ಮಕ್ಕಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಿ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಮಾದರಿ ; ಮಕ್ಕಳ ಭವಿಷ್ಯ ರೂಪಿಸುವ ಉದ್ದೇಶ

Team Udayavani, Dec 5, 2022, 4:09 PM IST

16

ಬಾಗಲಕೋಟೆ: ಮಕ್ಕಳು ಪಠ್ಯದ ಜತೆಗೆ ಪೂರಕವಾಗಿ ಸಾಹಿತ್ಯ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಹಾಗೂ ಬಾವಿ ಬದುಕು ಸುಂದರವಾಗುತ್ತದೆ. ಹೀಗಾಗಿ ಮಕ್ಕಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಬಾಗಲಕೋಟೆಯ ಉಪ ವಿಭಾಗಾಧಿ ಕಾರಿ ಶ್ವೇತಾ ಬೀಡಿಕರ್‌ ಹೇಳಿದರು.

ನವನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ರವಿವಾರ ನಡೆದ ತಿಂಗಳ ಅತಿಥಿ ವಿಶೇಷ ಕಾರ್ಯಕ್ರಮ ಸರಣಿ-6 ರ ಉತ್ತರಕನ್ನಡ ಜಿಲ್ಲೆಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಅವರ ಕುರಿತಾದ ಸಾಹಿತ್ಯಾವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನೂ ಸಹ ಆಂಗ್ಲ ಮತ್ತು ಕನ್ನಡ ಭಾಷಾ ಸಾಹಿತ್ಯ ಓದಿದವಳು. ಬಾಲ್ಯದಿಂದ ಕಥೆ, ನಾಟಕ, ಕವಿತೆ ಮುಂತಾದ ಸಾಹಿತ್ಯ ಪ್ರಕಾರಗಳನ್ನು ಓದುತ್ತಿದ್ದೆ. ಈ ಹುದ್ದೆಗೆ ಬರುವುದಕ್ಕಿಂತ ಮೊದಲು ಎಸ್‌. ಎಲ್‌. ಭೈರಪ್ಪ, ಕುವೆಂಪು ಹೀಗೆ ವಿವಿಧ ಸಾಹಿತಿಗಳ ಸಾಹಿತ್ಯ ಓದುವ ಹವ್ಯಾಸವಿತ್ತು. ಸದ್ಯ ಕೆಲಸದ ಒತ್ತಡದಲ್ಲಿ ಕಡಿಮೆಯಾಗಿದೆ. ಇನ್ನು ಮುಂದೆ ಓದನ್ನು ಬೆಳೆಸಿಕೊಳ್ಳುತ್ತೇನೆ. ಮಕ್ಕಳಾದ ತಾವು ಸಾಹಿತ್ಯ ಪ್ರಕಾರಗಳಾದ ಕಥೆ, ಕವನ, ನಾಟಕ ಇತ್ಯಾದಿಗಳ ಓದಿನ ಹವ್ಯಾಸ ಬೆಳೆಸಿಕೊಳ್ಳಿ ಎಂದರು.

ಬಾಗಲಕೋಟೆಯ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಶಿವಶಂಕರ ಮುತ್ತಗಿ ತಿಂಗಳ ಅತಿಥಿಗಳ ಸಾಹಿತ್ಯಾವಲೋಕನ ಮಾಡಿದರು. ತಿಂಗಳ ಅತಿಥಿಗಳಾಗಿ ತಮ್ಮಣ್ಣ ಬೀಗಾರ ಸನ್ಮಾನ ಸ್ವೀಕರಸಿ ಮಾತನಾಡಿ, ಬಾಗಲಕೋಟೆ ಕನ್ನಡ ಸಾಹಿತ್ಯ ಪರಿಷತ್ತಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಲೇಖಕರ ಎದುರಲ್ಲಿ ಅವರ ಸಾಹಿತ್ಯ ಕುರಿತು ಅವಲೋಕನ ಮಾಡುತ್ತಿರುವ ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಮಾದರಿಯಾಗಿದೆ. ಮಕ್ಕಳ ಸಾಹಿತ್ಯ ನನಗೆ ತುಂಬಾ ಹಿಡಿಸಿದ್ದರಿಂದ ಅದನ್ನು ಮುಂದುವರಿಸಿದ್ದೇನೆ. ಸುಮಾರು 28 ಮಕ್ಕಳ ಕೃತಿಗಳನ್ನು ರಚಿಸಿದ್ದೇನೆ. ಮಕ್ಕಳ ಮನಸ್ಸನ್ನು ಅರಳಿಸುವ, ಅವರ ಭವಿಷ್ಯವನ್ನು ರೂಪಿಸುವ ಉದ್ದೇಶ ನನ್ನ ಬರವಣಿಗೆಯದಾಗಿದೆ ಎಂದರು.

ತಮ್ಮಣ್ಣ ಬೇಗಾರ ಅವರ ಸಾಹಿತ್ಯ ಓದಿದ ಮಕ್ಕಳು ಅನೇಕ ಪ್ರಶ್ನೆಗಳಿಗೆ ತಮ್ಮಣ್ಣ ಬೇಗಾರ ಉತ್ತರ ನೀಡಿದರು. ಮಕ್ಕಳ ಸಾಹಿತಿ ಸೋಮಲಿಂಗ ಬೇಡರ ಮತ್ತು ಬಿಟಿಡಿಎ ಪ್ರಾಥಮಿಕ ಶಾಲಾ ಮಕ್ಕಳು ಅವರೊಂದಿಗೆ ಸಾಹಿತ್ಯ ಸಂವಾದ ಮಾಡಿದರು.

ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡು-ನುಡಿಗಾಗಿ ಸಾಹಿತ್ಯ ಸೇವೆ ಮಾಡಿರುವವರ ಕೃತಿಗಳ ಅವಲೋಕನದಿಂದ ಸಾಹಿತ್ಯದಲ್ಲಿರುವ ಮೌಲ್ಯಗಳು ಮಕ್ಕಳಿಗೆ ಸ್ಫೂರ್ತಿ ಮತ್ತು ಪ್ರೇರಣೆ ನೀಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಂಕಣಬದ್ಧವಾಗಿದೆ ಎಂದು ಹೇಳಿದರು.

ಬಿಟಿಡಿಎ ಶಾಲೆಯ ಮುಖ್ಯಾಧ್ಯಾಪಕ ಶರಣಪ್ಪ ಬೇವೂರ, ಕಸಾಪ ತಾಲೂಕ ಕೋಶಾಧ್ಯಕ್ಷ ಬಸಲಿಂಗಯ್ಯ ಮಠಪತಿ, ಗೌರವ ಕಾರ್ಯದರ್ಶಿ ಶಂಕರ ಹೂಗಾರ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಸಂಗಮೇಶ ಬಡಿಗೇರ, ಕಥೆಗಾರ ಅನಿಲ ಗುನ್ನಾಪುರ, ಸಂಘಟನಾ ಕಾರ್ಯದರ್ಶಿ ಮುತ್ತು ಬಳ್ಳಾ, ಬಿಟಿಡಿಎ ಶಾಲಾ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದರು. ಅರ್ಜನ ಮತ್ತು ಅಜಯ ಕೋರಿಶೆಟ್ಟರ ಪ್ರಾರ್ಥಿಸಿದರು. ಬಾಗಲಕೋಟೆ ತಾಲೂಕ ಕಸಾಪ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಸ್ವಾಗತಿಸಿದರು. ಮಲ್ಲಿಕಾರ್ಜುನ ಶೆಲ್ಲಿಕೇರಿ ಆಶಯ ನುಡಿ ಹೇಳಿದರು. ಜಿಲ್ಲಾ ಗೌರವ ಕಾರ್ಯದರ್ಶಿ ಡಾ|ಚಂದ್ರಶೇಖರ ಕಾಳನ್ನವರ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕೋಶಾಧ್ಯಕ್ಷ ಡಾ| ಸಿ.ಎಂ.ಜೋಶಿ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.