಯ ವ್ಯಾಕ್ಸಿನ್‌ಗೆ ಸಜ್ಜಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ 7 ಕಡೆ ಮಾತ್ರ ಕೊರೊನಾ ವ್ಯಾಕ್ಸಿನ್‌ ಹಾಕಲಾಗುತ್ತಿತ್ತು. ಇದೀಗ ಜಿಲ್ಲೆಯ 9 ತಾಲೂಕು ವ್ಯಾಪ್ತಿಯ ಒಟ್ಟು 60 ಸ್ಥಳದಲ್ಲಿ ವ್ಯಾಕ್ಸಿನ್‌ ಹಾಕಲಾಗುತ್ತಿದೆ. ಗುರುವಾರ ಸಂಜೆಯವರೆಗೆ 4897 ಜನ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಡ್ಡ ಪರಿಣಾಮ ಇಲ್ಲ: ಕೋವಿಡ್ ವ್ಯಾಕ್ಸಿನ್‌ ಹಾಕಿಸಿಕೊಂಡರೆ ಅಡ್ಡ ಪರಿಣಾಮ ಬೀರುತ್ತದೆ ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿತ್ತು. ಹೀಗಾಗಿ ಆರಂಭದಲ್ಲಿ ಬಹುಕೇತ ಆರೋಗ್ಯ ಸಿಬ್ಬಂದಿ, ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಇದೀಗ ನಾನೂ ವ್ಯಾಕ್ಸಿನ್‌ ಹಾಕಿಸಿಕೊಂಡೇ ಎಂಬ ಮಾತು ಬೇರೊಬ್ಬರಿಂದ ಕೇಳಿದ ಬಳಿಕ ಅವರಿಂದ ಮಾಹಿತಿ ಪಡೆದು ತಾವೂ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ.

ಮೊದಲ ಹಂತದಲ್ಲಿ ಜಿಲ್ಲೆಯ ಸರ್ಕಾರಿ, ಖಾಸಗಿ ವೈದ್ಯರು, ಆರೋಗ್ಯ ಸಿಬ್ಬಂದಿ ಸೇರಿದಂತೆ 17 ಸಾವಿರ ಜನರಿಗೆ ವ್ಯಾಕ್ಸಿನ್‌ ಹಾಕಲು ಗುರಿ ಹಾಕಿಕೊಳ್ಳಲಾಗಿದೆ. ಅದರಲ್ಲಿ ಈಗಾಗಲೇ 5 ಸಾವಿರ ಜನ ಲಸಿಕೆ ಪಡೆದಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ನಿತ್ಯ 300 ಜನರು ವ್ಯಾಕ್ಸಿನ್‌ ಪಡೆಯುತ್ತಿದ್ದಾರೆ. ಲಸಿಕೆ ಹಾಕುವ ವಿಷಯದಲ್ಲಿ ಜಿಲ್ಲೆಯಲ್ಲಿ ಶಿಸ್ತುಬದ್ಧ ಕಾರ್ಯ ನಿರ್ವಹಣೆ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಮೈ-ಕೈ ನೋವು-ಜ್ವರ ಸಾಮಾನ್ಯ: ಮೊದಲ ಬಾರಿಗೆ ಕೊರೊನಾ ವ್ಯಾಕ್ಸಿನ್‌ ಪಡೆದ ಬಾಗಲಕೋಟೆ ತಾಲೂಕು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಬಸವರಾಜ ಹೊಸಳ್ಳಿ ಅವರು ಹೇಳುವಂತೆ, ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಯಾರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆಯೋ ಅವರಿಗೆ ಯಾವ ಸಮಸ್ಯೆಯೂ ಇಲ್ಲ. ವ್ಯಾಕ್ಸಿನ್‌ ಪಡೆದ ಬಳಿಕ ಒಂದು ದಿನ ಮನೆಯಲ್ಲಿ ವಿಶ್ರಾಂತಿ ಪಡೆದರೆ ಸಾಕು. ಕೆಲವೇ ಕೆಲವರಿಗೆ ಮೈ-ಕೈ ನೋವು, ಕೆಲವರಿಗೆ ಜ್ವರ ಬರುತ್ತದೆ. ಅದಕ್ಕಾಗಿ ವ್ಯಾಕ್ಸಿನ್‌ ಪಡೆದ ದಿನವೇ ಜ್ವರ-ಮೈ-ಕೈ ನೋವಿಗೆ ಮಾತ್ರೆ ಪಡೆಯಬೇಕು. ಇದರಿಂದ ಯಾವ ಸಮಸ್ಯೆಯೂ ಆಗುವುದಿಲ್ಲ. ನಾನು ವ್ಯಾಕ್ಸಿನ್‌ ತೆಗೆದುಕೊಂಡ ಮರುದಿನ ಮೈ-ಕೈ ನೋವು ಮಾತ್ರ ಬಂದಿತ್ತು. ಒಂದು ದಿನ ವಿಶ್ರಾಂತಿ ಪಡೆದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದೇನೆ. 2ನೇ ಬಾರಿಯ ವ್ಯಾಕ್ಸಿನ್‌ 28 ದಿನಗಳ ಬಳಿಕ ಬರಲಿದೆ. ಅದಕ್ಕಾಗಿ ಹೆಸರು ನೋಂದಾಯಿಸಿದವರಿಗೆ ನೇರವಾಗಿ ಮೊಬೈಲ್‌ ಸಂದೇಶ, ಕರೆ ಬರುತ್ತದೆ. ಯಾವ ಸ್ಥಳದಲ್ಲಿ ವ್ಯಾಕ್ಸಿನ್‌ ಪಡೆಯಬೇಕು ಎಂಬ ವಿವರ ಕೊಡುತ್ತಾರೆ ಎಂದರು.

ಇದನ್ನೂ ಓದಿ:ಈ ಬಜೆಟ್ ನಲ್ಲಿ ರೈಲ್ವೆಗೆ ಸಿಕ್ಕಿದೆಷ್ಟು? ಬೆಂಗಳೂರು ಮೆಟ್ರೋಗೆ 14 ಸಾವಿರ ಕೋಟಿ ರೂ.

ಖಾಸಗಿ ವೈದ್ಯ ಸಿಬ್ಬಂದಿಯೇ ಹಿಂದೇಟು: ಈವರೆಗೆ ಕೊರೊನಾ ವ್ಯಾಕ್ಸಿನ್‌ಗಾಗಿ ಹೆಸರು  ನೋಂದಾಯಿಸಿದವರಲ್ಲಿ ಸರ್ಕಾರಿ ವೈದ್ಯರು, ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ಪಡೆಯುತ್ತಿದ್ದಾರೆ. ಕೆಲವೇ ಕೆಲವರು ನಿರಂತರ ಔಷಧ ಪಡೆಯುತ್ತಿದ್ದರೆ, ಬೇರೆ ಬೇರೆ ಕಾಯಿಲೆಗಳಿದ್ದರೆ ಅಂತವರು ವ್ಯಾಕ್ಸಿನ್‌ ಪಡೆದಿಲ್ಲ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿಗೂ ವ್ಯಾಕ್ಸಿನ್‌ಗಾಗಿ ಹೆಸರು ನೋಂದಾಯಿಸಿದ್ದು, ಒಂದೊಂದು ಕಡೆ 100 ವ್ಯಾಕ್ಸಿನ್‌ ಕೊಟ್ಟರೂ ಕೇವಲ25ರಿಂದ 30 ಜನ ಮಾತ್ರ ಪಡೆದಿರುತ್ತಾರೆ. ಅಂತವರ ಮನವೊಲಿಸಿ ವ್ಯಾಕ್ಸಿನ್‌ನಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಹೇಳುವ ಕಾರ್ಯವನ್ನೂ ಆರೋಗ್ಯ ಇಲಾಖೆ ಮಾಡುತ್ತಿದೆ.

ವ್ಯಾಕ್ಸಿನ್‌ ಪಡೆದ ಡಿಎಚ್‌: ವ್ಯಾಕ್ಸಿನ್‌ ಪಡೆಯಲು ಹಿಂದೇಟು ಹಾಕುತ್ತಿದ್ದವರಿಗೆ ಪ್ರೇರಣೆ ನೀಡಲು ಹಾಗೂ ಹೆಸರು ನೋಂದಾಯಿಸಿದ ಬಳಿಕ ತಮ್ಮ ಸರತಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ ಕೊರೊನಾ ವ್ಯಾಕ್ಸಿನ್‌ ಪಡೆದಿದ್ದಾರೆ. ವ್ಯಾಕ್ಸಿನ್‌ ಪಡೆದು ಸಂಜೆಯವರೆಗೆ ಮಾತ್ರ ವಿಶ್ರಾಂತಿ ಪಡೆದು ಮತ್ತೆ ಸೇವೆಗೆ ಹಾಜರಾಗಿದ್ದಾರೆ. ಇದು ಇಲಾಖೆಯ ಇತರೆ ಸಿಬ್ಬಂದಿಯೂ ವ್ಯಾಕ್ಸಿನ್‌ ಪಡೆಯಲು ಪ್ರೇರಣೆ ಎಂಬಂತಾಗಿದೆ.

­ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.