30 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಡಿಸಿಎಂ ಚಾಲನೆ
Team Udayavani, Sep 2, 2019, 11:53 AM IST
ಮುಧೋಳ: ನಗರದಲ್ಲಿ ರಸ್ತೆ ಕಾಮಗಾರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿ ಮಾತನಾಡಿದರು.
ಮುಧೋಳ: ಪ್ರಧಾನಿ ನರೇಂದ್ರ ಮೋದಿ ಸಮರ್ಥ ಆಡಳಿತದಿಂದ ದೇಶ-ವಿದೇಶಗಳ ಜನರ ಮನ ಗೆದ್ದಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಮರ್ಥ ಆಡಳಿತದ ಮೂಲಕ ದೇಶದಲ್ಲಿಯೇ ಮಾದರಿ ಸರ್ಕಾರ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ರವಿವಾರ ನಗರದ ಬಸವೇಶ್ವರ ವೃತ್ತದಲ್ಲಿ ರೂ.16.15 ಕೋಟಿ ವೆಚ್ಚದ ವಿಜಯಪುರ-ಬೆಳಗಾವಿ ಹೆದ್ದಾರಿ ಸುಧಾರಣೆ ಹಾಗೂ ನಗರದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಆವರು, ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೃಷ್ಣಾ ನದಿಯಿಂದ ವರ್ಷದ 12 ತಿಂಗಳೂ ನೀರು ದೊರಕುವ ಸ್ಥಳ ಗುರುತಿಸಲಾಗಿದೆ. ಈ ಯೋಜನೆಗೆ ರೂ.30 ಕೋಟಿ ಅಗತ್ಯವಿದ್ದು, ರೂ.21 ಕೋಟಿ ಲಭ್ಯವಿದೆ. ಇನ್ನುಳಿದ 9 ಕೋಟಿ ರೂ. ಮಂಜೂರಾತಿಗಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದುಂಬಾಲು ಬಿದ್ದಿದ್ದೆ. ಆದರೆ ಅವರು ಅದನ್ನು ಮಾಡಲಿಲ್ಲ. ಈಗ ಮಂಜೂರಾತಿಯೊಂದಿಗೆ ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
20 ಕೋಟಿ ವಿಶೇಷ ಅನುದಾನಕ್ಕೆ ಮಂಜೂರಾತಿ ಪಡೆದು ಮುಧೋಳ ನಗರವನ್ನು ಒಂದು ಮಾದರಿ ನಗರವನ್ನಾಗಿ ನಿರ್ಮಿಸುವ ಯೋಜನೆ ರೂಪಿಸಿದ್ದೇನೆ. ಮಳೆ ಪ್ರವಾಹದಿಂದ ರಾಜ್ಯದ 22 ಜಿಲ್ಲೆಗಳ 103 ತಾಲೂಕಿಗೆ ಸುಮಾರು ರೂ.30 ಸಾವಿರ ಕೋಟಿ ಹಣ ನಷ್ಠವಾಗಿದೆ. ಅದಕ್ಕಾಗಿ ವಿಳಂಬವಾಗಬಹುದು ಎಂದರು ಕನಕಗಿರಿ ಶಾಸಕ ಬಸವರಾಜ ದಢೇಸೂಗುರ, ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಸದಸ್ಯರಾದ ರತ್ನಕ್ಕ ತಳೇವಾಡ, ಭೀಮನಗೌಡ ಪಾಟೀಲ, ರನ್ನ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ, ಕೆ.ಆರ್.ಮಾಚಪ್ಪನವರ, ಗುರುರಾಜ ಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ