“ಸಂಸ್ಕೃತಿ-ಪರಂಪರೆ ಮರೆಯಬೇಡಿ’


Team Udayavani, Feb 17, 2020, 1:47 PM IST

bk-tdy-2

ಬೀಳಗಿ: ಶೈಕ್ಷಣಿವಾಗಿ ಎತ್ತರಕ್ಕೆ ಬೆಳೆದರೂ ಕೂಡ, ಸಂಸ್ಕೃತಿ, ಪರಂಪರೆ ಮರೆಯಬಾರದು. ಅಕ್ಷರ ಜ್ಞಾನದ ಜತೆಗೆ ನೀತಿಯುತ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳು ಮುಖ್ಯವಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಹೇಳಿದರು.

ಸ್ಥಳೀಯ ಕೊರ್ತಿ ಪುನರ್ವಸತಿ ಕೇಂದ್ರದ ಜ್ಞಾನದೀಪ ಪಬ್ಲಿಕ್‌ ಶಾಲೆಯ 15 ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುರು-ಹಿರಿಯರನ್ನು ಹಾಗೂ ತಂದೆ-ತಾಯಿಯನ್ನು ಗೌರವಿಸುವ ಗುಣ ಮಕ್ಕಳಲ್ಲಿ ಬೆಳೆಸಬೇಕು. ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ನಮ್ಮ ಮಕ್ಕಳು ಸತ್ಪ್ರಜೆಗಳಾಗಿ ಹೊರಹೊಮ್ಮುವುದು ಅಗತ್ಯವಿದೆ. ಜ್ಞಾನದೀಪ ಶಾಲೆಯು ಹೆಸರಿಗೆ ತಕ್ಕಂತೆ ಮಕ್ಕಳಲ್ಲಿ ಅಕ್ಷರ ಜ್ಞಾನ ಬಿತ್ತುವ ಕೆಲಸ ಮಾಡುತ್ತಿದೆ ಎಂದರು.

ಕೇವಲ ಒಂದೂವರೆ ದಶಕದಲ್ಲಿ ಈ ಸಂಸ್ಥೆಯ ಅಗಾಧ ಸಾಧನೆ ಮಾಡುವ ಮೂಲಕ, ನುರಿತ ಶಿಕ್ಷಕರನ್ನು ಹೊಂದಿರುವ ಈ ವಿದ್ಯಾ ಸಂಸ್ಥೆಯು ಮಕ್ಕಳ ಜ್ಞಾನದಾಹ ನೀಗಿಸುತ್ತಿರುವುದು ಶ್ಲಾಘನೀಯ. ಎಲ್ಲ ಕ್ಷೇತ್ರಗಳಿಗಿಂತ ಶೈಕ್ಷಣಿಕ ಕ್ಷೇತ್ರ ದೇಶ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಿಕ್ಷಣ ಸೇವೆಯೇ ದೇಶ ಸೇವೆಯಾಗಿದೆ. ಜವಾಬ್ದಾರಿಯುತ ನಾಗರಿಕರನ್ನು ತಯಾರು ಮಾಡಿ ಭವ್ಯ ಭಾರತ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದರು.

ಬಿಇಒ ಹನುಮಂತಗೌಡ ಮಿರ್ಜಿ ಮಾತನಾಡಿ, ಪ್ರತಿ ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆಯಿರುತ್ತದೆ. ಪ್ರತಿಭೆಯನ್ನು ಗುರುತಿಸಿ ಪೋಷಿಸುವುದು ಅಗತ್ಯ. ಪಾಲಕರು-ಶಿಕ್ಷಕರು ಮಕ್ಕಳಿಗೆ ಯೋಗ್ಯ ತರಬೇತಿ ನೀಡಿದರೆ ಸ್ವೀಕರಿಸುವ ಶಕ್ತಿ ಮಕ್ಕಳಿಗಿದೆ ಎಂದರು. ತಮಿಳುನಾಡು ಯುನಿವರ್ಸಲ್‌ ವಿ.ವಿ.ಗೌರವ ಡಾಕ್ಟರೇಟ್‌ ಪದವಿ ಪುರಸ್ಕೃತೆ 2ನೇ ತರಗತಿ ವಿದ್ಯಾರ್ಥಿನಿ ಡಾ| ವೈದೃತಿ ಕೋರಿಶೆಟ್ಟಿ ನೆನಪಿನ ಭಂಡಾರ ಶಕ್ತಿಯ ಪ್ರದರ್ಶನ ಸಭಿಕರನ್ನು ಬೆರಗುಗೊಳಿಸಿತು.

ಹುಲಜಂತಿ ಪಟ್ಟದ ದೇವರು ಮಾಳಿಂಗರಾಯ ಮಹಾರಾಯ ಸಾನ್ನಿಧ್ಯ ಹಾಗೂ ಸಂಸ್ಥೆಯ ಅಧ್ಯಕ್ಷ ಬಸವರಾಜ ದೇವರಮನಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಆಡಳಿತಾಧಿ ಕಾರಿ ವಿದ್ಯಾ ಹಂಚಾಟೆ, ಜಿಪಂ ಸದಸ್ಯ ಹನುಮಂತ ಕಾಖಂಡಕಿ, ಸುರೇಂದ್ರ ನಾಯಕ, ಈರಣ್ಣ ಗಿಡ್ಡಪ್ಪಗೋಳ, ಶಿಕ್ಷಣ ಸಂಯೋಜಕ ರಮೇಶ ವಡವಾಣಿ, ರಾಜು ನಾಯಕವಾಡಿ, ಬಿ.ಕೆ.ದೇಸಾಯಿ, ಪಪಂ ಸದಸ್ಯ ವಿಠಲ ಬಾಗೇವಾಡಿ, ಮುತ್ತು ಬೋರ್ಜಿ, ಸಂತೋಷ ನಿಂಬಾಳಕರ, ಅಜ್ಜು ಭಾಯಿಸರಕಾರ, ಸರಸ್ವತಿ ದೇವರಮನಿ, ಸಿದ್ದು ಗಿರಗಾಂವಿ, ನಿಂಗಪ್ಪ ಹೂಗಾರ, ಹನುಮಂತ ಜಲ್ಲಿ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.