ಕೋವಿಡ್ ನುಂಗಿತು 8.72 ಕೋಟಿ ಅನುದಾನ


Team Udayavani, Mar 26, 2021, 6:43 PM IST

ಕೋವಿಡ್  ನುಂಗಿತು 8.72 ಕೋಟಿ ಅನುದಾನ

ಬಾಗಲಕೋಟೆ: ಕಳೆದ ವರ್ಷ ಮಾ. 31ರಂದು ಜಿಲ್ಲೆಗೆ ಕಾಲಿಟ್ಟ ಕೋವಿಡ್ ಎಂಬ ಮಹಾಮಾರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿಅನುದಾನ ನುಂಗಿದೆ. ಜಿಲ್ಲೆಯಲ್ಲಿ ಕೊರೊನಾಸಮಗ್ರ ನಿರ್ವಹಣೆಗೆ 8.72 ಕೋಟಿ ಖರ್ಚು ಮಾಡಲಾಗಿದೆ.

ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಕೆ. ರಾಜೇಂದ್ರ,ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಯಂತ್ರೋಪಕರಣಗಳ ಖರೀದಿ, ಬೆಡ್‌, ಕಾಟಾ,ಪಿಪಿಇ ಕಿಟ್‌, ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯಸಲಕರಣೆ, ಊಟದ ವ್ಯವಸ್ಥೆ ಹಾಗೂ ಇತರೆಸೇರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಬಗ್ಗೆ ಅಡಿಟ್‌ ಸಹ ಆಗಿದೆ ಎಂದು ತಿಳಿಸಿದರು.

ಕೋವಿಡ್‌ 2ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಗೆ ತಂಡ ರಚಿಸಲಾಗಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ಧರಿಸುವುದು ಮುಖ್ಯವಾಗಿದೆ. ಇದರ ಪಾಲನೆ ನಗರ ಸ್ಥಳೀಯ ಸಂಸ್ಥೆ ಮತ್ತು ತಾಲೂಕುಪಂಚಾಯಿತಿ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡಗಳು ಬಜಾರ್‌, ತರಕಾರಿಮಾರುಕಟ್ಟೆ, ಬಸ್‌ ನಿಲ್ದಾಣ ಹಾಗೂ ಅಂಗಡಿ ಮುಂಗ್ಗಟ್ಟುಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶದವರಿಗೆ 250 ರೂ. ಹಾಗೂಗ್ರಾಮೀಣ ಪ್ರದೇಶದವರಿಗೆ 100 ರೂ.ಗಳ ದಂಡ ವಿಧಿಸಲಿದ್ದಾರೆಂದು ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಲಸಿಕೆ ಹಾಕಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರುಕಡ್ಡಾಯವಾಗಿ ಕೊರೊನಾ ಲಸಿಕೆಹಾಕಿಸಿಕೊಳ್ಳಬೇಕು. ಅಲ್ಲದೇ 45 ರಿಂದ 59 ವರ್ಷದೊಳಗಿನವರಿಗೆ ಮಧುಮೇಹಮತ್ತು ರಕ್ತದ ಒತ್ತಡ ಇದ್ದವರು ಲಸಿಕೆ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಲಸಿಕೆ ಸಮಸ್ಯೆ ಇರುವದಿಲ್ಲ. ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಬಗ್ಗೆ ಮಾಹಿತಿ ಇದ್ದಲ್ಲಿ ಸಹಾಯವಾಣಿ ಸಂಖೆ 1077ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು.

ಜಿಲ್ಲೆಯಲ್ಲಿ ಮಾ. 24 ರಂದು ಒಂದೇ ದಿನ 20 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 17ಪ್ರಕರಣಗಳು ಬಾಗಲಕೋಟೆಯ ಮಾರವಾಡಿ ಗಲ್ಲಿ ಹಾಗೂ ಸಿಮೆಂಟ್‌ ಕಾರ್ಖಾನೆ ಹತ್ತಿರ ಹಾಗೂ2 ಹುನಗುಂದ ಮತ್ತು 1 ಪ್ರಕರಣ ಮುಧೋಳದಲ್ಲಿ ಕಂಡುಬಂದಿರುತ್ತದೆ. ಕಳೆದ 7 ದಿನಗಳಲ್ಲಿ15290 ಮಾದರಿ ಪರೀಕ್ಷಿಸಲಾಗಿ ಅದರಲ್ಲಿ 50 ಕೋವಿಡ್ ಪ್ರಕರಣಗಳು ಕಂಡುಬಂದಿವೆ. 18 ಜನ ಮಾತ್ರ ಗುಣಮುಖರಾಗಿದ್ದು, ಯಾವುದೇ ಮರಣ ವರದಿಗಳು ಕಂಡುಬಂದಿರುವುದಿಲ್ಲ. ಫೆಬ್ರವರಿಯಲ್ಲಿ 18 ಹಾಗೂ ಮಾರ್ಚ್‌ನಲ್ಲಿ 81 ಕೋವಿಡ್ ಪ್ರಕರಣಗಳು ಕಂಡುಬಂದಿರುತ್ತದೆ ಎಂದು ತಿಳಿಸಿದರು.

ಮಹಾರಾಷ್ಟ್ರದಿಂದ ಆಗಮನ; ಮಾಹಿತಿ ಕೊಡಿ: ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ

ಸಾರ್ವಜನಿಕರಿಗೆ ನೆಗೆಟಿವ್‌ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಜರುಗಿಸಲಾಗುತ್ತಿದೆ. ಎನ್‌.ಡಬ್ಲೂ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೂ ಸಹ ಕೋವಿಡ್‌ಲಸಿಕೆ ಹಾಕಲಾಗುತ್ತಿದೆ. ಸಾರ್ವಜನಿಕರಿಗೆಕೋವಿಡ್‌ ಲಸಿಕೆ ನೀಡುವುದು ಹಾಗೂ ಕೋವಿಡ್‌ ಪರೀಕ್ಷೆಗೆ ಒಳಪಡಿಸುವ ಕುರಿತುಸರಕಾರ ನಿಗದಿಪಡಿಸಿದ ಗುರಿಯನ್ನು ತಲುಪಲುಕ್ರಮವಹಿಸಲಾಗಿದೆ. ಪ್ರಕರಣಗಳು ಹೆಚ್ಚಾದಲ್ಲಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲ ರೀತಿಯಿಂದಸಜ್ಜಾಗಿದೆ. ಅಲ್ಲದೇ ವಸತಿ ನಿಲಯಗಳನ್ನುಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್‌ ಪ್ರಕರಣಗಳು ಹೆಚ್ಚಾದ ಪ್ರದೇಶಗಳಲ್ಲಿ ಸರಕಾರ ಮಾರ್ಗಸೂಚಿಯಂತೆಕಂಟೈನ್‌ಮೆಂಟ್‌ ಜೋನ್‌ ರಚಿಸಿ ಸದರಿ ಪ್ರದೇಶದಮೇಲುಸ್ತುವಾರಿಯಾಗಿ ಇನ್ಸಿಡೆಂಟ್‌ ಕಮಾಂಡರ್‌ ಗಳನ್ನು ನೇಮಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಟಿ.ಭೂಬಾಲನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌. ದೇಸಾಯಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-sfsdff

Rabkavi Banhatti; ನಿವೃತ್ತ ಪ್ರಾಚಾರ್ಯ ಎಂ.ಎಸ್.ಮುನ್ನೊಳ್ಳಿ ನಿಧನ

Jamkhandi: ಅ.5ಕ್ಕೆ ದೆಹಲಿಯಲ್ಲಿ ಶಿಕ್ಷಕರ ಸಮಾವೇಶ

Jamkhandi: ಅ.5ಕ್ಕೆ ದೆಹಲಿಯಲ್ಲಿ ಶಿಕ್ಷಕರ ಸಮಾವೇಶ

Bagalkote: ಡಿಸಿಎಂ ಹುದ್ದೆ ಕೊಟ್ಟರೆ ಬೇಡ ಅನ್ನಲ್ಲ: ಸಚಿವ ಸತೀಶ ಜಾರಕಿಹೊಳಿ

Bagalkote: ಡಿಸಿಎಂ ಹುದ್ದೆ ಕೊಟ್ಟರೆ ಬೇಡ ಅನ್ನಲ್ಲ: ಸಚಿವ ಸತೀಶ ಜಾರಕಿಹೊಳಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.