ಈ ವರ್ಷವಾದರೂ ಆರಂಭಗೊಳ್ಳುವುದೇ ಡಿಗ್ರಿ ಕಾಲೇಜು?


Team Udayavani, May 3, 2019, 1:04 PM IST

bagalkote-2-tdy..

ಗುಳೇದಗುಡ್ಡ: ಪಟ್ಟಣದಲ್ಲಿರುವ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು.

ಗುಳೇದಗುಡ್ಡ: ಖಣಗಳಿಗೆ ಹೆಸರುವಾಸಿಯಾದ ಗುಳೇದಗುಡ್ಡ ತಾಲೂಕು ಕೇಂದ್ರವಾಗಿ ವರ್ಷ ಕಳೆದಿದೆ. ಪ್ರಥಮ ದರ್ಜೆ ಕಾಲೇಜು ಆರಂಭವಾಗಲು ಹಣಕಾಸು ಇಲಾಖೆ ಒಪ್ಪಿಗೆಯೊಂದೆ ಬಾಕಿ ಎಂದು ಶಾಸಕ ಸಿದ್ದರಾಮಯ್ಯ ಹೇಳಿದ್ದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿಯಿಲ್ಲ.

ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ವರ್ಷ ಕಳೆಯುತ್ತ ಬಂದರೂ ಪ್ರಥಮ ದರ್ಜೆ ಕಾಲೇಜು ಆರಂಭವಾಗುತ್ತಿಲ್ಲ. ಮೂಲಗಳ ಪ್ರಕಾರ ಇದುವರೆಗೂ ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಪ್ರಸಕ್ತ ವರ್ಷವು ಡಿಗ್ರಿ ಕಾಲೇಜು ಆರಂಭಗೊಳ್ಳುವುದು ಅನುಮಾನ.

2018ರ ಶೈಕ್ಷಣಿಕ ವರ್ಷದಲ್ಲಿ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳಿಗೆ ಗುಳೇದಗುಡ್ಡ ಪಟ್ಟಣಕ್ಕೆ ಕೂಡಲೇ ಪದವಿ ಕಾಲೇಜು ಮಂಜೂರಿ ಮಾಡಲು ತಿಳಿಸಿದ್ದರು. ಇದಕ್ಕೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದರು. ಕರಡು ಪ್ರತಿಗೆ ಅಧೀನ ಕಾರ್ಯದರ್ಶಿ ಒಪ್ಪಿಗೆ ಸಿಕ್ಕಿತ್ತು. ಹಣಕಾಸು ಇಲಾಖೆ ಒಪ್ಪಿಗೆ ಬಾಕಿಯಿದ್ದು, ಶೀಘ್ರ ಆರಂಭಗೊಳ್ಳಲಿದೆ ಎಂದು ಕಳೆದ ವರ್ಷ ಸಿದ್ಧರಾಮಯ್ಯ ಹೇಳಿದ್ದರು. ಮತ್ತೆ ಒಂದು ತಿಂಗಳಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೂ ಇದುವರೆಗೂ ಕಾಲೇಜು ಆರಂಭದ ಬಗ್ಗೆ ಮಾಹಿತಿ ಇಲ್ಲ.

ವರ್ಷಕ್ಕೆ 500 ವಿದ್ಯಾರ್ಥಿಗಳು: ಸದ್ಯ ಪಟ್ಟಣದಲ್ಲಿ ಒಂದೇ ಖಾಸಗಿ ಪದವಿ ಕಾಲೇಜಿದ್ದು, ಅಲ್ಲಿ ಬಿ.ಎ, ಬಿಕಾಂ, ಬಿಎಸ್ಸಿ, ಬಿಸಿಎ ಪದವಿಗಳಿವೆ. ಪಟ್ಟಣದಲ್ಲಿಯೇ ಸುಮಾರು ಐದು ಪಿಯು ಕಾಲೇಜುಗಳಿವೆ. ವರ್ಷಕ್ಕೆ ಸುಮಾರು 500 ವಿದ್ಯಾರ್ಥಿಗಳು ಪಿಯುಸಿ ತೇರ್ಗಡೆ ಹೊಂದಿ ಪದವಿ ಕಲಿಯಲು ಬರುತ್ತಾರೆ. ಎಲ್ಲರಿಗೂ ಒಂದೇ ಕಾಲೇಜಿನಲ್ಲಿ ಪ್ರವೇಶ ದೊರೆಯುವುದು ಕಷ್ಟ.

ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅವರಿಗೆ ಬೇಕಾಗುವ ಐಚ್ಚಿಕ ವಿಷಯಗಳು ಸಿಗುವುದಿಲ್ಲ. ಹೆಚ್ಚಿನ ಡೊನೇಶನ್‌ ಕೊಟ್ಟು ಶಿಕ್ಷಣ ಪಡೆಯುವುದು ಬಡ ನೇಕಾರರಿಗೆ ಕಷ್ಟವಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೂ ಸಹ ತೊಂದರೆಯಾಗುತ್ತದೆ.

ನೇಕಾರರ ಪಟ್ಟಣವಾದ ಗುಳೇದಗುಡ್ಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ ವಿದ್ಯಾರ್ಥಿಗಳು 22ಕಿಮೀ. ಬಾದಾಮಿಯ ಸರಕಾರಿ ಪದವಿ ಕಾಲೇಜಿನತ್ತ ಹಾಗೂ 25 ಕಿಮೀ ದೂರದ ಬಾಗಲಕೋಟೆ ನಗರ ಕಡೆಗೆ ಮುಖ ಮಾಡುವಂತಾಗಿದೆ. ಕಾಲೇಜು ಆರಂಭವಾದರೇ ಬಡ ಕುಟುಂಬದ ಮಕ್ಕಳು ಬೇರೆ ಪಟ್ಟಣಕ್ಕೆ ತೆರಳುವುದು ತಪ್ಪ್ಪುತ್ತದೆ.

Ad

ಟಾಪ್ ನ್ಯೂಸ್

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

7-kulageri

ಕಾಲುವೆಗೆ ನೀರು ಹರಿಸದಿದ್ದರೆ ಪ್ರತಿಭಟನೆ, ಸಾಮೂಹಿಕ ಆತ್ಮಹ*ತ್ಯೆ: ರೈತರ ಎಚ್ಚರಿಕೆ

13

Jamkhandi ಪ್ರೀ ಆ್ಯಕ್ಟೀವ್‌ ಪೊಲೀಸಿಂಗ್‌ ವ್ಯವಸ್ಥೆ

9

kulageri cross: ಬಾರದ ಮಳೆ; ಬೆಳೆ ಉಳಿಸಿಕೊಳ್ಳಲು ಪರದಾಟ

7

Mudhol: ಕಾಡಂಚಿನ ಜನರ ಸಮಸ್ಯೆಗಳಿಗೆ ಸ್ಪಂದನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.