ಮಾತೃಭಾಷೆ ಮರೆಯದಿರಿ: ಹೊಸಕೋಟಿ

ಚೌಡಕಿ ಪದ ವೈಭವ ಕಾರ್ಯಕ್ರಮಕ್ಕೆ ಚಾಲನೆ

Team Udayavani, May 6, 2022, 4:35 PM IST

22

ಬಾಗಲಕೋಟೆ: ಮನುಷ್ಯ ಎಲ್ಲಿದ್ದರೂ ತಾಯಿಯ ಭಾಷೆ ಮರೆಯಬಾರದು. ನಮ್ಮತನ, ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಮಕ್ಕಳನ್ನು ಒಳ್ಳೆಯತನದಿಂದ ಬೆಳೆಸುವಂತ ವ್ಯವಸ್ಥೆ ಸೃಷ್ಟಿ ಮಾಡಿಕೊಳ್ಳಬೇಕು. ದಾನ ಮಾಡುವ ಮಕ್ಕಳು ಇರಬೇಕು ಎಂದು ಖ್ಯಾತ ಜಾನಪದ ಗಾಯಕ ಗುರುರಾಜ ಹೊಸಕೋಟಿ ಹೇಳಿದರು.

ಬೀಳಗಿ ತಾಲೂಕಿನ ಬೂದಿಹಾಳ (ಎಸ್‌.ಎಚ್‌.) ಗ್ರಾಮದಲ್ಲಿ ಶ್ರೀ ಮಾರುತೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಕರೆಸಿದ್ಧೇಶ್ವರ ದೈವ ಮಂಡಳಿ ಹಾಗೂ ಕನ್ನಡ ಜಾನಪದ ಪರಿಷತ್‌ ತಾಲೂಕು ಘಟಕದ ಸಹಯೋಗದಲ್ಲಿ ಚೌಡಕಿ ಪದ ವೈಭವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಜಾನಪದ ಪರಿಷತ್‌ ಜಿಲ್ಲಾ ಅಧ್ಯಕ್ಷ ಡಿ.ಎಂ. ಸಾವಕಾರ ಮಾತನಾಡಿ, ಗ್ರಾಮೀಣ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಜಾನಪದಕ್ಕೆ ಬಹುದೊಡ್ಡ ಶಕ್ತಿ ಇದೆ. ಗಟ್ಟಿತನಕ್ಕೆ ಸಾಕ್ಷಿಯಾದ ಜಾನಪದ ಹಾಡುಗಳಲ್ಲಿ ನಮ್ಮ ಸಂಸ್ಕೃತಿಯಿದೆ, ಸಂಸ್ಕಾರ ವಿದೆ, ಪರಂಪರೆಯಿದೆ. ಅದನ್ನು ಯುವ ಜನಾಂಗಕ್ಕೆ ಪರಿಚಯಿಸಿ, ಬೆಳೆಸುವ ನಿಟ್ಟಿನಲ್ಲಿ ಜಾನಪದ ಕಾರ್ಯಕ್ರಮಗಳು ಅವಶ್ಯಕ. ಕಲಾವಿದರಿಗೆ ವೇದಿಕೆ ಕಲ್ಪಿಸಿ ಕೊಡುವುದರ ಜತೆಗೆ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕಿದೆ ಎಂದರು.

ಶಕ್ತಿದೇವಿಯರಾದ ಸವದತ್ತಿ ಯಲ್ಲಮ್ಮ, ಮುನಿರಬಾದನ ಹುಲಿಗೆಮ್ಮದೇವಿಯರ ಪೌರಾಣಿಕ ಕಥೆಗಳನ್ನು ಚೌಡಕಿ ಪದಗಳು ಒಳಗೊಂಡಿವೆ. ದೇವಿಯರ ಜೀವನ ವೃತ್ತಾಂತವನ್ನು ಚೌಡಕಿ ಬಾರಿಸುತ್ತಾ ಹಾಡುವುದು ಒಂದು ವಿಶಿಷ್ಟ ಜಾನಪದ ಕಲೆಯಾಗಿದೆ. ಅಳವಿನ ಅಂಚಿನಲ್ಲಿ ಚೌಡಕಿ ಪದ, ಕುಟ್ಟುವ ಮತ್ತು ಬೀಸುಕಲ್ಲು ಪದ, ಹಂತಿಪದ ಸೇರಿದಂತೆ ಕೃಷಿ ಕಾರ್ಯದಲ್ಲಿ ಹಾಡುತ್ತಿದ್ದ ಪದಗಳು ಇಂದು ಮಾಯವಾಗುತ್ತಿವೆ. ಹೀಗಾಗಿ ಮುಂದಿನ ತಲೆಮಾರಿಗೆ ಈ ಜಾನಪದ ಹಾಡುಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡಬೇಕಾಗಿದೆ. ಕನ್ನಡ ಜಾನಪದ ಪರಿಷತ್‌ ಈ ಕಾರ್ಯದಲ್ಲಿ ನಿರತವಾಗಿದೆ ಎಂದು ತಿಳಿಸಿದರು.

ಕಜಾಪ ತಾಲೂಕಾಧ್ಯಕ್ಷ ಬಸವರಾಜ ದಾವಣಗೆರೆ ಮಾತನಾಡಿ, ಮನೆಯಿಂದಲೇ ಜಾನಪದ ಆರಂಭವಾಗುತ್ತದೆ. ಜನಪದದಲ್ಲಿ ಅನೇಕ ರೀತಿಯ ಕಲೆಗಳಿವೆ. ಇಂದಿನ ಯುವ ಸಮೂಹ ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಮಾಡಬೇಕೆಂದು ಹೇಳಿದರು.

ಜಾನಪದ ಗಾಯಕ ಗುರುರಾಜ ಹೊಸಕೋಟಿ, ಆಶುಕವಿ ಸದಾಶಿವ ಆಗೋಜಿ, ಗಾಯಕ ಭೀಮಶಿ ಗಾಣಗೇರ ಹಾಡುಗಳ ಮೂಲಕ ಜನರ ಮನಸೂರೆಗೊಂಡರು. ಬಳಿಕ ಜಮಖಂಡಿ ತಾಲೂಕಿನ ಸಿದ್ದಾಪುರದ ವಿಠರಾಯ ಗಾಯನ ಸಂಘ, ಮುಧೋಳ ತಾಲೂಕಿನ ಬುದ್ನಿ ಪಿಎಂ ಗ್ರಾಮದ ಸರಸ್ವತಿ ಗಾಯನ ಸಂಘದ ಕಲಾವಿದರಿಂದ ಚೌಡಕಿ ಪದಗಳು ಜರುಗಿದವು. ಶಿಕ್ಷಕ ಎಸ್‌.ಬಿ. ಜಾಡರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.