ವೈದ್ಯಕೀಯ ಕಾಲೇಜಿಗಾಗಿ ದೀಡ್‌ ನಮಸ್ಕಾರ!

ಕರವೇ ಕಾರ್ಯಕರ್ತರ ಬಂಧನ-ಬಿಡುಗಡೆ

Team Udayavani, May 3, 2022, 12:24 PM IST

9

ಬಾಗಲಕೋಟೆ: 2014-15ರಲ್ಲಿ ಬಾಗಲಕೋಟೆಗೆ ಘೋಷಣೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಒತ್ತಾಯಿಸಿ ಕಳೆದ ಒಂದು ವರ್ಷದಿಂದ ವಿವಿಧ ರೀತಿಯ ಹೋರಾಟ ನಡೆಸುತ್ತಿರುವ ಕರವೇ ಕಾರ್ಯಕರ್ತರು ಸೋಮವಾರ ದೀಡ್‌ ನಮಸ್ಕಾರ ಹಾಕುವ ವಿನೂತನ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ|ಅಂಬೇಡ್ಕರ್‌ ಮೂರ್ತಿಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಶಾಸಕರ ನಿವಾಸದವರೆಗೆ ದೀಡ ನಮಸ್ಕಾರ ಹಾಕಿ ಪ್ರತಿಭಟಿಸಲು ಮುಂದಾದರು. ಈ ಹೋರಾಟ ಜಿಲ್ಲಾಡಳಿತ ಭವನದಿಂದ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿ ವೃತ್ತದವರೆಗೆ ಬರುವಷ್ಟರಲ್ಲಿ ಪೊಲೀಸರು ಎಲ್ಲ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಅಲ್ಲಿಂದ ಕಲಾದಗಿ ಪೊಲೀಸ್‌ ಠಾಣೆಗೆ ಕರೆದುಕೊಂಡು ಪ್ರತಿಯೊಬ್ಬರ ವಿವರ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಬೆಳಗ್ಗೆಯಿಂದ ಊಟ ಮಾಡದೇ ದೀಡ ನಮಸ್ಕಾರ ಹಾಕುವ ಹೋರಾಟದಲ್ಲಿ ಪಾಲ್ಗೊಂಡಿದ್ದ ಕರವೇ ಮುಖಂಡ ಆತ್ಮಾರಾಮ ನೀಲನಾಯಕ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು 108 ತುರ್ತು ವಾಹನದ ಮೂಲಕ ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ವೇಳೆ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಧರ್ಮಂತಿ ಮಾತನಾಡಿ, ನಗರಕ್ಕೆ ಕಳೆದ ಏಳು ವರ್ಷಗಳ ಹಿಂದೆಯೇ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ನಗರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಎಲ್ಲ ರೀತಿಯ ಅನುಕೂಲವಿದೆ. ಆದರೆ, ಖಾಸಗಿ ಲಾಭಿ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುತ್ತಿಲ್ಲ. ಈ ವಿಷಯದಲ್ಲಿ ಬಾಗಲಕೋಟೆ ಶಾಸಕರಿಗೆ, ಸಚಿವರು, ಮುಖ್ಯಮಂತ್ರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದರಿಂದ ಈ ಭಾಗದ ಬಡ ಮಕ್ಕಳೂ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಆದರೂ, ಬಡ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಸರ್ಕಾರ ವೈದ್ಯಕೀಯ ಕಾಲೇಜು ಆರಂಭಿಸುತ್ತಿಲ್ಲ. ಬಾಗಲಕೋಟೆಗೆ ಜಿಲ್ಲೆಗೆ ಘೋಷಣೆಯಾದ ಬಳಿಕ ಬೇರೆ ಬೇರೆ ಜಿಲ್ಲೆಗೆ ಘೋಷಣೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಗಿದೆ. ನಮ್ಮ ಜಿಲ್ಲೆಗೆ ಮಾತ್ರ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯ ಶಾಸಕರ ನಿರ್ಲಕ್ಷ್ಯವೂ ಕಾರಣ ಎಂದು ಆರೋಪಿಸಿದರು.

ಪಿಎಸ್‌ಅಮಾನತುಗೊಳಿಸಿ: ದೀಡ ನಮಸ್ಕಾರ ಹೋರಾಟದ ವೇಳೆ ನಮ್ಮನ್ನು ಬಂಧಿಸಿರುವ ನವನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ, ನಮ್ಮನ್ನು ದರೋಡೆಕೋರರಂತೆ ನಡೆಸಿಕೊಂಡಿದ್ದಾರೆ. ಕಲಾದಗಿ ಠಾಣೆವರೆಗೆ ಕರೆದೊಯ್ದು ಕೊಲೆ ಆರೋಪಿಗಳು, ದುಷ್ಕರ್ಮಿಗಳಿಂದ ಪಡೆಯುವಂತೆ ಹಲವು ರೀತಿಯ ಮಾಹಿತಿ ಪಡೆದಿದ್ದಾರೆ. ನಾವೆಲ್ಲ ಊಟ-ನೀರು ಕುಡಿದಿದ್ದೇವೋ ಇಲ್ಲವೋ ಎಂಬುದನ್ನೂ ವಿಚಾರಿಸಲಿಲ್ಲ. ಇದರಿಂದ ತೀವ್ರ ಅಸ್ವಸ್ಥಗೊಂಡ ಆತ್ಮಾರಾಮ ನೀಲನಾಯಕ ಅವರು, ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಇದಕ್ಕೆ ನವನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಯೇ ನೇರ ಹೊಣೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಕರವೇ ನಿಕಟಪೂರ್ವ ಅಧ್ಯಕ್ಷ, ಆಮ್‌ ಆದ್ಮಿ ಪಕ್ಷದ ಮುಖಂಡ ರಮೇಶ ಬದ್ನೂರ, ಭಾಗ್ಯಾ ಬೆಟಗೇರಿ, ಬಸವರಾಜ ಅಂಬಿಗೇರ, ಶಿಲ್ಪಾ ಕಾಳೆ, ರೋಹಿತ ಬಾರಕೇರ, ಡಿ.ಡಿ. ನದಾಫ, ದಾದಾಪೀರ ಶಿವಳ್ಳಿ, ಮೊಹ್ಮದಹುಸೇನ, ಪ್ರಶಾಂತ ನಾಯಕ, ರಮೇಶ ಗೌಡರ, ಆಕಾಶ ಆಸಂಗಿ, ದೇವೇಂದ್ರ ಅಸ್ಕಿ ಪಾಲ್ಗೊಂಡಿದ್ದರು.

ಬಾಗಲಕೋಟೆಗೆ ಕಳೆದ 2014-15ರಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆಯಾಗಿದೆ. ಅನುದಾನ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ನಮ್ಮ ಜಿಲ್ಲೆಗೆ ಘೋಷಣೆಯಾದ ಬಳಿಕ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲಾಗಿದೆ. ಖಾಸಗಿ ಲಾಬಿ ಕಾರಣದಿಂದಲೇ ನಮ್ಮ ನಗರದಲ್ಲಿ ಘೋಷಣೆಯಾದ ಕಾಲೇಜು ಆರಂಭಕ್ಕೆ ಅನುದಾನ ಕೊಡುತ್ತಿಲ್ಲ. ಇದಕ್ಕಾಗಿ ನಾವು ಹಲವು ರೀತಿ ಹೋರಾಟ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಬೂಟ್‌ ಪಾಲಿಶ್‌ ಮಾಡಿ, ಅದರಿಂದ ಬಂದ ಹಣ ಸರ್ಕಾರಕ್ಕೆ ಕೊಟ್ಟಿದ್ದೇವೆ. ಈಗ ಶಾಸಕರ ನಿವಾಸದವರೆಗೆ ದೀಡ ನಮಸ್ಕಾರ ಹಾಕಿ, ಮನವಿ ಸಲ್ಲಿಸಲು ಮುಂದಾದರೆ, ಪೊಲೀಸರು ಬಂಧಿಸಿ, ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂತಹ ಕುತಂತ್ರಕ್ಕೆ ನಾವು ಹೆದರುವುದಿಲ್ಲ. ಇನ್ನೂ ಉಗ್ರ ಹೋರಾಟ ನಡೆಸುತ್ತೇವೆ. ಬಸವರಾಜ ಧರ್ಮಂತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕರವೇ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.