ನಮ್ಮವರ ಒಳಸಂಚಿನಿಂದಲೇ ವಿಧಾನಸಭೆಯಲ್ಲಿ ಸೋಲು: ಸಿದ್ದು ಸವದಿ

ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ

Team Udayavani, Mar 21, 2024, 4:25 PM IST

ನಮ್ಮವರ ಒಳಸಂಚಿನಿಂದಲೇ ವಿಧಾನಸಭೆಯಲ್ಲಿ ಸೋಲು: ಸಿದ್ದು ಸವದಿ

ಉದಯವಾಣಿ ಸಮಾಚಾರ
ಬೀಳಗಿ: ನಮ್ಮವರ ಒಳ ಸಂಚಿನಿಂದ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋಲಬೇಕಾಯಿತೇ ಹೊರತು ಕಾಂಗ್ರೆಸ್‌ನಿಂದಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಣ್ಣಪುಟ್ಟ ಮನಸ್ತಾಪಗಳಿದ್ದರೆ ಅವುಗಳನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೋಸ್ಕರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಮೂಲಕ ದೇಶ
ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಆದ್ದರಿಂದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಗೆಲುವಿಗೆ ಶ್ರಮಿಸಬೇಕು ಎಂದರು.

ಸ್ವಾತಂತ್ರ್ಯ ನಂತರ ಕೇಂದ್ರದಲ್ಲಿ ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ದೇಶ ವಿರೋಧಿ  ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದರು.

ಕಾಂಗ್ರೆಸ್‌ನವರ ಗ್ಯಾರಂಟಿ ಕೆಲವರಿಗೆ ಮುಟ್ಟಿದ್ದು, ಇನ್ನೂ ಕೆಲವರಿಗೆ ಮುಟ್ಟಿಲ್ಲ. ಮೋದಿ ಅವರೇ ದೇಶದ ಜನತೆಯ ಗ್ಯಾರಂಟಿಯಾಗಿದ್ದು, ದೇಶ ಮತ್ತು ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕು. ಬೀಳಗಿ ಮತಕ್ಷೇತ್ರದಲ್ಲಿ 40 ಸಾವಿರ ಮತ ಲೀಡ್‌ ಬರುವಂತೆ ಕಾರ್ಯಕರ್ತರು ತಮ್ಮ ಬೂತ್‌ ಮಟ್ಟದಲ್ಲಿ ಶ್ರಮಿಸಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ. ಬಾಗಲಕೋಟೆ ಮತಕ್ಷೇತ್ರದ ಜನರ ಮೇಲಿನ ಪ್ರೀತಿ, ವಿಶ್ವಾಸದಿಂದ ಮತ್ತೂಮ್ಮೆ ಪಿ.ಸಿ. ಗದ್ದಿಗೌಡರ ಅವರಿಗೆ ಟಿಕೆಟ್‌ ನೀಡಿದ್ದಾರೆ ಎಂದ ಅವರು, ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. ಮತ್ತೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದರು.

ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಲಿಂಗರಾಜ ಪಾಟೀಲ, ಸಂಸದ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ| ಮುರುಗೇಶ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್‌ ಸದಸ್ಯರಾದ ಹಣಮಂತ ನಿರಾಣಿ, ಪಿ.ಎಚ್‌. ಪೂಜಾರ, ಬಿಜೆಪಿ ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಅಶೋಕ ಲಿಂಬಾವಳಿ, ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮೋಹನ ಜಾಧವ, ಎಂ.ಎಂ. ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಕೆ.ವಿ. ಪಾಟೀಲ, ಭರತ ಬಾರಕೇರ, ಹೂವಪ್ಪ ರಾಠೊಡ, ಹೊಳೆಬಸು ಬಾಳಶೆಟ್ಟಿ ಇತರರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.