ಕಾರಜೋಳ ವಿರುದ್ಧ ಟೀಕೆಗೆ ಖಂಡನೆ

ಜೆಡಿಎಸ್‌-ಕಾಂಗ್ರೆಸ್‌ ಮುಖಂಡರ ಆರೋಪ ಸತ್ಯಕ್ಕೆ ದೂರವಾದ ಸಂಗತಿ: ಸಿದ್ದುಗೌಡ-ಪಂಡಿತ

Team Udayavani, Jul 1, 2021, 4:40 PM IST

30-mlp-3

ಮಹಾಲಿಂಗಪುರ: ಇತ್ತೀಚೆಗೆ ಉಪಮುಖ್ಯ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ವಿರುದ್ಧ ಮಹಾಲಿಂಗಪುರದ ಜೆಡಿಎಸ್‌ ಮುಖಂಡ ನಿಂಗಪ್ಪ ಬಾಳಿಕಾಯಿ ಮತ್ತು ಮತ್ತು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಇತರರು ಮಾಡಿದ ಟೀಕೆಯನ್ನು ರನ್ನಬೆಳಗಲಿ ಗ್ರಾಮಸ್ಥರು ಖಂಡಿಸಿದ್ದಾರೆ.

ಬುಧವಾರ ರನ್ನಬೆಳಗಲಿ ಪಂಚಾಯತಿ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಪಂ ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ ಹಾಗೂ ಮುಖಂಡರಾದ ಪಂಡಿತ ಪೂಜಾರಿ, ಮಹಾಲಿಂಗಪುರದ 6 ಮತ್ತು 7ನೇ ವಾರ್ಡ್‌ ಪ್ರತಿಶತ 75ರಷ್ಟು ಕಂದಾಯ ಭೂಮಿಯನ್ನು ಬೆಳಗಲಿ ಪಟ್ಟಣ ಪಂಚಾಯಿತಿಗೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿದ್ದು, ಇದರಿಂದ ಮಹಾಲಿಂಗಪುರ ಜನತೆಗೆ ಡಿಸಿಎಂ ಗೋವಿಂದ ಕಾರಜೋಳ ದ್ರೋಹ ಮಾಡಿದ್ದಾರೆ ಎಂದು ಮಹಾಲಿಂಗಪುರದಲ್ಲಿ ಆಪಾದಿಸಿದ್ದು ಸತ್ಯಕ್ಕೆ ದೂರವಾದ ಸಂಗತಿ.

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮಹಾಲಿಂಗಪುರದ ಬಗ್ಗೆ ಅಪಾರ ಗೌರವವಿದೆ ಎಂದರು. 1995ರ ಮುಂಚೆಯೂ ಈ ಜಾಗೆ ಬೆಳಗಲಿ ಗ್ರಾಮಕ್ಕೆ ಸೇರಿತ್ತು. 1995ರ ಗೆಜೆಟ್‌ ಪಂಚಾಯತಿ ಗಮನಕ್ಕೆ ಬಂದಿರಲಿಲ್ಲ. ಅದಕ್ಕಾಗಿ ನಂತರ ತಕರಾರು ಕೊಟ್ಟಿàವಿ. ನಾವು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಈ ಮುಂಚೆ ಜಮಖಂಡಿ ಉಪವಿಭಾಗಾ ಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆದಾಗ ಮಹಾಲಿಂಗಪುರ ಪುರಸಭೆ ಮುಖ್ಯಾ  ಧಿಕಾರಿ ಯಾವುದೇ ತಕರಾರು ಸಲ್ಲಿಸಿಲ್ಲ. ಕೇವಲ ಒಂದು ಲೇಓಟ್‌ದಾಗ ಮಾತ್ರ ಮಹಾಲಿಂಗಪುರ ಪುರಸಭೆಯಿಂದ ಅಭಿವೃದ್ಧಿ ಮಾಡಲಾಗಿದೆ. ಉಳಿದ ಸರ್ವೇ ನಂಬರಗಳಲ್ಲಿ ರನ್ನಬೆಳಗಲಿ ಪಟ್ಟಣ ಪಂಚಾಯತಿಯಿಂದ ನೀರು, ರಸ್ತೆ, ವಿದ್ಯುತ್‌ ದೀಪ ಮುಂತಾದ ವ್ಯವಸ್ಥೆ ಮಾಡಲಾಗಿದೆ.ಅವರು ನಮ್ಮಲ್ಲಿಯೆ ಕರ ತುಂಬುತ್ತಾ ಬಂದಿದ್ದಾರೆ. ಇಲ್ಲಿಯವರೆಗೆ ಆ ಸರ್ವೇ ನಂಬರ್‌ ನಿವೇಶನಗಳ ಜನತೆಗೆ ಮಹಾಲಿಂಗಪುರ ಪುರಸಭೆಯಿಂದ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಈಗ ಬೆಳಗಲಿ ಪಂಚಾಯತಿಗೆ ಸೇರಿದೊಡನೆ ಟೀಕೆ ಮಾಡುವವರಿಗೆ ಈ ಸರ್ವೇ ನಂಬರ್‌ಗಳ ನೆನಪು ಬರುತ್ತಿದೆ. ಟೀಕೆ ಮಾಡುವವರಿಗೆ ವಾಸ್ತವದ ಅರಿವಿಲ್ಲ ಎಂದರು. ಇದು ಕೇವಲ ರಾಜಕೀಯ ಹಿತಾಸಕ್ತಿಯಿಂದ ಡಿಸಿಎಂ ಹಾಗೂ ಶಾಸಕ ಸಿದ್ದು ಸವದಿ ಅವರ ಮೇಲೆ ಆರೋಪ ಮಾಡಲಾಗುತ್ತಿದೆ. ಈಗ ಸದರಿ ಸರ್ವೇ ನಂಬರ್‌ ಬೆಳಗಲಿಗೆ ಅಂತಾ ಗೆಜೆಟ್‌ ನೋಟಿಫಿಕೇಶನ್‌ ಆಗಿದೆ. ಇದು ಮುಗಿದ ಅಧ್ಯಾಯ. ಅನವಶ್ಯಕ ವಿವಾದ ಎಬ್ಬಿಸುವುದು ಸರಿಯಲ್ಲ. ಇಡೀ ರನ್ನಬೆಳಗಲಿ ಪಟ್ಟಣವನ್ನು ಮಹಾಲಿಂಗಪುರ ಪುರಸಭೆಗೆ ಸೇರಿಸಿ ನಗರಸಭೆ ಮಾಡುತ್ತೇವೆಂದರೆ ನಾವು ಒಪ್ಪುತ್ತೇವೆ ಅದನ್ನು ಬಿಟ್ಟು ಸರ್ವೇ ನಂಬರ ಕೇಳಿದರೆ ನಾವು ಒಪ್ಪುವುದಿಲ್ಲ. ರನ್ನಬೆಳಗಲಿ ಜನತೆ ಸರ್ವ ವಿಧದಲ್ಲೂ ಮಹಾಲಿಂಗಪುರದ ಬೆಂಬಕ್ಕೆ ನಿಂತಿದ್ದಾರೆ. ಒಬ್ಬರಿಗೊಬ್ಬರಿಗೆ ಅನೋನ್ಯ ಸಂಬಂಧವಿದೆ. ಕೇವಲ ರಾಜಕೀಯ ಹಿತಾಸಕ್ತಿಗಾಗಿ ಕೆಲವರು ಟೀಕೆ ಮಾಡುತ್ತಾರೆ ಅಂತಾ ಸಂಬಂಧಗಳಿಗೆ ಧಕ್ಕೆ ತರುವುದು ಸರಿಯಲ್ಲ. ನಿಮಗೆ ನಿಮ್ಮದೇ ಸರಿ ಎನಿಸಿದರೆ ಕಾನೂನು ಹೋರಾಟ ಮಾಡಿ ನಾವು ಅದನ್ನು ಎದುರಿಸುತ್ತೇವೆ ಎಂದರು.

ಮುಖಂಡರಾದ ಚಿಕ್ಕಪ್ಪ ನಾಯಕ, ಮುತ್ತಪ್ಪ ಸಿದ್ದಾಪೂರ, ಶಿವನಗೌಡ ಪಾಟೀಲ, ಮಹಾಲಿಂಗ ಪುರಾಣಿಕ, ಅಪ್ಪನಗೌಡ ಪಾಟೀಲ, ಸಂಗನಗೌಡ ಪಾಟೀಲ, ಪುಟ್ಟು ಕುಲಕರ್ಣಿ, ಸಿದ್ದು ಹೆಗ್ಗಣ್ಣವರ, ಲಕ್ಕಪ್ಪ ಮೇಡ್ಯಾಗೋಳ, ಸಂಗಪ್ಪ ಅಮಾತಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.