![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ನಿಷ್ಕ್ರಿಯಗೊಂಡ ಬಾಗಲಕೋಟೆ ನಗರಸಭೆ ಆಡಳಿತ
ನಗರಸಭೆ ಆಡಳಿತ •ನಿತ್ಯ ಸ್ಥಗಿತಗೊಳ್ಳುತ್ತಿವೆ ಕೊಳವೆ ಬಾವಿಗಳು •ಕುಡಿಯುವ ನೀರಿನ ಪ್ರತ್ಯೇಕ ವ್ಯವಸ್ಥೆಗಿಲ್ಲ ತಯಾರಿ
Team Udayavani, May 3, 2019, 1:23 PM IST
![bagalkote-4-tdy..](https://www.udayavani.com/wp-content/uploads/2019/05/bagalkote-4-tdy..-552x465.jpg)
ಬಾಗಲಕೋಟೆ: ನಗರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯಯಗೊಂಡಿದೆ ಎಂಬ ಆರೋಪ ಪ್ರಬಲವಾಗಿ ಕೇಳಿಬರುತ್ತಿದೆ.
ನಿಜ, ಇಡೀ ನಗರದ ಮೂಲ ಸೌಲಭ್ಯದ ಜವಾಬ್ದಾರಿ ಹೊತ್ತ ನಗರಸಭೆಯಂತೂ, ಸದ್ಯಕ್ಕೆ ಇದ್ದೂ ಇಲ್ಲದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ನಗರದ ಸ್ವಚ್ಛತೆಯಿಂದ ಹಿಡಿದು ಕುಡಿಯುವ ನೀರಿನ ಸಮಸ್ಯೆ ಎಲ್ಲೆ ಕಂಡರೂ ತಕ್ಷಣ ಸ್ಪಂದಿಸುವ ಕ್ರಿಯಾಶೀಲತೆ ಹೊಂದಿದ್ದ ಅಧಿಕಾರಿಗಳೆಲ್ಲ ಈಗ ನಿರ್ಲಿಪ್ತಗೊಂಡಿದ್ದಾರೆ ಎಂಬ ಅಸಮಾಧಾನ, ನಗರಸಭೆಯ ಸಿಬ್ಬಂದಿಯಿಂದಲೇ ಕೇಳಿ ಬರುತ್ತಿದೆ.
ಸಮನ್ವಯತೆ ಇಲ್ಲ: ಸದ್ಯ ಬಿರು ಬೇಸಿಗೆಯಿಂದ ಜನರು ಕಂಗೆಟ್ಟಿದ್ದಾರೆ. ಹನಿ ನೀರಿಗೂ ಪರಿತಪಿಸುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾದ ನಗರಸಭೆಯ ಅಧಿಕಾರಿಗಳಲ್ಲಿ ಸಮನ್ವಯತೆ ಕೊರತೆ ಇದೆ ಎನ್ನಲಾಗುತ್ತಿದೆ. ನಗರಸಭೆಯ ಕಿರಿಯ ಸಹಾಯಕ ಅಭಿಯಂತರ ನವೀದ ಖಾಜಿಯಂತಹ ಕೆಲವೇ ಕೆಲವರು ಮಾತ್ರ, ಎಲ್ಲ ಜವಾಬ್ದಾರಿ ನಿರ್ವಹಿಸಿ ಕೆಲಸ ಮಾಡುತ್ತಿದ್ದಾರೆ. ಅವರೊಂದಿಗೆ ಕೈಜೋಡಿಸಿ, ಇತರೇ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನಲಾಗಿದೆ.
ಇನ್ನು ನಗರಸಭೆಯ ಪೌರಾಯುಕ್ತರಂತೂ ಒಮ್ಮೆಯೂ ನಗರ ಪ್ರದಕ್ಷಿಣೆ ಹಾಕಿಲ್ಲ. ಯಾವ ಬಡಾವಣೆಯಲ್ಲಿ ಯಾವ ಸಮಸ್ಯೆ ಇದೆ ಎಂದು ತಿಳಿದಿಲ್ಲ. ತಮ್ಮದೇ ನಗರಸಭೆಯ ಸಿಬ್ಬಂದಿ, ಅಧಿಕಾರಿಗಳ ಕೈಗೂ ಅವರು ಸಿಗಲ್ಲ. ಇನ್ನು ನಗರದ ಜನರ ಕೈಗೆ ಸಿಗುವುದು ದೂರದ ಮಾತು ಎಂಬ ಅಸಮಾಧಾನ ನಗರಸಭೆ ಕೆಲ ಸದಸ್ಯರು ವ್ಯಕ್ತಪಡಿಸುತ್ತಿದ್ದಾರೆ.
ಹಿನ್ನೀರಿದ್ದರೂ ಕೊಳವೆ ಬಾವಿಯೇ ಗತಿ: ಮುಳುಗಡೆ ನಗರದ ಪರಿಸ್ಥಿತಿ ಹೇಗಿದೆ ಎಂದರೆ, ಇಲ್ಲಿ ಹೇರಳ ನೀರಿದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕ್ರಿಯಾಶೀಲತೆ ಜಿಲ್ಲಾಡಳಿತ ಅಥವಾ ನಗರಸಭೆಗೆ ಇಲ್ಲ. ನವನಗರದ ಎಲ್ಲ ಸೆಕ್ಟರ್ಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಬಿಟಿಡಿಎ ಮಾಡುತ್ತದೆ. ಇನ್ನುಳಿದ ಹಳೆಯ ಬಾಗಲಕೋಟೆ, ವಿದ್ಯಾಗಿರಿ ಏರಿಯಾಗಳಿಗೆ ನಗರಸಭೆ ನೀರು ಪೂರೈಕೆ ಮಾಡಬೇಕು. ಆದರೆ, ಇಲ್ಲಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ವ್ಯವಸ್ಥೆ ಬಿಟ್ಟರೆ, ಪರ್ಯಾಯ ವ್ಯವಸ್ಥೆ ಇಲ್ಲ. ಕೋಟ್ಯಂತರ ಖರ್ಚು ಮಾಡಿ, ಯೋಜನೆ ಕೈಗೊಂಡರೂ, ಅದನ್ನು ಸರಿಯಾಗಿ ಅನುಷ್ಠಾನ ಮಾಡುವ ಗೋಜಿಗೆ ಯಾರೂ ಹೋಗಿಲ್ಲ.
ಒಂದೆಡೆ ಹೇರಳ; ಮತ್ತೂಂದೆಡೆ ನೀರಿಲ್ಲ: ನಗರದ ಬಹುತೇಕ ಕಡೆ ಕೊಳವೆ ಬಾವಿಯಿಂದ ನೀರು ಕೊಡುತ್ತಿದ್ದು, ಆಯಾ ಬಡಾವಣೆಗಳ ಜನರೇ ಕೊಳವೆ ಬಾವಿಯ ವಿದ್ಯುತ್ ಪಂಪಸೆಟ್ ಆರಂಭಿಸಿ, ಅವರೇ ಬಂದ್ ಮಾಡುವ ಸಂಪ್ರದಾಯವಿದೆ. ಹೀಗಾಗಿ ಒಂದೊಂದು ಏರಿಯಾದಲ್ಲಿ 24 ಗಂಟೆಯೂ ನೀರು ಹರಿದರೆ, ಕೆಲವೊಂದು ಏರಿಯಾಗಳಲ್ಲಿ ನೀರು ಕೇಳಿದರೂ ಸಿಗುವ ಪರಿಸ್ಥಿತಿ ಇಲ್ಲ. ನಗರಸಭೆಯಿಂದ ನಿತ್ಯ ಸಮಯ ನಿಗದಿಮಾಡಿ, ಎಲ್ಲ ಬಡಾವಣೆಗಳಿಗೂ ಸರಿಯಾಗಿ ನೀರು ಒದಗಿಸಬೇಕು ಎಂಬುದು ಜನರ ಒತ್ತಾಯ.
ಕೋಟಿ ಖರ್ಚಾದರೂ ಬಾರದ ನೀರು: ನಗರ, ವಿದ್ಯಾಗಿರಿ, ನವನಗರ ಏರಿಯಾದ ಜನರಿಗೆ ಕುಡಿಯುವ ನೀರು ಪೂರೈಕೆಗಾಗಿಯೇ 72 ಕೋಟಿ ಖರ್ಚು ಮಾಡಿ, ಹೆರಕಲ್ ಮೂಕಿಯಿಂದ ನಗರಕ್ಕೆ ನೀರು ಸರಬಾರು ಯೋಜನೆಯನ್ನು 2013ರಲ್ಲೇ ಆರಂಭಿಸಲಾಗಿದೆ. ಅದು ಈ ವರೆಗೂ ಪೂರ್ಣಗೊಂಡು, ಜನರ ಬಾಯಿಗೆ ಆ ನೀರು ಬಿದ್ದಿಲ್ಲ ಎಂದರೆ, ಇಲ್ಲಿನ ಆಡಳಿತ, ಜನಪರ ಕಾಳಜಿ ಎಷ್ಟಿದೆ ಎಂಬುದು ಅರಿಯಬೇಕಾಗುತ್ತದೆ ಎಂದು ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸುತ್ತಾರೆ.
72 ಕೋಟಿ ವೆಚ್ಚದ ಹೆರಕಲ್ದಿಂದ ಕುಡಿಯುವ ನೀರು ಪೂರೈಕೆ ಯೋಜನೆ ಜತೆಗೆ ನಗರದ ಸಿಮೆಂಟ್ ಕ್ವಾರಿಯಿಂದ ನಗರದ ಜನರಿಗೆ ನಿತ್ಯ ತಲಾ ಒಬ್ಬರಿಗೆ 133 ಲೀಟರ್ ನೀರು ಕೊಡುವ 8 ಕೋಟಿ ವೆಚ್ಚದ ಪ್ರತ್ಯೇಕ ಯೋಜನೆಯೂ ಇದೆ. ಅದೂ ಕೂಡ ಅನುಷ್ಠಾನಗೊಂಡಿಲ್ಲ. ಕೇವಲ ಒಂದು ಸರ್ಕಾರದವರು ಭೂಮಿಪೂಜೆ ಮಾಡಿದ್ದರೆ, ಇನ್ನೊಂದು ಸರ್ಕಾರದವರು ಆ ಯೋಜನೆಯ ಉದ್ಘಾಟನೆ ಮಾಡಿ, ಪ್ರಚಾರ ಪಡೆದರು. ಆದರೆ, ಜನರಿಗೆ ಮಾತ್ರ ನೀರು ಪೂರೈಕೆಯಾಗುತ್ತಿಲ್ಲ.
ಇನ್ನು ಕಳೆದ ಅಕ್ಟೋಬರ್ನಲ್ಲಿಯೇ ನಗರದ 35 ವಾರ್ಡಗಳಿಗೆ ಹೊಸ ಸದಸ್ಯರು ಆಯ್ಕೆಯಾದರೂ ಈ ವರೆಗೆ ಅವರ ಕೈಗೆ ಅಧಿಕಾರ ಸಿಕ್ಕಿಲ್ಲ. ನಗರಸಭೆಯಲ್ಲಿ ಅವರ ಮಾತು ಅಧಿಕಾರಿಗಳು ಕೇಳುತ್ತಿಲ್ಲ. ಹೀಗಾಗಿ ಜನರು ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಲೂ ಆಗುತ್ತಿಲ್ಲ. ಅಲ್ಲದೇ ಈ ಕ್ಷೇತ್ರದ ಶಾಸಕರು ಒಂದು ಪಕ್ಷದವರಿದ್ದರೆ, ರಾಜ್ಯದಲ್ಲಿ ಸರ್ಕಾರ ಮತ್ತೂಂದು ಪಕ್ಷದ್ದು. ಇದೆಲ್ಲದರ ಮಧ್ಯೆ ಜನರು, ನಮ್ಮ ಸಮಸ್ಯೆ ಯಾರಿಗೆ ಹೋಳ್ಳೋದು ಎಂಬ ಗೊಂದಲದಲ್ಲೂ ಇದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 250 ಕೊಳವೆ ಬಾವಿಗಳಿವೆ. ಅದರಲ್ಲಿ ಕೆಲವೆಡೆ ನೀರು ಕಡಿಮೆಯಾಗುತ್ತಿದೆ. ನೀರು ಕಡಿಮೆಯಾದ ಕೊಳವೆಯ ಪಕ್ಕದಲ್ಲಿ ಮತ್ತೂಂದು ಕೊಳವೆ ಬಾವಿಗಳಿದ್ದು, ಅವುಗಳಿಂದ ಸದ್ಯಕ್ಕೆ ನೀರು ಕೊಡಲಾಗುತ್ತಿದೆ. ನಗರದಲ್ಲಿ ನೀರಿನ ಸಮಸ್ಯೆ ಅಷ್ಟೊಂದು ಗಂಭೀರತೆ ಇಲ್ಲ. -ನವೀದ ಖಾಜಿ ನಗರಸಭೆ ಸಹಾಯಕ ಅಭಿಯಂತರ
•ವಿಶೇಷ ವರದಿ
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.