ನಡುಗಡ್ಡೆ ಸ್ಥಳಾಂತರಕ್ಕೆ ಆಗ್ರಹ


Team Udayavani, Dec 18, 2019, 12:14 PM IST

bk-tdy-4

ಬಾಗಲಕೋಟೆ: ಆಲಮಟ್ಟಿ ಜಲಾಯಶವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ಸಂಪೂರ್ಣ ನಡುಗಡ್ಡೆಯಾಗಿ ಸಂಪರ್ಕ ಕಳೆದುಕೊಳ್ಳುವ ನಗರದ ಕಿಲ್ಲಾ ಭಾಗದ ನಡುಗಡ್ಡೆ ಪ್ರದೇಶ ಸ್ಥಳಾಂತರಿಸಬೇಕು ಎಂದು ನಡುಗಡ್ಡೆ ಹೋರಾಟ ಸಮಿತಿ ಒತ್ತಾಯಿಸಿದೆ.

ಮಂಗಳವಾರ ಕೃಷ್ಣಾ ಮೇಲ್ದಂಡೆ ಯೋಜನೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಎನ್‌. ಜಯರಾಮ್‌ ಅವರಿಗೆ ಹೋರಾಟ ಸಮಿತಿಯಪದಾಧಿಕಾರಿಗಳು, ಸುಮಾರು 45ಕ್ಕೂ ಹೆಚ್ಚು ಸಂತ್ರಸ್ತರು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡರು. ನೂತನ ಆಯುಕ್ತರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ ಹೋರಾಟ ಸಮಿತಿ ಪದಾಧಿಕಾರಿಗಳು ಸಂತ್ರಸ್ತರು, ವಿವಿಧ ಸಮಸ್ಯೆ ಗಮನಕ್ಕೆ ತಂದರು.

ಈ ವೇಳೆ ಹೋರಾಟ ಸಮಿತಿಯ ಕಾರ್ಯದರ್ಶಿ ಅರವಿಂದ ಮುಚಖಂಡಿ ಮಾತನಾಡಿ, ನಡುಗಡ್ಡೆ ಪ್ರದೇಶದ ಸುಮಾರು 1120 ಮನೆಗಳು, ಇಡೀ ಬಾಗಲಕೋಟೆಯ ಸಂಪರ್ಕ ಕಳೆದುಕೊಳ್ಳಲಿವೆ. ಅವುಗಳನ್ನು ಮುಳುಗಡೆ ವ್ಯಾಪ್ತಿಗೆ ತಂದು ಸ್ಥಳಾಂತರಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ. ಬಿಟಿಡಿಎದಿಂದ ಈ ಪ್ರಕ್ರಿಯೆ ನಡೆಸಿತ್ತು. ಆದರೆ, ಜಲ ಸಂಪನ್ಮೂಲ ಇಲಾಖೆ, ಕಾರ್ಯ ಭಾರದ ಒತ್ತಡದ ನೆಪ ಹೇಳಿ, ನಡುಗಡ್ಡೆ ಸ್ಥಳಾಂತರ ಕಾರ್ಯವನ್ನು ಕೈಬಿಟ್ಟಿದೆ. ಇದರಿಂದ ಹಲವು ವರ್ಷಳಿಂದ ನಡೆದ ಹೋರಾಟಕ್ಕೆ ಜಲ ಸಂಪನ್ಮೂಲ ಇಲಾಖೆ ಮಾನ್ಯತೆ ನೀಡಿಲ್ಲ. ಈ ವಿಷಯದ ಸ್ವತಃ ಸ್ಥಳೀಯ ಶಾಸಕರ ಗಮನಕ್ಕೂ ಅಧಿಕಾರಿಗಳು ತಂದಿಲ್ಲ ಎಂದು ತಿಳಿಸಿದರು.

ಸಂತ್ರಸ್ತರಿಗೆ ಮುದ್ರಾಂಕ ಶುಲ್ಕ ವಿನಾಯಿತಿ ನಾಲ್ಕು ವರ್ಷಗಳ ಕಾಲ ಮಾತ್ರವಿದೆ. ವರ್ಷಗಳ ಗಡವು ತೆಗೆಯಬೇಕು. 1991ರಲ್ಲಿ ಬಾಗಲಕೋಟೆ ನಗರಸಭೆಗೆ ಸರ್ಕಾರ, ಲಿಖೀತ ಆದೇಶ ಹೊರಡಿಸಿ, ಮುಳುಗಡೆ ವ್ಯಾಪ್ತಿಗೆ ಬರುವ ಕಟ್ಟಡ, ಖಾಲಿ ನಿವೇಶನ ಸಹಿತ ನಗರದಲ್ಲಿ ಭೂ ಕಂದಾಯ ತೆರಿಗೆ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ, ಮುಳುಗಡೆ ವ್ಯಾಪ್ತಿಯ ಜಾಗೆಗೂ ಭೂ ಕಂದಾಯ ಹೆಚ್ಚಳ ಮಾಡಲಾಗಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಆದರೆ, ಇದನ್ನು ಜೆಓಡಿಸಿ, ಐಟಿಐ, ಡಿಪ್ಲೋಮಾ ಶಿಕ್ಷಣಕ್ಕೆ ಮಾತ್ರ ಸಿಮೀತಗೊಳಿಸಿದೆ. ಸರ್ಕಾರ ಶಿಕ್ಷಣ ಮೀಸಲಾತಿ ವ್ಯಾಖ್ಯಾನ ಬದಲಿಸಿ, ಎಲ್ಲ ರೀತಿಯ ಶಿಕ್ಷಣಕ್ಕೂ ಮೀಸಲಾತಿ ಕಲ್ಪಿಸಬೇಕು. ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಡುಗಡ್ಡೆ ಹೋರಾಟ ಸಮಿತಿಯ ಅಧ್ಯಕ್ಷ ಎ.ಎ. ದಂಡಿಯಾ, ಸಹ ಕಾರ್ಯದರ್ಶಿ ದೀಪಕ ಹಂಚಾಟೆ, ಪ್ರಮುಖರಾದ ವೀರಣ್ಣ ಹೊಸೂರ, ಅಶೋಕ ಘಾಟಗೆ ಉಪಸ್ಥಿತರಿದ್ದರು.

ಶಾಸಕರ ಭೇಟಿ: ಇದೇ ವೇಳೆ ಶಾಸಕ ಡಾ|ವೀರಣ್ಣ ಚರಂತಿಮಠ ಕೂಡ, ಯುಕೆಪಿ ನೂತನ ಆಯುಕ್ತ ಎನ್‌. ಜಯರಾಮ್‌ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಬರಮಾಡಿಕೊಂಡರು. ನಡುಗಡ್ಡೆ ಸಹಿತ ಸಂತ್ರಸ್ತರ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.