ಬಾಗಲಕೋಟ-ಕುಡಚಿ ರೈಲುಮಾರ್ಗ ನಿರ್ಮಾಣಕ್ಕೆ ಡಿ.15ರ ಗಡುವು

ರೈಲುಮಾರ್ಗ ನಿರ್ಮಾಣ ಕಾಮಗಾರಿಗೆ ಒತ್ತಾಯಿಸಿ ಡಿ.17 ರಿಂದ ಉಗ್ರ ಹೋರಾಟ

Team Udayavani, Nov 27, 2022, 10:27 PM IST

1-aSsSs

ರಬಕವಿ-ಬನಹಟ್ಟಿ : ರೂ.726 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಬೇಕಿದ್ದ ಬಾಗಲಕೋಟೆ -ಕುಡಚಿ ರೈಲು ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಜನಪ್ರತಿನಿದಿಗಳ ಬೇಜವಾಬ್ದಾರಿಯಿಂದಾಗಿ ಇಂದು ರು.೩೦೦೦ಕೋಟಿ ವೆಚ್ಚಕ್ಕೇರಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಡಿ.15ರೊಳಗೆ ರಾಜ್ಯ ಸರ್ಕಾರ ವಶಪಡಿಸಿಕೊಂಡಿರುವ ಭೂಮಿಯಲ್ಲಿ ರೈಲು ಹಳಿಗಳ ನಿರ್ಮಾಣ ಕಾರ್ಯ ಜರುಗದಿದ್ದರೆ ಡಿ.17 ರಿಂದ ಉಗ್ರವಾದ ಹೋರಾಟವನ್ನು ಕೈಗೊಳ್ಳುವುದಾಗಿ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಕಾಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಭಾನುವಾರದಂದು ರಬಕವಿಯ ಶ್ರೀಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಜರುಗಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 2016 ರಲ್ಲಿ ಖಜ್ಜಿಡೋಣಿವರೆಗೆ ನಿರ್ಮಾಣಗೊಂಡ ಯೋಜನೆಯಿಂದಾಗಿ ಬಾಗಲಕೋಟದಿಂದ ಖಜ್ಜಿಡೋಣಿವರೆಗೆ ಮಾತ್ರ ರೈಲು ಸಂಚಾರ ಆರಂಭಗೊಂಡಿದೆ. ಇದೂವರೆಗೆ ಮುಂದಿನ ಮಾರ್ಗ ರಚನೆಗೆ ಬೇಕಾದ ಕಾಮಗಾರಿ ನಿರ್ವಹಿಸದ ಕಾರಣ ಬೀಳಗಿ, ಮುಧೋಳ, ಜಮಖಂಡಿ ಮತ್ತು ರಬಕವಿ-ಬನಹಟ್ಟಿ ತಾಲೂಕುಗಳ ಜನತೆ ರೈಲು ಸಂಚಾರದಿಂದ ವಂಚಿತರಾಗಲು ಇಲ್ಲಿನ ಜನಪ್ರತಿನಿಧಿಗಳ ಅಸಡ್ಡೆ ಮತ್ತು ಬೇಜವಾಬ್ದಾರಿತನವೇ ಮುಖ್ಯ ಕಾರಣವಾಗಿದೆಯೆಂದು ಆರೋಪಿಸಿದರು.

ಭೂಮಿ ನೀಡಿದ ರೈತರಿಗೆ ಯೋಗ್ಯ ಬೆಲೆ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡಬೇಕು. ನಮ್ಮ ಪ್ರದೇಶದ ಮೂವರು ಸಚಿವರು ಕಳೆದ ಮೂರು ವರ್ಷದಿಂದ ಬರೀ ಭರವಸೆ ನೀಡುತ್ತಾ ಬಂದಿದ್ದಾರೆ. ಬಾಗಲಕೋಟ ಮತ್ತು ಜಮಖಂಡಿ ಎಸಿಗಳು ಭೂಸ್ವಾದೀನ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಯೋಜನೆಯಿಂದ ವಾರ್ಷಿಕ ಶೇ.30 ರಷ್ಟು ಆದಾಯ ಕೈಸೇರಲಿದೆ.

ಭಾರತದಲ್ಲೇ ಅತ್ಯಧಿಕ ಲಾಭದ ರೈಲು ಮಾರ್ಗ ಇದಾಗಿದೆಯಾದರೂ ಕೇಂದ್ರ ಸರ್ಕಾರ ಈ ಯೋಜನೆಗೆ ತ್ವರಿತ ಕ್ರಮ ಕೈಗೊಳ್ಳದೇ ನಮ್ಮ ಭಾಗದ ಜನತೆಗೆ ಅನ್ಯಾಯವೆಸಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.15ರ ವರೆಗೆ ರೇಲ್ವೆ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿ ಚಾಲನೆಗೆ ಗಡುವು ನೀಡಿದ ಬಳಿಕ ಆಗದಿದ್ದಲ್ಲಿ ಡಿ.17 ರಂದು ಬಾಗಲಕೋಟ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಬಳಿಕ ಡಿ.18 ರಂದು ಖಜ್ಜಿಡೋಣಿಯಲ್ಲಿ ಸದ್ಯ ಚಾಲ್ತಿ ಇರುವ ವಾಣಿಜ್ಯ ರೈಲು ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವ ಮತ್ತು ಡಿ.19 ರಂದು ಲೋಕಾಪುರದಲ್ಲಿ ಬೆಳಗಾವಿ ಅದಿವೇಶನಕ್ಕೆ ತೆರಳುವ ಎಲ್ಲಾ ಜನಪ್ರತಿನಿದಿಗಳನ್ನು ತಡೆದು ಪ್ರತಿಭಟಿಸುವುದಾಗಿ ಖಾಜಿ ಪ್ರಕಟಿಸಿದರು.

ಡಿ.20 ರಂದು ಮುಧೋಳ, ಡಿ.21ರಂದು ಜಮಖಂಡಿ, ಡಿ.22 ರಂದು ರಬಕವಿ-ಬನಹಟ್ಟಿ, ಡಿ.23 ರಂದು ತೇರದಾಳ ಮತ್ತು ಡಿ.24 ರಂದು ಕುಡಚಿ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರವಾಗಿದ್ದು, ಈ ಪ್ರದೇಶದ ಸಮಸ್ತ ನಾಗರಿಕರು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.

ಪತ್ರಕರ್ತ ಗುರುರಾಜ ಪೋತ್ನೀಸ್ ಮಾತನಾಡಿ ಜನಾಗ್ರಹಭರಿತ ಪ್ರತಿಭಟನೆಗಳ ಜೊತೆಗೆ ಕಾನೂನು ವ್ಯಾಪ್ತಿಯಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಹೋರಾಟಕ್ಕೆ ಬಲ ನೀಡಲು ಸಲಹೆ ನೀಡಿದರು. ಕಾನೂನು ಪಂಡಿತರೊಡನೆ ಸಮಾಲೋಚಿಸಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಲು ಸಭೆ ಸರ್ವಾನುಮತದ ಒಪ್ಪಿಗೆ ನೀಡಿತು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನತೆಯ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಇದಕ್ಕೆ ಉಗ್ರ ಹೋರಾಟವೇ ತಕ್ಕ ಮಾರ್ಗವಾಗಿದೆಯೆಂದು ಗುಲಾಬಸಾಬ ಅತ್ತಾರ, ದಯಾನಂದ ಬಿಜ್ಜರಗಿ, ಡಾ.ರವಿ ಜಮಖಂಡಿ, ಹಿರಿಯ ಪತ್ರಕರ್ತ ನೀಲಕಂಠ ದಾತಾರ ಮಾತನಾಡಿದರು.

ವೇದಿಕೆಯಲ್ಲಿ ಜಯಶ್ರೀ ಗುಲಬಾಳ, ಮಂಜುಳಾ ಭುಸರಿ ಉಪಸ್ಥಿತರಿದ್ದರು. ಸಂವಾದದಲ್ಲಿ ಸಂಜಯ ತೇಲಿ, ರವಿ ಗಿರಸಾಗರ, ರಾಮಣ್ಣಾ ಹುಲಕುಂದ, ಪ್ರಕಾಶ ಸುಡಾಳ, ಶಿವಾನಂದ ಬಾಗಲಕೋಟಮಠ, ಪ್ರೊ.ಎಂ.ಎಸ್.ಬದಾಮಿ, ಸವಿತಾ ಹೊಸೂರ, ಆನಂದ ಜುಗಳಿ, ರವಿ ಹೇರಲಗಿ ಮುಂತಾದವರಿದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.