ಡಿಜಿಟಲ್‌ಗೆ ಬದಲಾದ ಪತ್ರಿಕೋದ್ಯಮ: ಆನ್‌ಲೈನ್‌ನಲ್ಲಿ ಪತ್ರಿಕಾ ದಿನಾಚರಣೆ

ಓದುವ-ಮಾತನಾಡುವ ಕೌಶಲ್ಯ ಬೆಳೆಸಿಕೊಳ್ಳಲು ಸಲಹೆ

Team Udayavani, Jul 2, 2020, 11:24 AM IST

ಡಿಜಿಟಲ್‌ಗೆ ಬದಲಾದ ಪತ್ರಿಕೋದ್ಯಮ: ಆನ್‌ಲೈನ್‌ನಲ್ಲಿ ಪತ್ರಿಕಾ ದಿನಾಚರಣೆ

ಬಾಗಲಕೋಟೆ: ಬಸವೇಶ್ವರ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ಹಮ್ಮಿಕೊಂಡಿದ್ದ ಆನ್‌ಲೈನ್‌ ಪತ್ರಿಕಾ ದಿನಾಚರಣೆಯಲ್ಲಿ ಡಾ| ತಹಮೀನಾ ಕೋಲ್ಹಾರ ಮಾತನಾಡಿದರು.

ಬಾಗಲಕೋಟೆ: ಆಧುನಿಕತೆಗೆ ತಕ್ಕಂತೆ ಇಂದು ಪತ್ರಿಕೋದ್ಯಮವೂ ಡಿಜಿಟಲೀಕರಣವಾಗಿ ಮಾರ್ಪಟ್ಟಿದೆ. ಮಾಧ್ಯಮಗಳು ಸುದ್ದಿಯೊಂದಿಗೆ ಮನರಂಜನೆ, ಮಾಹಿತಿ
ಹಾಗೂ ವಿವಿಧ ವಿಷಯ ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ|ತಹಮೀನಾ ಕೋಲ್ಹಾರ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಿಂದ ಬುಧವಾರ ಆನ್‌ಲೈನ್‌ನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ವಾರ ಪತ್ರಿಕೆಯೊಂದಿಗೆ ಆರಂಭವಾದ ಪತ್ರಿಕಾ ರಂಗ, ಈಗ ದಿನ ಪತ್ರಿಕೆಯಾಗಿ ಹೊರಹೊಮ್ಮಿದೆ. 15 ವರ್ಷಗಳ ಈಚೆಗೆ ಪತ್ರಿಕೋದ್ಯಮ ಪ್ಯಾಷನ್‌ ಆಗಿ
ಮಾರ್ಪಟ್ಟಿದೆ. ಈಗಿನ ಕಾಲದಲ್ಲಿ ಮ್ಯಾಗಜೀನ್‌, ಪತ್ರಿಕೆ, ಟಿ.ವಿ, ರೇಡಿಯೋ, ಯೂಟೂಬ್‌ ಹೀಗೆ ವಿವಿಧ ಮಾಧ್ಯಮಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ. ಓದುಗರಿಗೆ ಅನುಕೂಲವಾಗಲು
ಮೊಬೈಲ್‌ನಲ್ಲಿ ಈ-ಪೇಪರ್‌ ಕಲ್ಪಿಸಿಕೊಟ್ಟಿದೆ.  ಓದುಗರಿಗೆ ಅನಕೂಲಕ್ಕೆ ತಕ್ಕಂತೆ ಮಾಧ್ಯಮವೂ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ| ವಿ.ಎಸ್‌.ಕಟಗಿಹಳ್ಳಿಮಠ ಮಾತನಾಡಿ, ಪತ್ರಿಕೋದ್ಯಮ ಇಂದು ಬಹಳ ಮಹತ್ವ ಪಡೆದಿದೆ. ಹಳ್ಳಿ ವಿದ್ಯಾರ್ಥಿಗಳು ಪತ್ರಕರ್ತರಾಗಿ ಹೊರಹೊಮ್ಮಬೇಕು ಎನ್ನುವ ಉದ್ದೇಶದಿಂದ ನಮ್ಮ ಜಿಲ್ಲೆಯಲ್ಲಿ ಬಿವಿವಿ ಸಂಘವು ಮುಧೋಳ ಮತ್ತು ಬಾಗಲಕೋಟೆಯ ಪದವಿ ಮಹಾವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಭಾಗ ಆರಂಭಿಸಿ ಹಳ್ಳಿಯ ವಿದ್ಯಾರ್ಥಿಗಳಿಗೂ ಪತ್ರಿಕೋದ್ಯಮ ವಿಭಾಗ ಪರಿಚಯ ಮಾಡಿಕೊಟ್ಟಿದೆ. ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಪತ್ರಿಕೋದ್ಯಮ ಧರ್ಮ ಪಾಲಿಸಬೇಕು. ಪತ್ರಕರ್ತರಾಗುವ ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಇರಬೇಕು ಎಂದರು.

ಸ್ವಾತಂತ್ರ್ಯ ಸಂದರ್ಭದಲ್ಲಿ ಪತ್ರಿಕೆಗಳು ಗಾಂಧಿ, ಅಂಬೇಡ್ಕರ್‌ ಹಾಗೂ ರಾಷ್ಟ್ರೀಯ-ಅಂತಾರಾಷ್ಟ್ರೀಯ ಸುದ್ದಿಗಳು ಜನರಿಗೆ ತಲುಪಿಸಿವೆ. ಅಂದಿನಿಂದ ಇಲ್ಲಿಯವರೆಗೆ ಜನರಿಗೆ ಸುದ್ದಿ ತಲುಪಿಸುವ ಕಾರ್ಯ ಮಾಡುತ್ತಿವೆ. ಕೇಂದ್ರ-ರಾಜ್ಯ ಸರ್ಕಾರ ಮಾಡಲು ಸಾಧ್ಯವಿರದ ಕೆಲಸಗಳು ಮಾಧ್ಯಮ ಮೂಲಕ ಸಾಧ್ಯವಿದೆ. ಆದ್ದರಿಂದ, ಭಾರತದಲ್ಲಿ ಕೋವಿಡ್ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದೆ. ಪತ್ರಕರ್ತರು ತಮ್ಮ ಜೀವದ ಹಂಗು ತೊರೆದು ಕೊರೊನಾ ಸಮಯದಲ್ಲಿ ಹೋರಾಡಿದ್ದಾರೆ ಎಂದರು.

ಈ ವೇಳೆ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ| ಬಿ.ಆರ್‌. ಪಾಟೀಲ, ಸಾಂಸ್ಕೃತಿಕ ಚಟುವಟಿಕೆ ಸಮಿತಿ ಸಂಯೋಜಕ ಪ್ರೊ| ಎಸ್‌. ಆರ್‌. ಮೂಗನೂರಮಠ ಇತರರು ಇದ್ದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ| ಡಿ.ಎಚ್‌. ಪಾಟೀಲ ಸ್ವಾಗತಿಸಿದರು. ಪ್ರೊ| ಎಸ್‌.ವಿ. ಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪುಷ್ಪಾ ಪಾಟೀಲ ವಂದಿಸಿದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಈ ಕ್ಷೇತ್ರದಲ್ಲಿ ಹಲವಾರು ರೀತಿಯ ಉದ್ಯೋಗಗಳಿವೆ. ರಿಪೋರ್ಟಿಂಗ್‌, ಎಡಿಟಿಂಗ್‌, ಜಾಹೀರಾತು ವಿಭಾಗ, ಫೋಟೋಗ್ರಾಫರ್‌ ಹೀಗೆ ವಿವಿಧ
ವಿಭಾಗಗಳಲ್ಲಿ ಕೆಲಸಗಳು ಸಿಗಲಿವೆ. ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮಾತನಾಡುವ ಶೈಲಿ ಕಲಿಯಬೇಕು. ಒಬ್ಬ ಪತ್ರಕರ್ತರಾಗಲು ಶಬ್ದ ಸಂಗ್ರಹ ಬಹಳ ಮುಖ್ಯ. ಅದನ್ನೂ ವಿದ್ಯಾರ್ಥಿಗಳೂ ಪತ್ರಿಕೋದ್ಯಮ ಕಲಿಯುವ ಹಂತದಲ್ಲಿಯೇ ರೂಢಿಸಿಕೊಳ್ಳಬೇಕು. ಡಾ| ತಹಮೀನಾ ಕೋಲ್ಹಾರ, ಸಹಾಯಕ ಪ್ರಾಧ್ಯಾಪಕಿ

ಟಾಪ್ ನ್ಯೂಸ್

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.