ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ


Team Udayavani, Feb 1, 2023, 7:22 PM IST

1-ssdsd

ರಬಕವಿ-ಬನಹಟ್ಟಿ: ಜೈ ಹಟಗಾರ ಜೈ ಜೈ ಹಟಗಾರ, ಚಿಕ್ಕರೇವಣಸಿದ್ಧ ಮಹಾರಾಜಕೀ ಜೈ, ದೇವರ ದಾಸಿಮಯ್ಯ ಮಹಾರಾಜಕೀ ಜೈ ಎಂಬ ಜಯಘೋಷಣೆಗಳ ಮಧ್ಯದಲ್ಲಿ ದೇವರದಾಸಿಮಯ್ಯ ಹಟಗಾರ ಜಗದ್ಗುರು ಪರಮಪೂಜ್ಯ ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಅಂಗವಾಗಿ ನೂತನ ಜಗದ್ಗುರುಗಳ ಪುರಪ್ರವೇಶ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.

ಬೆಳಗ್ಗೆ 9.30 ಕ್ಕೆ ಕೆಎಚ್‌ಡಿಸಿ ಕಾಲೊನಿಯ ದೇವರ ದಾಸಿಮಯ್ಯ ದೇವಸ್ಥಾನದಿಂದ ಆರಂಭಗೊಂಡ ಪುರಪ್ರವೇಶದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ 2 ಕ್ಕೆ ಎಸ್‌ಆರ್‌ಎ ಮೈದಾನದಲ್ಲಿ ಮುಕ್ತಾಯಗೊಂಡಿತು.

ಮೆರವಣಿಗೆ ಸಂಚರಿಸುವ ಬೀದಿಯು ರಂಗೋಲಿಯಿಂದ ಕಂಗೊಳಿಸುತ್ತಿತ್ತು. ಜಗದ್ಗುರುಗಳ ರಥಕ್ಕೆ ರಸ್ತೆಯ ಬದಿಗೆ ನಿಂತ ಭಕ್ತರು ಹೂಮಳೆ ಗೈದರು.

ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆರತಿ ಮತ್ತು ಕುಂಭವನ್ನು ಹೊತ್ತುಕೊಂಡು ಪಂಚಾಕ್ಷರಿ ಮಂತ್ರವನ್ನು ಜಪಿಸುತ್ತ ಮೆರವಣಿಗೆಯಲ್ಲಿ ಸಾಗಿದರು.ಡೊಳ್ಳು ಕುಣಿತ, ಹಳಗೆ ಮೇಳ, ಗೊಂಬೆ ಕುಣಿತ, ಕರಡಿ ಮಜಲು, ಹಾಗೂ ಇನ್ನೀತರ ವಾದ್ಯ ಮೇಳಗಳು ಮೆರವಣಿಗೆಗೆ ಸಾಕಷ್ಟು ಮೆರಗನ್ನು ತಂದವು.

ಇಂಚಲದ ಶಿವಾನಂದ ಭಾರತ ಸ್ವಾಮೀಜಿ, ಆಳಂದದ ರೇವಣಸಿದ್ಧ ಶಿವಶರಣ ಮಂಟಪದ ಚನ್ನಬಸವ ಪಟ್ಟದದೇವರು, ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರರು, ಹಿರೇಮಠದ ಶರಣಬಸವ ಶಿವಾಚಾರ್ಯರು, ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ ಮತ್ತು ಶಾಸಕ ಸಿದ್ದ ಸವದಿ ಮೆರವಣಿಗೆಗೆ ಚಾಲನೆ ನೀಡಿದರು.

ಪೀಠಾರೋಹಣದ ಗೌರವಾಧ್ಯಕ್ಷ ಡಾ.ಎಂ.ಎಸ್.ದಡ್ಡೆನ್ನವರ ಮಾತನಾಡಿ, ಹಟಗಾರು ಜಗದ್ಗುರುಗಳ ಪೀಠ ಸ್ಥಾಪನೆ ಮತ್ತು ಜಗದ್ಗುರುಗಳ ನೇಮಕ ಹೋರಾಟ ಎರಡು ದಶಕಗಳ ಕಾಲದಿಂದ ನಡೆದಿತ್ತು. ಹಟಗಾರರ ಜಗದ್ಗುರುಗಳ ಪೀಠ ಸ್ಥಾಪನೆಯಿಂದಾಗಿ ಹಟಗಾರರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಿದೆ ಮತ್ತ ಸಮಾಜಕ್ಕೆ ಬಲ ಬಂದಂತಾಗಿದೆ.

ಪೀಠ ಸ್ಥಾಪನೆಯಿಂದ ಯುವಕರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಮಾರ್ಗದರ್ಶನ ಮಾಡಲು ಸಹಾಯವಾಗಿದೆ. ಯುವಕರು ಗುರು ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಹಟಗಾರ ಸಮಾಜವನ್ನು ಬೆಳೆಸುವ ನಿಟ್ಟಿನಲ್ಲಿ ಸೂಕ್ತ ಚಿಂತನೆಗಳನ್ನು ಮಾಡಬೇಕು. ಹಟಗಾರ ಜಗದ್ಗುರುಗಳ ಪೀಠಾರೋಹಣಕ್ಕೆ ಅಪಾರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಆಗಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.- ಡಾ.ಎಂ.ಎಸ್.ದಡ್ಡೆನ್ನವರ, ಪೀಠಾರೋಹಣದ ಗೌರವಾಧ್ಯಕ್ಷ

ರಾಜಶೇಖರ ಸೋರಗಾವಿ, ಶ್ರೀಶೈಲ ಧಬಾಡಿ, ಸೋಮು ಗೊಂಬಿ, ಆರ್.ಸಿ.ಘಾಳಿ, ಶ್ರೀಪಾದ ಬಾಣಕಾರ, ಶಂಕರ ಜಾಲಿಗಿಡದ, ಮಲ್ಲಿಕಾರ್ಜುನ ಬಾಣಕಾರ, ರಾಜಶೇಖರ ಮಾಲಾಪುರ, ಶ್ರೀಶೈಲ ಬೀಳಗಿ, ರಾಜು ಅಂಬಲಿ, ಚಂದ್ರಶೇಖರ ಶಿವಪೂಜಿ, ಡಾ.ಪಿ.ವಿ. ಪಟ್ಟಣ, ಎಂ.ಜಿ.ಕೆರೂರ, ಪಂಡಿತ ಪಟ್ಟಣ, ರಾಜೇಂದ್ರ ಭದ್ರನವರ, ಪ್ರಕಾಶ ಮಂಡಿ, ಬಸವರಾಜ ಜಾಡಗೌಡ, ಶಾಂತಾ ಸೋರಗಾವಿ, ಶಾಂತಾ ಮಂಡಿ, ಮಾಲಾ ಬಾವಲತ್ತಿ, ಹೇಮಲತಾ ಪಟ್ಟಣ ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ನೆರೆಯ ಮಹಾರಾಷ್ಟ್ರದಿಂದ ಆಗಮಿಸಿದ ಹಟಗಾರ ಸಮಾಜದ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.