ಕೆರೂರಲ್ಲಿ ಭಯ ಮುಕ್ತ ವಾತಾವರಣ ನಿರ್ಮಿಸಿ
ಪ್ರಮುಖ ಸ್ಥಳಗಳಲ್ಲಿ ಹೊಸ ಸಿಸಿ ಕ್ಯಾಮೆರಾ ಅಳವಡಿಸಿ ; ಹೊಸ ಶಾಂತಿ ಸಮಿತಿ ರಚಿಸಲು ಮಹಾನಿರ್ದೇಶಕರ ಸೂಚನೆ
Team Udayavani, Jul 22, 2022, 3:04 PM IST
ಕೆರೂರ: ಗಲಭೆ ನಡೆದ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳು ಕೆಟ್ಟು ಹೋಗಿವೆ. ಅವುಗಳನ್ನು ಕೂಡಲೇ ಬದಲಾಯಿಸಿ, ಹೊಸದಾಗಿ ಕೂಡಲೇ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆಂಚಪ್ಪ ಅವರಿಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕಕುಮಾರ ಸೂಚಿಸಿದರು.
ಗುರುವಾರ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಾಗರಿಕ ಮತ್ತು ಯುವ ಜನ ಸಮಿತಿ ಸಭೆ ಹಾಗೂ ಸಾರ್ವಜನಿಕ ಕುಂದು ಕೊರತೆ ಆಲಿಕೆಯ ವೇಳೆ ಅವರು ಮಾತನಾಡಿದರು.
ಪ್ರಮುಖ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಹೊಂದಿರುವ ಈ ಪಟ್ಟಣದಲ್ಲಿ ಅಪರಾಧ ಸಂಖ್ಯೆಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕಾಗಿ ಸಿಸಿ ಕ್ಯಾಮೆರಾಗಳ ಅವಶ್ಯಕತೆ ಇದೆ ಎಂದರು.
ಕೆರೂರ ಠಾಣೆಯಲ್ಲಿ ಹೊಸದಾಗಿ ಮುಖಂಡರ, ಸಲಹೆಗಾರರ ಹಾಗೂ ಯುವ ಪಡೆಯ ಶಾಂತಿ ಸಮಿತಿ ರಚಿಸಬೇಕು. ಇದು ಅಪರಾಧ ಚಟುವಟಿಕೆ, ಗಲಾಟೆಗಳ ನಿಯಂತ್ರಣಕ್ಕೆ ಅವಶ್ಯಕವಾಗಿದೆ. ಎರಡೂ ಸಮಾಜಗಳಲ್ಲಿನ ಹಿರಿಯರು ಜವಾಬ್ದಾರಿ ಹೊತ್ತು ಹೊಣೆಗಾರಿಕೆ ಪ್ರದರ್ಶಿಸಬೇಕು. ಯುವಕರಿಗೆ ಸೂಕ್ತ ಬುದ್ಧಿವಾದ ಹೇಳಿ, ಸರಿದಾರಿಗೆ ತರಬೇಕು. ಇಲ್ಲದಿದ್ದರೆ ನಮ್ಮ ಪೊಲೀಸ್ ಇಲಾಖೆಯು ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಅದನ್ನು ಎದುರಿಸಲು ಕಿಡಿಗೇಡಿಗಳು ಸಜ್ಜಾಗುವಂತೆ ಎಡಿಜಿಪಿ ಅಲೋಕಕುಮಾರ ಎಚ್ಚರಿಕೆ ನೀಡಿದರು.
ಐಜಿಪಿ ಎನ್.ಸತೀಶಕುಮಾರ ಮಾತನಾಡಿ, ಗಲಾಟೆ ನಿರತ ಹುಡುಗರ ಮೇಲೆ ಸಮಾಜದ ಪ್ರಮುಖರ ನಿಯಂತ್ರಣವಿಲ್ಲದ ಕಾರಣ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.ನಾಗರಿಕರು ಸಮಾಜದಲ್ಲಿ ತಮ್ಮ ಜವಾಬ್ದಾರಿ ಪ್ರದರ್ಶಿಸಬೇಕು. ಪೊಲೀಸ್ ಇಲಾಖೆ ಗಲಭೆ ನಿರತ ತಪ್ಪಿತಸ್ಥರ ಮೇಲೆ ರೌಡಿಶೀಟರ್ ಕಾನೂನು ಜಾರಿಗೊಳಿಸುತ್ತಿದೆ. 30 ವರ್ಷಗಳ ಕಾಲ ರೌಡಿಶೀಟರ್ನಲ್ಲಿ ದಾಖಲಿಸುತ್ತೇವೆ. ಇದರಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಪೊಲಿಸ್, ಕಾನೂನು ಬಗೆಗೆ ಗೌರವದಿಂದ ನಡೆದುಕೊಳ್ಳದಿದ್ದರೆ ಕಠಿಣ ಕ್ರಮಗಳ ಮೂಲಕ ಶಾಂತಿ ಕದಡುವ ದುಷ್ಟರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು