![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ
Team Udayavani, May 26, 2024, 11:21 PM IST
![kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ](https://www.udayavani.com/wp-content/uploads/2024/05/k-1-620x382.jpg)
ಬಾಗಲಕೋಟೆ: ಒಂದು ಕೋಮಿನ ಜನರನ್ನು ಅತಿಯಾಗಿ ತುಷ್ಟೀಕರಣದ ಫಲವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಜನರಿಂದ ಆಯ್ಕೆಯಾದ ಸರಕಾರವೇ ಇರಬೇಕು. ನಿಮ್ಮ ತಪ್ಪಿನಿಂದ ರಾಷ್ಟ್ರಪತಿ ಆಡಳಿತ ಜಾರಿಗೊಳ್ಳುವಂತೆ ಮಾಡಬೇಡಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಆಡಳಿತ ತರುವುದಕ್ಕೆ ಯಾವುದೇ ಕಾರಣಕ್ಕೂ ರಾಜ್ಯ ಸರಕಾರ ಅವಕಾಶ ಕೊಡಬಾರದು. ಜನರಿಂದ ಆಯ್ಕೆಯಾದ ಚುನಾಯಿತ ಸರಕಾರ ರಾಜ್ಯದಲ್ಲಿದೆ. ಸಿದ್ದರಾಮಯ್ಯ ನೇತೃತ್ವದ ಈ ಸರಕಾರವನ್ನು ಕೆಡವಿ ಎಂದು ನಾನು ಹೇಳ್ಳೋದಿಲ್ಲ. ರಾಷ್ಟ್ರಪತಿ ಆಡಳಿತ ತನ್ನಿ ಅಂತಾನೂ ಹೇಳ್ಳೋದಿಲ್ಲ. ಚುನಾಯಿತ ಪ್ರತಿನಿಧಿಗಳ ಸರಕಾರವೇ ಮುಂದುವರಿಯಲಿ. ಸಿದ್ದರಾಮಯ್ಯ ಸಿಎಂ ಆಗಿಯೇ ಇರುತ್ತಾರೋ, ಡಿಕೆಶಿ ಸಿಎಂ ಆಗುತ್ತಾರೋ ಸಂಬಂಧವಿಲ್ಲ. ಆದರೆ ಚುನಾಯಿತ ಸರಕಾರ ಮಾತ್ರ ಇರಬೇಕು. ರಾಜ್ಯ ಸರಕಾರ ತಾವು ನಿರ್ದೋಷಿಗಳು ಆಗಬೇಕೆಂದರೆ ರಾಜ್ಯದಲ್ಲಿ ನಡೆದ ಕೊಲೆ ಹಾಗೂ ಪೆನ್ಡ್ರೈವ್ ಪ್ರಕರಣವನ್ನು ಸಿಪಿಐಗೆ ವಹಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
“ಪೆನ್ಡ್ರೈವ್ ಪ್ರಕರಣದಲ್ಲಿ ವಿಶ್ವದ ಎದುರು ನಾವು ಬೆತ್ತಲೆಯಾಗಿದ್ದೇವೆ’
ಬಾಗಲಕೋಟೆ: ಡಿ.ಕೆ. ಶಿವಕುಮಾರ್ ಪೆನ್ಡ್ರೈವ್ ಫ್ಯಾಕ್ಟರಿ ಮಾಲಕ ಅಂತ ನಾನು ಹೇಳುವುದಿಲ್ಲ. ಕುಮಾರಸ್ವಾಮಿ ದೊಡ್ಡ ಪಾತ್ರ ಇದೆ ಅಂತಾನೂ ಹೇಳುವುದಿಲ್ಲ. ಈ ಪೆನ್ಡ್ರೈವ್ ಪ್ರಕರಣದಲ್ಲಿ ವಿಶ್ವದ ಎದುರು ನಾವು ಬೆತ್ತಲಾಗಿದ್ದೇವೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಣ್ಣನ್ನು ನಾವು ತಾಯಿ ಅಂತ ಕರೆಯುತ್ತೇವೆ. ತಾಯಿ ಅಂತ ಕರೆಯುವ ಹೆಣ್ಣಿಗೆ ಇಷ್ಟು ಅಪಮಾನ ಆಗಿದ್ದು ಇದೇ ಮೊದಲು. ನಾನು ಸಿದ್ದರಾಮಯ್ಯ, ಗೃಹಮಂತ್ರಿಗೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಇದು ನಿಮ್ಮ ಕೈಲಿ ಆಗಲ್ಲ. ಸಿಬಿಐಗೆ ಕೊಟ್ಟು ಬಿಡಿ. ನಾವೆ ಮಾಡ್ತಿವಿ, ನಮಗೆ ಶಕ್ತಿ ಇದೆ. ಆದರೆ ಸಿಬಿಐಗೆ ಕೊಡದಿದ್ರೆ ನೀವು ಏನೇ ವರದಿ ಕೊಟ್ಟರೂ ಸರಕಾರ ಅದನ್ನು ಮಾಡಿಸಿದೆ ಎಂಬ ಭಾವನೆ ಬರುತ್ತದೆ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.