ಕನ್ನಡ ಕಟ್ಟುವ ಕೆಲಸ ನಿರಂತರ ಸಾಗಲಿ: ಪಾಟೀಲ ಆಶಯ


Team Udayavani, Oct 15, 2018, 4:18 PM IST

15-october-17.gif

ಹಾರೂಗೇರಿ: ಸರಕಾರಿ ಪೋಷಿತ ಸಮ್ಮೇಳನಗಳಿಗಿಂತ ಸ್ವಯಂ ಪ್ರೇರಿತ ಸಂಘಟನೆಗಳು ಕನ್ನಡ ಕಟ್ಟುವ ಕಾಯಕದಲ್ಲಿ ತೀವ್ರ ಆಸಕ್ತಿ ವಹಿಸುತ್ತಿರುವುದು ಭವಿಷ್ಯದ ಶುಭ ಸೂಚನೆ ಎಂದು ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಯ.ರು. ಪಾಟೀಲ ಹೇಳಿದರು. ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಸಭಾಭವನದ ವಿಶ್ವಗುರು ಬಸವಣ್ಣನವರ ವೇದಿಕೆಯಲ್ಲಿ ರವಿವಾರ ನಡೆದ ಬೆಳಗಾವಿ, ಬಾಗಲಕೋಟೆ, ವಿಜಯಪುರ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನ-2018ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದು ನಾಡಿನಾದ್ಯಂತ ಅನೇಕ ಸ್ವಯಂ ಸೇವಾ ಸಂಸ್ಥೆಗಳು ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿದ್ದು, ಅವು ಕನ್ನಡದ ಪ್ರೀತಿಯ ಜತೆಗೆ ಕನ್ನಡ ಮನಸ್ಸುಗಳನ್ನು ಬೆಸೆಯುತ್ತಿವೆ. ಈ ದಿಸೆಯಲ್ಲಿ ಬೆಳಕು ಸಂಸ್ಥೆಯ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನ ಮಾದರಿಯಾಗಿದೆ ಎಂದರು.

ಅಪಮೌಲ್ಯ ಬದಲಾಯಿಸಿ: ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ ಮಾತನಾಡಿ, ರಾಜಕಾರಣ, ಕಾರ್ಯಾಂಗ, ನ್ಯಾಯಾಂಗ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯಾವುದನ್ನು ನಾವು ಜೀವನದ ಮೌಲ್ಯವಲ್ಲವೆಂದು ಒಪ್ಪಲು ಸಾಧ್ಯವಿಲ್ಲದ ಅಪಮೌಲ್ಯಗಳನ್ನು ನಾವು ಬದಲಾಯಿಸಲೇಬೇಕು. ಒಪ್ಪಲು ಸಾಧ್ಯವಿಲ್ಲದ ಜಾತಿಯತೆ, ಭಯೋತ್ಪಾದನೆ, ಅಪರಾಧಗಳನ್ನು ನಮಗೆ ಎಲ್ಲ ತಿಳಿವಳಿಕೆ, ಸಾಮರ್ಥ್ಯವಿದ್ದರೂ ಬದಲಾಯಿಸದಿದ್ದಲ್ಲಿ ನಾವೇ ಪ್ರಥಮ ದೇಶದ್ರೋಹಿಗಳಾಗುತ್ತೇವೆ. ಸಾಹಿತ್ಯಾಸಕ್ತರು, ಸಾಹಿತಿಗಳು, ಕವಿಗಳು, ಮಠಾಧೀಶರು, ಪ್ರಜ್ಞಾವಂತರು, ಸಮಾಜ ಸೇವಕರು, ಸಮಾಜದ ಓರೆಕೋರೆಗಳನ್ನು ತಿದ್ದಿ, ಸರಿ ದಾರಿಗೆ ತರಬೇಕಿದೆ ಎಂದರು.

ಬೆಳಕು ಸಂಸ್ಥೆ ರಾಜ್ಯಾಧ್ಯಕ್ಷ ಅಣ್ಣಪ್ಪ ಮೇಟಿಗೌಡ ಮಾತನಾಡಿ, ಇಂದಿನ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನ ಭವಿಷ್ಯದ ಮುನ್ಸೂಚನೆಯಾಗಿದೆ ಎಂದರು.  ಎಸ್‌ಪಿಎಂ ಮಂಡಳ ಅಧ್ಯಕ್ಷ ತ್ರಿಕಾಲ ಅಮರಸಿಂಹ ಪಾಟೀಲ ಸಮಾರಂಭ ಉದ್ಘಾಟಿಸಿದರು. ಬೆಳಗ್ಗೆ ಕಾಳಿಕಾದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ತುಕಾರಾಮ ಬಡಿಗೇರ ನಾಡ ಧ್ವಜಾರೋಹಣ ನೆರವೇರಿಸಿದರು. ನಂತರ ಎಲ್ಲ ಗಣ್ಯರು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸದಲಗದ ಶ್ರೀ ಧರೀಖಾನ ಅಜ್ಜನವರು ಸಾನ್ನಿಧ್ಯ ವಹಿಸಿದ್ದರು.

ಸಮ್ಮೇಳನಾಧ್ಯಕ್ಷ ಡಾ| ವಿ.ಎಸ್‌. ಮಾಳಿ, ಮಾಜಿ ಶಾಸಕ ಬಿ.ಸಿ. ಸರಿಕರ, ಗಣ್ಯರಾದ ರಾಮಣ್ಣ ಗಸ್ತಿ, ಬಾಲಕೃಷ್ಣ ಜಂಬಗಿ, ಡಿ.ಸಿ. ಸದಲಗಿ, ಮೀನಾಕ್ಷಿ ನೆಲಗಳಿ, ಮೋಹನಗೌಡ ಪಾಟೀಲ, ಸಾಹಿತಿ ಸಿದ್ದಣ್ಣ ದಿವಾಣ, ರಾಜ್ಯ ಸಂಘಟಕ ರಾಜು ಐತವಾಡೆ, ವಿಠ್ಠಲ ಬಡಿಗೇರ, ಚಂದ್ರಶೇಖರ ಒಡೆಯರ, ಗುರುರಾಜ ರಾಯಬಾಗಕರ ಹಾಜರಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.