7 ಫೀವರ್‌ ಕ್ಲಿನಿಕ್‌ಗಳಿಗೆ ಶೆಟ್ಟರ್‌ ಭೇಟಿ

ಸೋಂಕಿನ ಲಕ್ಷಣವಿರುವ ಸಾರ್ವಜನಿಕರಿಗೆ ಪ್ರತ್ಯೇಕ ಆರೋಗ್ಯ ಸೇವೆ

Team Udayavani, Apr 12, 2020, 2:46 PM IST

12-April-30

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ನಗರದಲ್ಲಿ ಸ್ಥಾಪಿಸಿರುವ ಫೀವರ್‌ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಧಾರವಾಡ: ಕೊರೊನಾ ಮುಂಜಾಗೃತಾ ಕ್ರಮವಾಗಿ ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವ ಅವಶ್ಯಕತೆಯನ್ನು ಮನಗಂಡಿರುವ ಸರ್ಕಾರ ರಾಷ್ಟ್ರೀಯ
ನಗರ ಆರೋಗ್ಯ ಅಭಿಯಾನದಡಿಯಲ್ಲಿ ಸ್ಥಾಪಿಸಿರುವ ಫೀವರ್‌ ಕ್ಲಿನಿಕ್‌ಗಳ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್‌ ಶನಿವಾರ ಪರಿಶೀಲಿಸಿದರು.

ತೇಜಸ್ವಿ ನಗರದ ಪುರೋಹಿತ ನಗರದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಫೀವರ್‌ ಕ್ಲಿನಿಕ್‌ಗಳ ಕಾರ್ಯವಿಧಾನ ಪರಿಶೀಲಿಸಿದರು.
ಜಿಲ್ಲಾ ಧಿಕಾರಿ ದೀಪಾ ಚೋಳನ್‌ ಮಾತನಾಡಿ, ಫೀವರ್‌ ಕ್ಲಿನಿಕ್‌ ಗಳನ್ನಾಗಿ ಮಾರ್ಪಡಿಸಿದ ನಗರ ಆರೋಗ್ಯ ಕೇಂದ್ರಗಳಲ್ಲಿ ನೋವಲ್‌ ಕೊರೊನಾ ಸೋಂಕಿನ ಲಕ್ಷಣವಿರುವ ಸಾರ್ವಜನಿಕರಿಗೆ ಪ್ರತ್ಯೇಕ ಆರೋಗ್ಯ ಸೇವೆ ನೀಡಲಾಗುತ್ತಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಮಾನವ ಸಂಪನ್ಮೂಲದಿಂದ ಫೀವರ್‌ ಕ್ಲಿನಿಕ್‌ಗಳನ್ನು ನಡೆಸಲಾಗುತ್ತದೆ.

ಫೀವರ್‌ ಕ್ಲಿನಿಕ್‌ಗೆ ಅವಶ್ಯಕವಾದ ಆರೋಗ್ಯ ಸಲಕರಣೆ ಮತ್ತು ಸಾಮಗ್ರಿಗಳಾದ ಥರ್ಮಲ್‌ ಸ್ಕ್ಯಾನರ್‌, ಎನ್‌- 95 ಮಾಸ್ಕ್, ಹ್ಯಾಂಡ್‌ ಸ್ಯಾನಿಟೈಸರ್‌ ಮತ್ತು ಸುರûಾ ಕವಚಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಅನುದಾನದಲ್ಲಿ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ್‌ ಮದೀನಕರ್‌ ಮಾತನಾಡಿ, ಧಾರವಾಡದ ಜಿಲ್ಲಾಸ್ಪತ್ರೆ, ಮದಾರಮಡ್ಡಿ, ಬಾರಾಕೋಟ್ರಿ, ಪುರೋಹಿತ ನಗರ, ಹುಬ್ಬಳ್ಳಿಯ ಕಿಮ್ಸ್‌, ಚಿಟಗುಪ್ಪಿ ಸಾರ್ವಜನಿಕ ಆಸ್ಪತ್ರೆ ಸೇರಿ ಒಟ್ಟು 7 ಕಡೆಗಳಲ್ಲಿ ಫೀವರ್‌ ಕ್ಲಿನಿಕ್‌ ಗಳನ್ನು ಸ್ಥಾಪಿಸಲಾಗಿದೆ. ಫೀವರ್‌ ಕ್ಲಿನಿಕ್‌ ಗಳ ನಿರ್ದಿಷ್ಟ ಮಾರ್ಗಸೂಚಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ನೀಡಿದ್ದಾರೆ ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿ ಕಾರಿ ಡಾ|ಎಸ್‌.ಎಂ. ಹೊನಕೇರಿ ಮಾತನಾಡಿ, ಫೀವರ್‌ ಕ್ಲಿನಿಕ್‌ಗಳಲ್ಲಿ ಉಪಯೋಗಿಸಿದ ಮಾಸ್ಕ್, ಗ್ಲೌಸ್‌ ಹಾಗೂ ಇತರೆ ವಸ್ತುಗಳನ್ನು ಎಚ್ಚರಿಕೆಯಿಂದ ಜೈವಿಕ ವೈದ್ಯಕೀಯ ತಾಜ್ಯ ನಿರ್ವಹಣೆ ಕಾಯ್ದೆ ಅನ್ವಯ ವಿಲೇವಾರಿ ಮಾಡಲಾಗುವುದು.ಆಪ್ತ ಸಮಾಲೋಚನೆ ಮತ್ತು ಐಇಸಿ ಚಟುವಟಿಕೆ ನಡೆಸಲಾಗುವುದು. ಖಾಸಗಿ ಕ್ಲಿನಿಕ್‌, ಆಸ್ಪತ್ರೆಗಳು ಫೀವರ್‌ ಕ್ಲಿನಿಕ್‌ ಗಳಾಗಿ ಕಾರ್ಯ ನಿರ್ವಹಿಸಲು ಇಚ್ಚಿಸಿದಲ್ಲಿ ಹೆಸರು ನೊಂದಾಯಿಸಿ ಅವರಿಗೆ ಅವಶ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಲಾಗುವುದೆಂದು ಸಚಿವರಿಗೆ ಮಾಹಿತಿ ನೀಡಿದರು. ಸಚಿವ ಶೆಟ್ಟರ್‌ ಅವರು ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡುವ ಕೊಠಡಿ, ಲಸಿಕಾ ಕೊಠಡಿ ಹಾಗೂ ಔಷಧ ಸಂಗ್ರಹಣೆ, ಪ್ರಯೋಗಾಲಯಗಳಿಗೂ ಭೇಟಿ ನೀಡಿ ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ| ಪರಶುರಾಮ ಎಫ್‌. ಕೆ.ಸೇರಿದಂತೆ ಶುಶ್ರೂಷಕಿಯರು, ಸಹಾಯಕ ಸಿಬ್ಬಂದಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.