ಬಾವಿಗೆ ಬಿದ್ದ ಮೊಸಳೆ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Team Udayavani, Mar 23, 2022, 6:16 PM IST
ರಬಕವಿ–ಬನಹಟ್ಟಿ : ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿಯ ಬಾವಿಯಲ್ಲಿ ಬಂದು ಸೇರಿದ್ದ ಮೊಸಳೆಯನ್ನು ಬುಧವಾರ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಅವಿರತ ಪ್ರಯತ್ನದಿಂದ ಅದನ್ನು ಮೇಲಕ್ಕೆತ್ತಿ ಸುರಕ್ಷತ ಸ್ಥಳಕ್ಕೆ ಬಿಟ್ಟು ಬರುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕುಲಹಳ್ಳಿಯ ಶ್ರೀಶೈಲ ತೇಲಿಯವರ ಬಾವಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು ಅದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಎರಡು ದಿನಗಳಿಂದ ಪ್ರಯತ್ನ ಪಟ್ಟರು ಸಾಧ್ಯವಾಗಿರಲಿಲ್ಲ. ಆದರೆ ಇಂದು ಅದು ಹೇಗೋ ನಿನ್ನೆ ಪಕ್ಕದ ಬಾವುರಾವ್ ಶಿಂಧೆ ಅವರ ಬಾವಿಯೊಳಗೆ ಬಿದ್ದಿದ್ದು ನಿನ್ನೆ ಮಂಗಳವಾರ ರಾತ್ರಿ 10.30 ರವರೆಗೆ ಕಾರ್ಯಾಚರಣೆ ಮಾಡಿದರು ಮೇಲೆತ್ತಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಅದನ್ನು ಮೇಲೆತ್ತುವಲ್ಲಿ ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೊಸಳೆ ಮೇಲೆತ್ತಲು ಯರಗಟ್ಟಿ ಗ್ರಾಮದ ಮೀನುಗಾರರಾದ ಲಾಲು ಮೋರೆ, ಅರಣ್ಯ ಇಲಾಖೆ ಅಧಿಕಾರಿ ಮಲ್ಲೇಶ ನಾವಿ, ಸಿಬ್ಬಂದಿಗಳಾದ ಆರ್. ಎಲ್. ಜಾಧವ, ಮಹೇಶ ಎನ್, ಎಚ್. ವಾಯ್. ಉಗಾರ, ಆರ್. ಬಿ. ಮೇತ್ರಿ, ಲಕ್ಷö್ಮಣ ಪಾಟೀಲ, ಮಹಾವೀರ ಆಲಗೂರ, ಸುಭಾಸ ವಾರದ, ಸದಾಶಿವ ಮಾಂಗ, ಅಶೋಕ ಸಣ್ಣಕ್ಕಿ ಗ್ರಾಮಸ್ಥರಾದ ಪಾಂಡುರಂಗ ಸಾಲ್ಗುಡೆ, ಚಕ್ಕಪ್ಪ ಕಾಂಬ್ಳೆ, ಮುದಕಪ್ಪ ಪವಾರ, ಶ್ರೀಶೈಲ ಸಾಲ್ಗುಡೆ, ಮಹೇಶ ತೇಲಿ, ಸುನೀಲ ಸಿಂಧೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ