ರೈಲು ಮಾರ್ಗ ನಿರ್ಮಾಣಕ್ಕೆ ಡಿ.5ರ ಗಡುವು

ರೈಲು ಮಾರ್ಗ ನಿರ್ಮಾಣ ಕಾಮಗಾರಿಗೆ ಒತ್ತಾಯ; ಡಿ.17ರಿಂದ ಉಗ್ರ ಹೋರಾಟಕ್ಕೆ ನಿರ್ಧಾರ: ಖಾಜಿ

Team Udayavani, Nov 28, 2022, 3:16 PM IST

14

ರಬಕವಿ-ಬನಹಟ್ಟಿ: ರೂ.726 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಬೇಕಿದ್ದ ಬಾಗಲಕೋಟೆ-ಕುಡಚಿ ರೈಲು ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿàಯತೆ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದಾಗಿ ರೂ. 3000 ಕೋಟಿ ವೆಚ್ಚಕ್ಕೇರಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಡಿ.15ರೊಳಗೆ ರಾಜ್ಯ ಸರ್ಕಾರ ವಶಪಡಿಸಿಕೊಂಡಿರುವ ಭೂಮಿಯಲ್ಲಿ ರೈಲು ಹಳಿಗಳ ನಿರ್ಮಾಣ ಕಾರ್ಯ ಜರುಗದಿದ್ದರೆ ಡಿ.17ರಿಂದ ಉಗ್ರ ಹೋರಾಟ ಕೈಗೊಳ್ಳುವುದಾಗಿ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್‌ ಖಾಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಬಕವಿಯ ಶ್ರೀಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ರವಿವಾರ ಜರುಗಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 2016ರಲ್ಲಿ ಖಜ್ಜಿಡೋಣಿವರೆಗೆ ನಿರ್ಮಾಣಗೊಂಡ ಯೋಜನೆಯಿಂದಾಗಿ ಬಾಗಲಕೋಟೆದಿಂದ ಖಜ್ಜಿಡೋಣಿವರೆಗೆ ಮಾತ್ರ ರೈಲು ಸಂಚಾರ ಆರಂಭಗೊಂಡಿದೆ. ಇದೂವರೆಗೆ ಮುಂದಿನ ಮಾರ್ಗ ರಚನೆಗೆ ಬೇಕಾದ ಕಾಮಗಾರಿ ನಿರ್ವಹಿಸದ ಕಾರಣ ಬೀಳಗಿ, ಮುಧೋಳ, ಜಮಖಂಡಿ ಮತ್ತು ರಬಕವಿ-ಬನಹಟ್ಟಿ ತಾಲೂಕುಗಳ ಜನತೆ ರೈಲು ಸಂಚಾರದಿಂದ ವಂಚಿತರಾಗಲು ಇಲ್ಲಿನ ಜನಪ್ರತಿನಿಧಿಗಳ ಅಸಡ್ಡೆ ಮತ್ತು ಬೇಜವಾಬ್ದಾರಿತನವೇ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದರು.

ಭೂಮಿ ನೀಡಿದ ರೈತರಿಗೆ ಯೋಗ್ಯ ಬೆಲೆ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡಬೇಕು. ನಮ್ಮ ಪ್ರದೇಶದ ಮೂವರು ಸಚಿವರು ಕಳೆದ ಮೂರು ವರ್ಷದಿಂದ ಬರೀ ಭರವಸೆ ನೀಡುತ್ತಾ ಬಂದಿದ್ದಾರೆ. ಬಾಗಲಕೋಟೆ ಮತ್ತು ಜಮಖಂಡಿ ಎಸಿಗಳು ಭೂಸ್ವಾಧೀನ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಯೋಜನೆಯಿಂದ ವಾರ್ಷಿಕ ಶೇ.30ರಷ್ಟು ಆದಾಯ ಕೈಸೇರಲಿದೆ. ಭಾರತದಲ್ಲೇ ಅತ್ಯಧಿಕ ಲಾಭದ ರೈಲು ಮಾರ್ಗ ಇದಾಗಿದೆಯಾದರೂ ಕೇಂದ್ರ ಸರ್ಕಾರ ಈ ಯೋಜನೆಗೆ ತ್ವರಿತ ಕ್ರಮ ಕೈಗೊಳ್ಳದೇ ನಮ್ಮ ಭಾಗದ ಜನತೆಗೆ ಅನ್ಯಾಯವೆಸಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.15ರ ವರೆಗೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿ ಚಾಲನೆಗೆ ಗಡುವು ನೀಡಿದ ಬಳಿಕ ಆಗದಿದ್ದಲ್ಲಿ ಡಿ.17ರಂದು ಬಾಗಲಕೋಟೆ ಜಿಲ್ಲಾದಿಕಾರಿಗಳ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಬಳಿಕ ಡಿ.18ರಂದು ಖಜ್ಜಿಡೋಣಿಯಲ್ಲಿ ಸದ್ಯ ಚಾಲ್ತಿ ಇರುವ ವಾಣಿಜ್ಯ ರೈಲು ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವ ಮತ್ತು ಡಿ.19ರಂದು ಲೋಕಾಪುರದಲ್ಲಿ ಬೆಳಗಾವಿ ಅಧಿವೇಶನಕ್ಕೆ ತೆರಳುವ ಎಲ್ಲ ಜನಪ್ರತಿನಿಧಿಗಳನ್ನು ತಡೆದು ಪ್ರತಿಭಟಿಸುವುದಾಗಿ ಖಾಜಿ ಪ್ರಕಟಿಸಿದರು.

ಡಿ.20ರಂದು ಮುಧೋಳ, ಡಿ.21ರಂದು ಜಮಖಂಡಿ, ಡಿ.22ರಂದು ರಬಕವಿ-ಬನಹಟ್ಟಿ, ಡಿ.23ರಂದು ತೇರದಾಳ ಮತ್ತು ಡಿ.24ರಂದು ಕುಡಚಿ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆದು ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧಾರವಾಗಿದ್ದು, ಈ ಪ್ರದೇಶದ ಸಮಸ್ತ ನಾಗರಿಕರು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.

ಪತ್ರಕರ್ತ ಗುರುರಾಜ ಪೋತ್ನಿಸ್‌ ಮಾತನಾಡಿ, ಜನಾಗ್ರಹಭರಿತ ಪ್ರತಿಭಟನೆಗಳ ಜೊತೆಗೆ ಕಾನೂನು ವ್ಯಾಪ್ತಿಯಲ್ಲಿ ಸರ್ವೋತ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಹೋರಾಟಕ್ಕೆ ಬಲ ನೀಡಲು ಸಲಹೆ ನೀಡಿದರು.

ಕಾನೂನು ಪಂಡಿತರೊಡನೆ ಸಮಾಲೋಚಿಸಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಲು ಸಭೆ ಸರ್ವಾನುಮತದ ಒಪ್ಪಿಗೆ ನೀಡಿತು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನತೆಯ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಇದಕ್ಕೆ ಉಗ್ರ ಹೋರಾಟವೇ ತಕ್ಕ ಮಾರ್ಗವಾಗಿದೆಯೆಂದು ಗುಲಾಬಸಾಬ್‌ ಅತ್ತಾರ, ದಯಾನಂದ ಬಿಜ್ಜರಗಿ, ಡಾ| ರವಿ ಜಮಖಂಡಿ, ಹಿರಿಯ ಪತ್ರಕರ್ತ ನೀಲಕಂಠ ದಾತಾರ ಅಭಿಪ್ರಾಯ ಹಂಚಿಕೊಂಡರು.

ಜಯಶ್ರೀ ಗುಲಬಾಳ, ಮಂಜುಳಾ ಭುಸರಿ ಉಪಸ್ಥಿತರಿದ್ದರು. ಸಂವಾದದಲ್ಲಿ ಸಂಜಯ ತೇಲಿ, ರವಿ ಗಿರಸಾಗರ, ರಾಮಣ್ಣಾ ಹುಲಕುಂದ, ಪ್ರಕಾಶ ಸುಡಾಳ, ಶಿವಾನಂದ ಬಾಗಲಕೋಟೆಮಠ, ಪ್ರೊ| ಎಂ.ಎಸ್‌. ಬದಾಮಿ, ಸವಿತಾ ಹೊಸೂರ, ಆನಂದ ಜುಗಳಿ, ರವಿ ಹೇರಲಗಿ ಮುಂತಾದವರಿದ್ದರು.

ಟಾಪ್ ನ್ಯೂಸ್

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿಎಂ ಕುರ್ಚಿಗೆ ಹಲವರ ತಿರುಕನ ಕನಸು: ಯಡಿಯೂರಪ್ಪ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಸಿದ್ದರಾಮಯ್ಯಗೆ ಸೋಲು ಖಚಿತ: ಮುರುಗೇಶ ನಿರಾಣಿ

ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ತೇರದಾಳ: ಮಹಾವೀರ ವೃತ್ತ ಸುತ್ತ ಮಾಂಸಾಹಾರ ಮಾರಾಟ ನಿಷೇಧಕೆ ಕ್ರಮ

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

tdy-17

ತಹಶೀಲ್ದಾರ್‌ ದಾಳಿ: ಉಡುಗೊರೆಗಳು ವಶಕ್ಕೆ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.