ಪಾಠ ಮಾಡದೇ ಪರೀಕ್ಷೆಗೆ ಸಜ್ಜಾದ ರಾವಿವಿ!

­ಮತ್ತೂಂದು ಎಡವಟ್ಟು ­ಆತಂಕದಲ್ಲಿ ಪದವಿ ವಿದ್ಯಾರ್ಥಿಗಳು­! ಕಾಲೇಜು ನಡೆದಿದ್ದು ಬರೀ ಒಂದೂವರೆ ತಿಂಗಳು

Team Udayavani, Mar 4, 2021, 5:55 PM IST

degree Collage

ಬಾಗಲಕೋಟೆ: ವಿದ್ಯಾರ್ಥಿಗಳ ಭವಿಷ್ಯ ಕುರಿತು ಮುಂದಾಲೋಚನೆ ಇಲ್ಲದ ರಾಣಿ ಚೆನ್ನಮ್ಮ ವಿವಿಯ ನಿರ್ಧಾರದಿಂದ ಜಿಲ್ಲೆಯ 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಆತಂಕ ಎದುರಿಸುವಂತಾಗಿದೆ. ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯ, ತನ್ನ ಅಧೀನ ವ್ಯಾಪ್ತಿಯ ಪದವಿ ಕಾಲೇಜುಗಳ 1, 3 ಹಾಗೂ 5ನೇ ಸೆಮಿಸ್ಟರಿಯ ಅಂತಿಮ ವರ್ಷದ ಪರೀಕ್ಷೆಗಳನ್ನು ಮಾ.15ರಿಂದ ನಡೆಸಲು ವೇಳಾಪಟ್ಟಿ ಸಿದ್ಧಪಡಿಸಿದೆ.

ಪರೀಕ್ಷಾ ವೇಳಾಪಟ್ಟಿಯನ್ನು ಆಯಾ ಕಾಲೇಜುಗಳಿಗೆ ಕಳುಹಿಸಿದ್ದು, ಇದಕ್ಕೆ ವಿದ್ಯಾರ್ಥಿ ವಲಯ ಹಾಗೂ ಕಾಲೇಜುಗಳ ಪ್ರಾಚಾರ್ಯರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೂರ್ಣ ಪಠ್ಯಕ್ರಮವೇ ಮುಗಿದಿಲ್ಲ. ಈಗಲೇ ಪರೀಕ್ಷೆ ನಡೆಸಿದರೆ, ವಿದ್ಯಾರ್ಥಿಗಳು ಹೇಗೆ ಬರೆಯಬೇಕು ಎಂಬ ಪ್ರಶ್ನೆ ಮಾಡಲಾಗಿದೆ. 85 ಸಾವಿರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಜಿಲ್ಲೆಯಲ್ಲಿ 18 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸೇರಿದಂತೆ ಒಟ್ಟು 65 ಡಿಗ್ರಿ ಕಾಲೇಜುಗಳು ಜಿಲ್ಲೆಯಲ್ಲಿವೆ. ಈ ಅಷ್ಟೂ ಕಾಲೇಜುಗಳಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ. ಮೊದಲು ಆನ್‌ಲೈನ್‌ ಕ್ಲಾಸ್‌ ನಡೆಸಲಾಗಿತ್ತಾದರೂ, ಹಲವಾರು ವಿದ್ಯಾರ್ಥಿಗಳು ಹಲವು ಸಮಸ್ಯೆಯಿಂದ ಆನ್‌ಲೈನ್‌ ಕ್ಲಾಸ್‌ಗೆ ಭಾಗವಹಿಸಲು ಆಗಿರಲಿಲ್ಲ. ಅದರಲ್ಲೂ ಸರ್ಕಾರಿ ಕಾಲೇಜುಗಳು ಆನ್‌ಲೈನ್‌ ಕ್ಲಾಸ್‌ ನಡೆಸಲು ವಿವಿಧ ಸಮಸ್ಯೆ ಎದುರಿಸಿದ್ದವು.

ಈಗ ಕಾಲೇಜು ಆರಂಭಗೊಂಡು ಕೇವಲ ಒಂದೂವರೆ ತಿಂಗಳಾಗಿದೆ. ಕಾಲೇಜು ಆರಂಭಗೊಂಡ ಒಂದೂವರೆ ತಿಂಗಳಲ್ಲೇ ಅಂತಿಮ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂಬುದು ಪಾಲಕರು ಹಾಗೂ ಪ್ರಾಧ್ಯಾಪಕರ ಆತಂಕ. ಶೇ.20ರಷ್ಟು ಪಠ್ಯಕ್ರಮ: ಕಾಲೇಜುಗಳು ಆರಂಭಗೊಂಡು ಒಂದೂವರೆ ತಿಂಗಳಾದ ಹಿನ್ನೆಲೆಯಲ್ಲಿ ಸಧ್ಯ ಶೇ.20ರಷ್ಟು ಪಠ್ಯಕ್ರಮ ಮಾತ್ರ ಆಗಿದೆ. ಇನ್ನೂ ಶೇ.80ರಷ್ಟು ಪಠ್ಯಕ್ರಮ ಮುಗಿದಿಲ್ಲ.ಪಠ್ಯಕ್ರಮ ಮುಗಿಯದೇ ಪರೀಕ್ಷೆ ನಡೆಸಲು ರಾಣಿ ಚೆನ್ನಮ್ಮ ವಿವಿ ಹೇಗೆ ನಿರ್ಧಾರಕ್ಕೆ ಬಂತು ಎಂಬುದು ವಿದ್ಯಾರ್ಥಿಗಳ ಪ್ರಶ್ನೆ. ಒಂದು ವೇಳೆ ಒಂದೂವರೆ ತಿಂಗಳಲ್ಲೇ ಪರೀಕ್ಷೆ ನಡೆಸುವುದಾದರೆ, ಅದಕ್ಕೆ ತಕ್ಕಂತೆ ಪಠ್ಯಕ್ರಮವಾದರೂ ಕಡಿತ ಮಾಡಬೇಕಿತ್ತು. ಈಗಾಗಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ತರಗತಿಗಳಿಗೆ ಇದನ್ನು ಅನ್ವಯಿಸಲಾಗಿದೆ. ಆದರೆ, ಪದವಿ ಕಾಲೇಜಿಗೆ ವಿಶ್ವ ವಿದ್ಯಾಲಯ ಈ ರೀತಿ ನಿರ್ಲಕ್ಷé ಮಾಡುತ್ತಿರುವುದೇಕೆ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಕಳೆದ ವರ್ಷವೂ ಎಡವಟ್ಟು: ಕಳೆದ ವರ್ಷವೂ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯ ಇದೇ ಪರೀಕ್ಷೆ  ವಿಷಯದಲ್ಲಿ ಎಡವಟ್ಟು ಮಾಡಿಕೊಂಡಿತ್ತು. ಪ್ರಶ್ನೆ ಪತ್ರಿಕೆಗಳನ್ನು ವಾಟ್ಸಾಪ್‌, ಇ ಮೇಲ್‌ ಮೂಲಕ ಕಳುಹಿಸಿ, ಮರುದಿನವೇ ಪರೀಕ್ಷೆ ನಡೆಸಲು ಕಾಲೇಜುಗಳಿಗೆ ತಿಳಿಸಿತ್ತು. ಅಲ್ಲದೇ ಆಯಾ ದಿನ ನಿಗದಿಯಾದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಪೂರೈಸದೇ, ಒಂದೆರಡು ದಿನ ಮುಂಚೆ ಇರುವ ವಿಷಯದ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿ, ಎಡವಟ್ಟು ಮಾಡಿತ್ತು. ಇದೀಗ ಪಠ್ಯಕ್ರಮ ಮುಗಿಯದೇ ಪರೀಕ್ಷೆ ನಡೆಸಲು ಮುಂದಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚಲ್ಲಾಟವಾಡುತ್ತಿದೆ ಎಂಬ ಆಕ್ರೋಶ ಕೇಳಿ ಬಂದಿದೆ ಜಿಲ್ಲೆಯಲ್ಲಿ 65 ಪ್ರಥಮಿ ದರ್ಜೆ ಕಾಲೇಜುಗಳಿದ್ದು, 1, 3 ಹಾಗೂ 5ನೇ ಸೆಮಿಸ್ಟರಿಯ ಅಂತಿಮ ಪರೀಕ್ಷೆ ನಡೆಸಲು ರಾಣಿ ಚೆನ್ನಮ್ಮ ವಿವಿ ಆದೇಶಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಾಲೇಜು ಆರಂಭಗೊಂಡು ಈಗ  ಒಂದೂವರೆ ತಿಂಗಳಾಗಿದೆ. ಶೇ.20ರಷ್ಟು ಮಾತ್ರ ಪಠ್ಯಕ್ರಮ ಪೂರ್ಣಗೊಂಡಿದೆ. ಹೀಗಾಗಿ ಪಠ್ಯಕ್ರಮ ಕಡಿತ ಮಾಡಿ, ಪೂರ್ಣ ಪಠ್ಯಕ್ರಮ ಮುಗಿದ ಬಳಿಕ ಪರೀಕ್ಷೆ ನಡೆಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಎಲ್ಲ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ. ಈ ಅಭಿಪ್ರಾಯವನ್ನು ರಾಣಿ ಚೆನ್ನಮ್ಮ ವಿವಿಯ ಕುಲಸಚಿವರು, ಕುಲಪತಿಗಳ ಗಮನಕ್ಕೆ ಲಿಖೀತ ಪತ್ರದ ಮೂಲಕ ತರಲಾಗಿದೆ.  ಡಾ|ಅರುಣಕುಮಾರ ಗಾಳಿ, ಪ್ರಥಮ ದರ್ಜೆ ಕಾಲೇಜುಗಳು ಜಿಲ್ಲಾ ನೋಡಲ್‌ ಅಧಿಕಾರಿ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.