ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದ ಮೊಸಳೆ ಸೆರೆ
Team Udayavani, Apr 7, 2021, 4:01 PM IST
ಮುಧೋಳ: ಸಮೀಪದ ಬುದ್ನಿ ಬಿ.ಕೆ. ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದ ಮೊಸಳೆಯನ್ನು ಸೆರೆಹಿಡಿದಿರುವ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಕೃಷ್ಣಾ ನದಿಯಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಬುದ್ನಿ ಬಿ.ಕೆ. ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಅವಿತಿದ್ದ ಮೊಸಳೆಯನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಮೊಸಳೆಯನ್ನು ಸೆರೆಹಿಡಿದು ಬೀಳಗಿ ಸಮೀಪದ ಕೊರ್ತಿ ಕೊಲ್ಹಾರ ಸಮೀಪದ ಕೃಷ್ಣಾ ನದಿಗೆ ಬಿಟ್ಟಿದ್ದಾರೆ.
ಇದನ್ನೂ ಓದಿ:ಚಿಕನ್ ಸೆಂಟರ್ನಲ್ಲಿ ದನದ ಮಾಂಸ; ಪೊಲೀಸ್ ದಾಳಿ: ಇಬ್ಬರ ಮೇಲೆ ಕೇಸು
ಅಂದಾಜು 6 ಅಡಿ ಉದ್ದದ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ನೆರವಾಗಿದ್ದಾರೆ.
ಮುಧೋಳ ವಲಯ ಅರಣ್ಯಾಧಿಕಾರಿ ಲಿಂಗಾರೆಡ್ಡಿ ಮಂಕಣಿ ಹಾಗೂ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಅಲದಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕಿ ಸರಸ್ವತಿ ಮಜ್ಜಗಿ ಹಾಗೂ ಸಿಬ್ಬಂದಿ ಮೊಸಳೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ