ಈ ವರ್ಷವಾದರೂ ಆರಂಭಗೊಳ್ಳುವುದೇ ಡಿಗ್ರಿ ಕಾಲೇಜು?


Team Udayavani, May 3, 2019, 1:04 PM IST

bagalkote-2-tdy..

ಗುಳೇದಗುಡ್ಡ: ಪಟ್ಟಣದಲ್ಲಿರುವ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು.

ಗುಳೇದಗುಡ್ಡ: ಖಣಗಳಿಗೆ ಹೆಸರುವಾಸಿಯಾದ ಗುಳೇದಗುಡ್ಡ ತಾಲೂಕು ಕೇಂದ್ರವಾಗಿ ವರ್ಷ ಕಳೆದಿದೆ. ಪ್ರಥಮ ದರ್ಜೆ ಕಾಲೇಜು ಆರಂಭವಾಗಲು ಹಣಕಾಸು ಇಲಾಖೆ ಒಪ್ಪಿಗೆಯೊಂದೆ ಬಾಕಿ ಎಂದು ಶಾಸಕ ಸಿದ್ದರಾಮಯ್ಯ ಹೇಳಿದ್ದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿಯಿಲ್ಲ.

ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ವರ್ಷ ಕಳೆಯುತ್ತ ಬಂದರೂ ಪ್ರಥಮ ದರ್ಜೆ ಕಾಲೇಜು ಆರಂಭವಾಗುತ್ತಿಲ್ಲ. ಮೂಲಗಳ ಪ್ರಕಾರ ಇದುವರೆಗೂ ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಪ್ರಸಕ್ತ ವರ್ಷವು ಡಿಗ್ರಿ ಕಾಲೇಜು ಆರಂಭಗೊಳ್ಳುವುದು ಅನುಮಾನ.

2018ರ ಶೈಕ್ಷಣಿಕ ವರ್ಷದಲ್ಲಿ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳಿಗೆ ಗುಳೇದಗುಡ್ಡ ಪಟ್ಟಣಕ್ಕೆ ಕೂಡಲೇ ಪದವಿ ಕಾಲೇಜು ಮಂಜೂರಿ ಮಾಡಲು ತಿಳಿಸಿದ್ದರು. ಇದಕ್ಕೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದರು. ಕರಡು ಪ್ರತಿಗೆ ಅಧೀನ ಕಾರ್ಯದರ್ಶಿ ಒಪ್ಪಿಗೆ ಸಿಕ್ಕಿತ್ತು. ಹಣಕಾಸು ಇಲಾಖೆ ಒಪ್ಪಿಗೆ ಬಾಕಿಯಿದ್ದು, ಶೀಘ್ರ ಆರಂಭಗೊಳ್ಳಲಿದೆ ಎಂದು ಕಳೆದ ವರ್ಷ ಸಿದ್ಧರಾಮಯ್ಯ ಹೇಳಿದ್ದರು. ಮತ್ತೆ ಒಂದು ತಿಂಗಳಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿ ಇಲ್ಲ.

ವರ್ಷಕ್ಕೆ 500 ವಿದ್ಯಾರ್ಥಿಗಳು: ಸದ್ಯ ಪಟ್ಟಣದಲ್ಲಿ ಒಂದೇ ಖಾಸಗಿ ಪದವಿ ಕಾಲೇಜಿದ್ದು, ಅಲ್ಲಿ ಬಿ.ಎ, ಬಿಕಾಂ, ಬಿಎಸ್ಸಿ, ಬಿಸಿಎ ಪದವಿಗಳಿವೆ. ಪಟ್ಟಣದಲ್ಲಿಯೇ ಸುಮಾರು ಐದು ಪಿಯು ಕಾಲೇಜುಗಳಿವೆ. ವರ್ಷಕ್ಕೆ ಸುಮಾರು 500 ವಿದ್ಯಾರ್ಥಿಗಳು ಪಿಯುಸಿ ತೇರ್ಗಡೆ ಹೊಂದಿ ಪದವಿ ಕಲಿಯಲು ಬರುತ್ತಾರೆ. ಎಲ್ಲರಿಗೂ ಒಂದೇ ಕಾಲೇಜಿನಲ್ಲಿ ಪ್ರವೇಶ ದೊರೆಯುವುದು ಕಷ್ಟ.

ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅವರಿಗೆ ಬೇಕಾಗುವ ಐಚ್ಚಿಕ ವಿಷಯಗಳು ಸಿಗುವುದಿಲ್ಲ. ಹೆಚ್ಚಿನ ಡೊನೇಶನ್‌ ಕೊಟ್ಟು ಶಿಕ್ಷಣ ಪಡೆಯುವುದು ಬಡ ನೇಕಾರರಿಗೆ ಕಷ್ಟವಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೂ ಸಹ ತೊಂದರೆಯಾಗುತ್ತದೆ.

ನೇಕಾರರ ಪಟ್ಟಣವಾದ ಗುಳೇದಗುಡ್ಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ ವಿದ್ಯಾರ್ಥಿಗಳು 22ಕಿಮೀ. ಬಾದಾಮಿಯ ಸರಕಾರಿ ಪದವಿ ಕಾಲೇಜಿನತ್ತ ಹಾಗೂ 25 ಕಿಮೀ ದೂರದ ಬಾಗಲಕೋಟೆ ನಗರ ಕಡೆಗೆ ಮುಖ ಮಾಡುವಂತಾಗಿದೆ. ಕಾಲೇಜು ಆರಂಭವಾದರೇ ಬಡ ಕುಟುಂಬದ ಮಕ್ಕಳು ಬೇರೆ ಪಟ್ಟಣಕ್ಕೆ ತೆರಳುವುದು ತಪ್ಪ್ಪುತ್ತದೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.