ಉಪಚುನಾವಣೆಗೆ ಡಿಸಿ ಅಧಿಸೂಚನೆ
Team Udayavani, Jun 15, 2020, 12:14 PM IST
ಜಮಖಂಡಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ ಎಂದು ತಹಶೀಲ್ದಾರ್ ಎಸ್.ಬಿ. ಇಂಗಳೆ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.15ರಂದು ನಾಮಪತ್ರ ಸಲ್ಲಿಕೆ, ಜೂ.22ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಜೂ.23ರಂದು ಅಭ್ಯರ್ಥಿ ಪ್ರಮಾಣಪತ್ರ ಪರಿಶೀಲನೆ, ಜೂ.25 ರಂದು ನಾಮಪತ್ರ ಹಿಂಪಡೆಯುವ ದಿನವಾಗಿದೆ. ಜು.6ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಚುನಾವಣೆ ನಡಯಲಿದೆ. ಮರು ಮತದಾನ ಅವಶ್ಯವಿದ್ದರೆ ಜು.7ರಂದು ನಿಗದಿತ ಸಮಯದಲ್ಲಿ ಮರು ಮತದಾನ ಮಾಡ ಲಾಗುವುದು. ಜು.8ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಜು.10ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತದೆ ಎಂದು ತಿಳಿಸಿದರು.
ಚುನಾವಣಾಧಿಕಾರಿಯನ್ನಾಗಿ ತಹಶೀಲ್ದಾರ್ ಸಂಜಯ ಇಂಗಳೆ, ಸಹಾಯಕ ಚುನಾವಣಾಧಿಕಾರಿಯಾಗಿ ಎನ್.ಜಿ. ಬಿರಡಿ ಕರ್ತವ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಧಿ ಸೂಚನೆ ಹೊರಡಿಸಿದ್ದಾರೆ. ನಾಮಪತ್ರ ಸಲ್ಲಿಸುವವರು ಗೊತ್ತುಪಡಿಸಿದ ದಿನಾಂಕದಂದು ತಹಶೀಲ್ದಾರ್ ಕಚೇರಿಯಲ್ಲಿ ರಜಾದಿನ ಹೊರತುಪಡಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ಸಲ್ಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು