ನೇಕಾರರಲ್ಲಿ ಹರ್ಷ ತಂದ ಸಾಲಮನ್ನಾ ಘೋಷಣೆ


Team Udayavani, Jul 27, 2019, 8:26 AM IST

bk-tdy-1

ಬಾಗಲಕೋಟೆ: ನೇಕಾರಿಕೆಯಲ್ಲಿ ತೊಡಗಿರುವ ಕಾರ್ಮಿಕ. (ಸಂಗ್ರಹ ಚಿತ್ರ)

ಬಾಗಲಕೋಟೆ: ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದ ನೇಕಾರರ ಸಾಲಮನ್ನಾ ಘೋಷಣೆ ಮಾಡಿದ್ದು, ನೇಕಾರರ ತವರು ಜಿಲ್ಲೆ ಎಂದೇ ಕರೆಸಿಕೊಳ್ಳುವ ಬಾಗಲಕೋಟೆಯಲ್ಲಿ ಸಂಭ್ರಮ ಮನೆ ಮಾಡಿದೆ.

ರಾಜ್ಯದ 30 ಜಿಲ್ಲೆಗಳ ಪೈಕಿ ಅತಿಹೆಚ್ಚು ನೇಕಾರರಿರುವ ಜಿಲ್ಲೆ ಬಾಗಲಕೋಟೆ. ಜಿಲ್ಲೆಯಲ್ಲಿ ಅಂದಾಜು 40 ಸಾವಿರ ನೇಕಾರರ ಕುಟುಂಬಗಳಿದ್ದು, ಅದರಲ್ಲಿ ಕೈಮಗ್ಗ, ಪಾವರ್‌ಲೂಮ್‌ ನೇಕಾರರಿದ್ದಾರೆ. ಇಲ್ಲಿನ ಇಳಕಲ್ಲ ಸೀರೆ, ಗುಳೇದಗುಡ್ಡದ ಖಣ, ಕಮತಗಿಯ ರೇಷಿಮೆ ಪಟಗಾ, ರಬಕವಿ-ಬನಟ್ಟಿಯ ಖಾದಿ ಬಟ್ಟೆಗಳು ರಾಜ್ಯ ಅಷ್ಟೇ ಅಲ್ಲ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿವೆ.

ಹಲವು ವರ್ಷಗಳ ಬೇಡಿಕೆ: ಕಳೆದ ಎರಡು ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನೇಕಾರರ ಸಾಲಮನ್ನಾ ಮಾಡಿದ್ದರು. ಆಗ 50 ಸಾವಿರ ವರೆಗೆ ಮಿತಿ ಹೇರಿದ್ದರು. ಹೀಗಾಗಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದ ನೇಕಾರರಿಗೆ ಪೂರ್ಣ ಪ್ರಮಾಣ ಸಾಲಮನ್ನಾ ಆಗಿರಲಿಲ್ಲ. ಹೀಗಾಗಿ ಒಂದೇ ಅವಧಿಗೆ ನೇಕಾರರ ಸಂಪೂರ್ಣ ಸಾಲಮನ್ನಾ ಮಾಡಿ, ಋಣಮುಕ್ತರನ್ನಾಗಿ ಮಾಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಕೇಳಿ ಬಂದಿತ್ತು.

ಸಿದ್ದರಾಮಯ್ಯ ಅವರು ನೇಕಾರರ ಸಾಲಮನ್ನಾ ಮಾಡಿದ ವೇಳೆ ರಾಜ್ಯದ 16,813 ಸಾವಿರ ಫಲಾನುಭವಿಗಳ 48.42 ಕೋಟಿ (53.54 ಕೋಟಿ ಅನುಮೋದನೆ ಆಗಿತ್ತು. ಆದರೆ, 48.42 ಕೋಟಿ ಬಿಡುಗಡೆ ಆಗಿತ್ತು) ಮೊತ್ತ ಮನ್ನಾ ಆಗಿತ್ತು. ಆಗ ಜಿಲ್ಲೆಯ 14 ಸಾವಿರ ನೇಕಾರರ, ಸುಮಾರು 38ರಿಂದ 40 ಕೋಟಿ ಸಾಲಮನ್ನಾ ಸೌಲಭ್ಯ ಜಿಲ್ಲೆಯ ನೇಕಾರರಿಗೆ ಲಭಿಸಿತ್ತು.

ಬಾಗಲಕೋಟೆಗೆ ಸಿಂಹ ಪಾಲು: ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರಸ್ತುತ ನೇಕಾರರ 100 ಕೋಟಿ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದು, ಇದರಿಂದ ಜಿಲ್ಲೆಯ ಸುಮಾರು 20 ಸಾವಿರಕ್ಕೂ ಹೆಚ್ಚು ನೇಕಾರ ಕುಟುಂಬಗಳು ಸಾಲಮನ್ನಾ ಸೌಲಭ್ಯ ಪಡೆಯುವ ಅಂದಾಜಿದೆ. ಒಟ್ಟಾರೆ ಸಾಲಮನ್ನಾದಲ್ಲಿ ಈ ಬಾರಿಯೂ ಶೇ.70ರಷ್ಟು ಪಾಲು ಜಿಲ್ಲೆಯ ನೇಕಾರರಿಗೆ ಲಭಿಸಲಿದೆ ಎಂದು ನೇಕಾರರ ಮುಖಂಡರು ಹೇಳಿದ್ದಾರೆ.

ಎಲ್ಲ ಸಾಲಕ್ಕೂ ಅನ್ವಯಿಸಲಿ: ಕೈ ಮಗ್ಗ, ಪಾವರ್‌ಲೂಮ್‌ ನೇಕಾರರ ಜತೆಗೆ ಜಿಲ್ಲೆಯಲ್ಲಿ ಅಸಂಘಟಿತ ನೇಕಾರರಿದ್ದಾರೆ. ಅವರೆಲ್ಲ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಆಗದೇ ಪತ್ತಿನ ಸಹಕಾರಿ ಸಂಘ, ಪಟ್ಟಣ ಬ್ಯಾಂಕ್‌ಗಳು ಸೇರಿ ಇತರೇ ಸಹಕಾರ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿಯ ಸಾಲಮನ್ನಾದಲ್ಲಿ ನೇಕಾರರ ಎಲ್ಲ ವಿಧದ ಸಾಲಮನ್ನಾ ಆಗಬೇಕು. ಯಾವುದೇ ಷರತ್ತು ವಿಧಿಸದೇ, ನೇಕಾರಿಕೆ ಮಾಡುವ ಪ್ರತಿಯೊಬ್ಬ ಸಾಲಮನ್ನಾ ಯೋಜನೆಯಡಿ ಸೇರಲಿ ಎಂದು ನೇಕಾರರು ಒತ್ತಾಯಿಸಿದ್ದಾರೆ.

ಜಿಲ್ಲೆಯ ನೇಕಾರರ ಮುಖಂಡರೆಲ್ಲ ಸೇರಿ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ನೇಕಾರರ 100 ಕೋಟಿ ಸಾಲಮನ್ನಾ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇವು. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ತಲಾ 50 ಸಾವಿರದಂತೆ ಒಟ್ಟು 48.42 ಕೋಟಿ ಸಾಲಮನ್ನಾ ಮಾಡಿದ್ದರು. ಈಗ ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ತಕ್ಷಣ ನೇಕಾರರ ಬಗ್ಗೆ ಕಾಳಜಿ ವಹಿಸಿದ್ದು, ಸಂತಸ ತಂದಿದೆ. ಈ ಯೋಜನೆಯಡಿ ನೇಕಾರರ ಎಲ್ಲ ಹಂತದ ಸಾಲಮನ್ನಾ ಮಾಡಬೇಕು. ಜತೆಗೆ ಬಿಜೆಪಿಯಲ್ಲಿರುವ ನೇಕಾರ ಪ್ರಮುಖರಿಗೆ ರಾಜಕೀಯ ಪ್ರಾಧ್ಯಾನ್ಯತೆ ನೀಡಬೇಕು.• ರವೀಂದ್ರ ಕಲಬುರಗಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.