ಅರಿಷಿನ ಬೀಜಗಳ ಮಾರಾಟದಲ್ಲಿ ಕುಸಿತ

ತಮಿಳುನಾಡಿನ ಸೇಲಂನಿಂದ ಆಗುತ್ತಿಲ್ಲ ಪೂರೈಕೆ

Team Udayavani, May 29, 2020, 10:48 AM IST

ಅರಿಷಿನ ಬೀಜಗಳ ಮಾರಾಟದಲ್ಲಿ ಕುಸಿತ

ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕು ಹಾಗೂ ಸುತ್ತಮುತ್ತಲಿನ ಭಾಗದ ಜನರು ಸಾಕಷ್ಟು ಪ್ರಮಾಣದಲ್ಲಿ ಅರಿಷಿಣ ಹಾಗೂ ಕಬ್ಬು ಬೆಳೆಯುತ್ತಾರೆ. ಕೃಷ್ಣಾ ಮತ್ತು ಘಟಪ್ರಭಾ ಎಡದಂಡೆ ಕಾಲುವೆಯ ಮಧ್ಯದಲ್ಲಿನ ರೈತರ ಪ್ರಮುಖ ವಾಣಿಜ್ಯ ಬೆಳೆ ಅರಿಷಿನವಾಗಿದೆ. ಸದ್ಯ ಅರಿಷಿನಕ್ಕೆ ಸೂಕ್ತ ಬೆಲೆಯೇ ಇಲ್ಲದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅರಿಷಿನ ಬೆಳೆದು ಸಾಕಷ್ಟು ಲಾಭ ಮಾಡಿಕೊಂಡಿದ್ದ ರೈತರು ಇಂದು ಅರಿಷಿನ ಬೆಳೆದು ಹಾನಿ ಅನುಭವಿಸುತ್ತಿದ್ದಾರೆ.

ಈ ಬಾರಿ ಇಲ್ಲಿಯ ರೈತರು ಅರಿಷಿನ ಬಿಟ್ಟು ಬೇರೆ ಬೆಳೆಗಳತ್ತ ಮುಖ ಮಾಡಿದ್ದಾರೆ. ಈ ಸಲ ಅರಿಷಿನ ಬೀಜಗಳನ್ನು ಕೇಳುವವರೆ ಇಲ್ಲದಂತಾಗಿದೆ. ಶೇ. 60ರಷ್ಟು ಅರಿಷಿಣ ಬೀಜಗಳ ಮಾರಾಟ ಕಡಿಮೆಯಾಗಿದೆ ಎನ್ನುತ್ತಾರೆ ಅರಿಸಿನ ಬೀಜಗಳ ಮಾರಾಟಗಾರ ಸ್ಥಳೀಯ ದೇವರಾಜ ರಾಠಿ.

ಏಪ್ರಿಲ್‌ ಆರಂಭದಲ್ಲಿ ಸೇಲಂ ನಿಂದ ಅರಿಷಿನ ಬೀಜದ ಬೆಲೆ ಕ್ವಿಂಟಲ್‌ಗೆ ರೂ. 3200 ಇತ್ತು. ಮೇ ಅಂತ್ಯಕ್ಕೆ ಬೆಲೆ ರೂ.4200 ಏರಿಕೆಯಾಗಿದೆ. ಆದರೆ, ಈಗ ರೈತರು ಸೇಲಂನ ಚಿನ್ನಾ ಅರಿಷಿನ ಬೀಜ ಕೇಳುತ್ತಿದ್ದಾರೆ. ಆದರೆ, ಸೇಲಂನಿಂದ ಇದು ಪೂರೈಕೆಯಾಗುತ್ತಿಲ್ಲ. ಮತ್ತೂಂದು ತಳಿಯ ಕೇವಲ ಸೇಲಂ ಅರಿಷಿನಗಳ ಬೀಜವಿದೆ. ಆದರೆ, ಇದನ್ನು ರೈತರು ಕೇಳುತ್ತಿಲ್ಲ.

ಲಾಕ್‌ಡೌನ್‌ನಿಂದ ಸಾರಿಗೆ ಸಂಪೂರ್ಣವಾಗಿ ಕಡಿತಗೊಂಡಿತು. ಸಾರಿಗೆ ಬಂದಾಗಿದ್ದರಿಂದ ಸೇಲಂನಲ್ಲಿ ಬೀಜ ಮಾರಾಟ ಮಾಡುತ್ತಿದ್ದ ಬೆಳೆಗಾರರು ಅದನ್ನು ಸಂಸ್ಕರಿಸಿ ಅರಿಷಿನವನ್ನಾಗಿ ಮಾಡಿದರು. ಸದ್ಯ ಅಲ್ಲಿಯೇ ಅರಿಷಿನ ಬೀಜಗಳು ಇಲ್ಲದಂತಾಗಿದೆ. ಇದರಿಂದಾಗಿ ಈಗ ಸೇಲಂ ಅರಿಷಿನ ಬೀಜಗಳ ಪೂರೈಕೆಯಾಗುತ್ತಿಲ್ಲ ಎನ್ನುತ್ತಾರೆ ದೇವರಾಜ ರಾಠಿ. ಈ ಬಾರಿ ಅರಿಷಿನ ಬೆಳೆದ ರೈತರು ಇನ್ನೂ ಅರಿಷಿನವನ್ನು ತಮ್ಮ ಮನೆಯಲ್ಲಿಯೇ ಇಟ್ಟುಕೊಂಡಿದ್ದಾರೆ. ಇನ್ನೂ ಸಾಂಗ್ಲಿ ಮಾರುಕಟ್ಟೆ ಆರಂಭವಾಗಿಲ್ಲ. ಆದರೂ ರೈತರು ಮತ್ತೆ ಅರಿಷಿನ ಬೆಳೆಯ ಮೇಲೆ ಭರವಸೆ ಇಟ್ಟು ಮತ್ತೆ ಅರಿಷಿನ ಬೆಳೆಯಲು ಸಜ್ಜಾಗಿದ್ದಾರೆ ಎನ್ನುತ್ತಾರೆ ಜಗದಾಳ ಗ್ರಾಮದ ರೈತ ಸದಾಶಿವ ಬಂಗಿ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.