ಸುದ್ದಿ ಓರೆಗೆ ಹಚ್ಚುವ ಕೆಲಸ ಮಾಡಿ

•ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿಂತ ಅಂತರಂಗದ ಸ್ವಾತಂತ್ರ್ಯ ಮುಖ್ಯ

Team Udayavani, Jul 30, 2019, 10:08 AM IST

bk-tdy-2

ಮಹಾಲಿಂಗಪುರ: ಎಸ್‌ಸಿಪಿ ಪದವಿ ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಡಾ| ಟಿ.ಪಿ. ಗಿರಡ್ಡಿ ಮಾತನಾಡಿದರು.

ಮಹಾಲಿಂಗಪುರ: ಪತ್ರಕರ್ತರು ಸುದ್ದಿಯನ್ನು ಪ್ರಾಮಾಣಿಕತೆಯಿಂದ ಬರೆದು, ಯಾರಿಗೂ ಭಯಪಡದೇ ಅದನ್ನು ಓರೆಗೆ ಹಚ್ಚುವ ಕೆಲಸ ಮಾಡಬೇಕು. ಅಂದಾಗ ಮಾತ್ರ ಪತ್ರಿಕೋದ್ಯಮಕ್ಕೆ ಬೆಲೆ ಎಂದು ಜಮಖಂಡಿಯ ಹಿರಿಯ ಪತ್ರಕರ್ತ ಡಾ| ಟಿ.ಪಿ. ಗಿರಡ್ಡಿ ಹೇಳಿದರು.

ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್‌ಸಿಪಿ ಕಲಾ, ವಿಜ್ಞಾನ ಹಾಗೂ ಡಿ.ಡಿ.ಎಸ್‌ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ 2019ನೇ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪತ್ರಕರ್ತರು ಯಾವುದೇ ಭೇದ ಭಾವವಿಲ್ಲದೆ ಸಾಮಾಜಿಕ ಸಮಸ್ಯೆಗಳನ್ನು ಜನರ ಮುಂದಿಡುವ ಕಾರ್ಯ ಮಾಡಬೇಕು ಎಂದರು.

ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿಂತ ಅಂತರಂಗದ ಸ್ವಾತಂತ್ರ್ಯ ಮುಖ್ಯವಾಗಿದೆ. ಸಮಾಜದ ಹಿತಕ್ಕಾಗಿ ಯಾವುದೇ ಸುದ್ದಿಯನ್ನು ಅಂತರಂಗದಿಂದ ಗ್ರಹಿಸಬೇಕು. ಅಂತರಂಗದ ಸ್ವಾತಂತ್ರ್ಯ ಕಳೆದುಕೊಂಡರೆ ವೃತ್ತಿಗೆ ನ್ಯಾಯ ಒದಗಿಸಲು ಸಾಧ್ಯವಾಗುವುದಿಲ್ಲ. ಪತ್ರಕರ್ತರು ವರದಿ ಮಾಡಲು ಒಳ ಮತ್ತು ಹೊರ ಜಗತ್ತು ತಿಳಿದಿರಬೇಕು. ಮುಂದಾಲೋಚನೆ, ಸುದ್ದಿ ಮೌಲ್ಯ, ಮಹತ್ವ ತಿಳಿದಿರಬೇಕು. ಅಂದಾಗ ಮಾತ್ರ ಯಶಸ್ವಿ ಪತ್ರಕರ್ತರಾಗಿ ಹೊರಹೊಮ್ಮಲು ಸಾಧ್ಯ ಎಂದರು. ಸ್ಥಳೀಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮಾತನಾಡಿ, ಪತ್ರಕರ್ತ ವೃತ್ತಿಯು ಹಣಗಳಿಕೆಯ ವೃತ್ತಿಯಲ್ಲ. ಇದೊಂದು ಸಮಾಜ ಸೇವಾ ವೃತ್ತಿ. ಈ ವೃತ್ತಿಗೆ ಸೇರ ಬಯಸುವವರಿಗೆ ಸಮಾಜದ ಬಗ್ಗೆ ಕಳಕಳಿ ಗೌರವ, ಸಮಸ್ಯೆಗಳ ಕುರಿತು ಅರಿವಿರಬೇಕು. ಹಾಗೆಯೇ ಭಾಷಾ ಜ್ಞಾನವೂ ಅಗತ್ಯ ಎಂದರು.

ಪ್ರಾಚಾರ್ಯ ಡಾ| ಬಿ.ಎಂ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕೋದ್ಯಮ ವಿದ್ಯಾರ್ಥಿನಿಯರಾದ ತ್ರಿವೇಣಿ ನಾಯಕ, ದೀಕ್ಷಾ ಮುಚಂಡಿ ಪತ್ರಿಕೋದ್ಯಮ ಬೆಳೆದು ಬಂದ ದಾರಿಯ ಕುರಿತು ಮಾತನಾಡಿದರು. ಕಾಲೇಜಿನ ಪಾಕ್ಷಿಕ ಪತ್ರಿಕೆ ಚನ್ನಗಿರಿ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಪತ್ರಿಕಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ಚರ್ಚಾ ಸ್ಪರ್ಧೆ ಮತ್ತು ಸುದ್ದಿವಾಚಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಆಯ್‌ಕ್ಯೂಎಸಿ ಸಂಯೋಜಕ ಡಾ| ಕೆ.ಎಂ.ಅವರಾದಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪೂಜಾ ಕಲ್ಯಾಣಶೆಟ್ಟಿ, ಉಪನ್ಯಾಸಕರಾದ ಅಶೋಕ ನರೋಡೆ, ಆಶಾರಾಣಿ ಚಿನಗುಂಡಿ, ವಿರೂಪಾಕ್ಷ ಅಡಹಳ್ಳಿ ಸೇರಿದಂತೆ ಹಲವರು ಇದ್ದರು.

ಐಶ್ವರ್ಯ ಹುದ್ದಾರ ಪ್ರಾರ್ಥಿಸಿದರು. ಜಯಶ್ರೀ ದೇಶನೂರ ಸ್ವಾಗತಿಸಿದರು. ಲಕ್ಷಿ ್ಮೕ ಘಂಟಿ ಪರಿಚಯಿಸಿದರು. ಮಾನಿಂಗ ಲಮಾಣಿ, ಮಹಾನಂದಾ ಬಿಜಾಪುರ ನಿರೂಪಿಸಿದರು. ರಾಜೇಂದ್ರ ನಾವಿ ವಂದಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.