ಮಹಾಲಿಂಗಪುರದಲ್ಲಿ ಕತ್ತೆಗಳ ಹಾವಳಿ
ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿ
Team Udayavani, Oct 16, 2020, 4:01 PM IST
ಮಹಾಲಿಂಗಪುರ: ಪಟ್ಟಣದಲ್ಲಿ ಬಿಡಾಡಿ ಕತ್ತೆಗಳ ಹಾವಳಿ ಹೆಚ್ಚಾಗಿದ್ದು,ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಕತ್ತೆಗಳ ಹಾವಳಿ ಹೆಚ್ಚಾಗಿದ್ದರೂ ಸಹ ಪುರಸಭೆ ಅಧಿ ಕಾರಿಗಳು ಗಮನಹರಿಸದಿರುವುದು ಸಾರ್ವಜನಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣದ ಚನ್ನಮ್ಮ ವೃತ್ತ, ಅಷ್ಟಗಿ ಚಿತ್ರಮಂದಿರ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಜವಳಿ ಬಜಾರ, ಡಬಲ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೇ ಕತ್ತೆಗಳ ಆವಾಸ ತಾಣವಾಗಿದೆ. ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಮಧ್ಯದಲ್ಲೇ ಬಿಡಾಡಿ ಕತ್ತೆಗಳು ನಿಲ್ಲುತ್ತಿರುವುದು ಹಾಗೂ ಮಲಗಿಕೊಳ್ಳುತ್ತಿರುವದರಿಂದಗಿ ದ್ವಿಚಕ್ರ ವಾಹನ ಸೇರಿದಂತೆ ಪ್ರತಿಯೊಂದು ಬೃಹತ್ ವಾಹನ ಸವಾರರಿಗೂ ಕಿರಿಕಿರಿಯುಂಟು ಮಾಡುತ್ತಿವೆ. ಜತೆಗೆ ರಸ್ತೆಯ ತಿರುವುಗಳಲ್ಲಿ ಬರುವ ವಾಹನ ಸವಾರರು, ಎಲ್ಲಿ ಕತ್ತೆಗಳು ಅಡ್ಡ ಬರುತ್ತವೆಯೋ ಎಂಬ ಆತಂಕದಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ. ಈ ಕತ್ತೆಗಳು ನೆರೆಯ ಚಿಮ್ಮಡ ಗ್ರಾಮ ಮತ್ತು ರಬಕವಿ-ಬನಹಟ್ಟಿ ನಗರಗಳ ಖಾಸಗಿ ವ್ಯಕ್ತಿಗಳಿಗೆ ಸೇರಿವೆ. ಕತ್ತೆಗಳ ಮಾಲೀಕರು ಪ್ರತಿವರ್ಷ ರಬಕವಿ-ಬನಹಟ್ಟಿ ಭಾಗಗಳಲ್ಲಿನ ಇಟ್ಟಿಗೆ ತಯಾರಿಕೆಯ ಭಟ್ಟಿಗಳಲ್ಲಿ ಮತ್ತು ರಬಕವಿ-ಬನಹಟ್ಟಿ, ರಾಮಪುರ ಭಾಗದಲ್ಲಿನ ಇಕ್ಕಾಟದ ಪ್ರದೇಶಗಳಲ್ಲಿ ಇಟ್ಟಿಗೆ, ಉಸುಕು, ಕಲ್ಲು ಸಾಗಾಣಿಕೆಗೆ ಕತ್ತೆ ಬಳಸುತ್ತಾರೆ. ಕೆಲಸದ ಒತ್ತಡಗಳು ಕಡಿಮೆ ಇದ್ದಾಗ ಕತ್ತೆಗಳನ್ನು ಪಟ್ಟಣಕ್ಕೆ ತಂದು ಬಿಡುತ್ತಾರೆ ಎನ್ನಲಾಗಿದೆ. ಕತ್ತೆಗಳನ್ನು ವರ್ಷವಿಡಿ ದುಡಿಸಿಕೊಳ್ಳುವ ಮಾಲೀಕರು ಬೇಕಾಬಿಟ್ಟಿಯಾಗಿ ಬಿಟ್ಟಿರುವ ಕಾರಣ, ಕತ್ತೆಗಳು ಪಟ್ಟಣದ ಸುತ್ತಮುತ್ತಲಿನ ರೈತರ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಜತೆಗೆ ಪಟ್ಟಣದ ಪ್ರಮುಖ ರಸ್ತೆಯ ಉದ್ದಗಲಕ್ಕೂ ಕತ್ತೆಗಳ ಕಾಟ ಮಿತಿ ಮಿರಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳ ಮಧ್ಯೆಯೇ ಕತ್ತೆಗಳು ಮಲಗುವ ಪರಿಣಾಮ, ರಾತ್ರಿ ಸಮಯದಲ್ಲಿ ವಾಹನ ಸವಾರರಿಗೆ ಅಪಾಯಕಾರಿಯಾಗಿದೆ.
ಪ್ರತಿವರ್ಷ ತಪ್ಪದ ಕತ್ತೆಗಳ ಹಾವಳಿ: ಪಟ್ಟಣದಲ್ಲಿ ವರ್ಷದ ಎರಡು ಅಥವಾ ಮೂರು ತಿಂಗಳು ಕತ್ತೆಗಳ ಕಾಟ ತಪ್ಪಿದಲ್ಲ. ಆದ ಕಾರಣ ಪುರಸಭೆಯವರು ಸಂಬಂಧಿಸಿದ ಕತ್ತೆಗಳ ಮಾಲೀಕರಿಗೆ ಕಟ್ಟೆಚ್ಚರ ನೀಡುವ ಮೂಲಕ ಪಟ್ಟಣದ ಪ್ರಮುಖ ರಸ್ತೆಗಿಳಿಯುತ್ತಿರುವಬಿಡಾಡಿ ಕತ್ತೆಗಳ ಹಾವಳಿ ಕಡಿವಾಣ ಹಾಕಬೇಕಾಗಿದೆ. ಅಧಿಕಾರಿಗಳು ತಕ್ಷಣ ಸಂಬಂಧಿಸಿದ ಕತ್ತೆಗಳ ಮಾಲೀಕರನ್ನು ಸಂಪರ್ಕಿಸಿ, ಅವುಗಳನ್ನು ಪಟ್ಟಣದಿಂದ ಹೊರಹಾಕಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿನ ಕತ್ತೆಗಳ ಹಾವಳಿಯಿರುವುದು ಗಮಕ್ಕೆ ಬಂದಿದೆ. ಚಿಮ್ಮಡ ಗ್ರಾಮ ಮತ್ತು ರಬಕವಿ-ಬನಹಟ್ಟಿ ನಗರಗಳಲ್ಲಿನ ಸಂಬಂಧಿಸಿದಕತ್ತೆಗಳ ಮಾಲೀಕರನ್ನು ಪತ್ತೆಹಚ್ಚಿ, ಅವರಿಗೆ ನೋಟಿಸ್ ನೀಡಲು ಕಿರಿಯ ಆರೋಗ್ಯ ನಿರೀಕ್ಷಕರಿಗೆ ಸೂಚಿಸಿದ್ದೇನೆ. ನಿಗದಿತ ದಿನದೊಳಗೆ ಸಂಬಂ ಧಿಸಿದ ಮಾಲೀಕರು ಕತ್ತೆಗಳನ್ನು ತೆಗೆದುಕೊಂಡು ಹೋಗದಿದ್ದಲ್ಲಿ, ಪುರಸಭೆಯಿಂದಲೇ ಕತ್ತೆಗಳನ್ನು ಬೇರೆ ಕಡೆಗೆ ಸಾಗಿಸುವ ವ್ಯವಸ್ಥೆ ಮಾಡುತ್ತೇವೆ.–ಎಚ್.ಎಸ್.ಚಿತ್ತರಗಿ. ಮುಖ್ಯಾಧಿಕಾರಿಗಳು. ಪುರಸಭೆ.
-ಚಂದ್ರಶೇಖರ ಮೋರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’