ಕೃಷಿಯಲ್ಲಿ ಖುಷಿ ಕಂಡ ವೈದ್ಯ

ಜನರ ಆರೋಗ್ಯದ ಕಾಳಜಿಯ ಜತೆಗೆ ಭೂಮಿಯ ಆರೈಕೆ

Team Udayavani, Jun 22, 2021, 5:12 PM IST

1340000218amd-1c

ಎಚ್‌.ಎಚ್‌.ಬೇಪಾರಿ

ಅಮೀನಗಡ: ಇಳಕಲ್‌ ತಾಲೂಕಿನ ಗುಡೂರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಟ್ಟಣದ ಡಾ| ಹರ್ಷವರ್ಧನ ಸಜ್ಜನ ಕೃಷಿಯಲ್ಲಿ ಭರವಸೆಯ ಹೆಜ್ಜೆ ಮೂಡಿಸಿದ್ದಾರೆ.

ಜನರ ಆರೋಗ್ಯದ ಕಾಳಜಿಯ ಜತೆಗೆ ಭೂಮಿಯ ಆರೈಕೆ, ಉತ್ತಿ-ಬಿತ್ತಿ-ಬಂಪರ್‌ ಬೆಳೆ ತೆಗೆದು ಭರವಸೆಯ ಕೃಷಿಕನಾಗಿ ಹೊರಹೊಮ್ಮಿದ್ದಾರೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಮಗ್ರ ತೋಟಗಾರಿಕೆ ಕೈಪಿಡಿ ಅಧ್ಯಯನ ಮಾಡಿ ತಮ್ಮ ಅರ್ಧ ಎಕರೆ ಜಮೀನಿನಲ್ಲಿ ಮೊದಲ ಬಾರಿಗೆ ಮಲೆನಾಡ ಬೆಳೆ ಶುಂಠಿ ಅದರ ಜತೆ ಇನ್ನೊಂದು ಅಂತರ ಬೆಳೆ ಬೆಳೆದು ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ತಂದೆ-ತಾಯಿ ಸರ್ಕಾರಿ ನೌಕರಿಯಲ್ಲಿದ್ದರೂ ಇವರ ಅಜ್ಜನವರು ಮೂಲತಃ ಕೃಷಿ ಕುಟುಂಬದವರು. ಹೀಗಾಗಿ ತಾವೂ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕೆಂದು ಜಮೀನಿನಲ್ಲಿ ಕಾಲಿಟ್ಟ ಇವರು ಮೊದಲ ಪ್ರಯತ್ನದಲ್ಲೇ ಸಾಧನೆ ಮೆರೆದಿದ್ದಾರೆ.

34 ಕ್ವಿಂಟಲ್‌ ಶುಂಠಿ ಲಾಭ: ಪರಿಚಯಸ್ಥ ಶಿಕ್ಷಕರೊಬ್ಬರು ಶುಂಠಿ ಬೆಳೆಯಿಂದ ಹೆಚ್ಚು ಲಾಭ ಇದೆ ಎಂದು ತಿಳಿಸಿದ್ದರು. ಗೆಳೆಯನ ಜಮೀನಿನಲ್ಲಿ ಬೆಳೆದ ಶುಂಠಿ ತೋರಿಸಿದ್ದರು. ಇದನ್ನೇ ಪ್ರೇರಣೆಯಾಗಿರಿಸಿಕೊಂಡ ಡಾ| ಹರ್ಷವರ್ಧನ ತಮ್ಮ ಅರ್ಧ ಎಕರೆ ಜಮೀನಿನಲ್ಲಿ 40 ಸಾವಿರ ರೂ. ಖರ್ಚು ಮಾಡಿ 3 ಕ್ವಿಂಟಲ್‌ ಶುಂಠಿ ಜತೆಗೆ ಮೆಣಸಿನಕಾಯಿಯನ್ನು ಅಂತರ ಬೆಳೆಯಾಗಿ ಬೆಳೆದು 34 ಕ್ವಿಂಟಲ್‌ ಶುಂಠಿ ಹಾಗೂ 40 ಸಾವಿರ ರೂ. ಮೆಣಸಿನಕಾಯಿ ಬೆಳೆ ಪಡೆದು 1.20 ಲಕ್ಷ ರೂ. ಲಾಭ ಗಳಿಸಿದ್ದಾರೆ.

ಎಂಬಿಬಿಎಸ್‌ ಕೊನೆಯ ವರ್ಷ ಅಧ್ಯಯನ ಮಾಡುವ ಸಂದರ್ಭದಲ್ಲೇ ತಮ್ಮ ಒಟ್ಟು 12 ಎಕರೆ ಜಮೀನಿನ ಜವಾಬ್ದಾರಿ ಪಡೆದು ವಿವಿಧ ರೀತಿಯ ಬೆಳೆ ತೆಗೆದಿದ್ದಾರೆ. ಅಧ್ಯಯನ ಮುಗಿದ ನಂತರ ಗುಡೂರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತ ಕೃಷಿಯಲ್ಲೂ ಸಾಧನೆ ಮಾಡಿ ಚಿಕ್ಕ ವಯಸ್ಸಿನಲ್ಲಿಯೇ ಹುಬ್ಬೇರಿಸುವಂತೆ ಮಾಡಿದ್ದಾರೆ.

ತಮ್ಮ 12 ಎಕರೆ ಜಮೀನಿನಲ್ಲಿ ತೇಗದ ಗಿಡ, ಮಾವಿನ ಗಿಡ, ಸುಗಂಧ ರಾಜ ಹೂ ಗಿಡ, ಚೆಂಡು ಹೂ, ಹತ್ತಿ, ಮೆಣಸಿನಕಾಯಿ, ಪಪ್ಪಾಯಿ, ಗೋದಿ, ಹಾಗಲಕಾಯಿ, ಶುಂಠಿ ಹೀಗೆ ಹಲವಾರು ಬೆಳೆ ಬೆಳೆದಿದ್ದಾರೆ. ಸಾವಯವ ಗೊಬ್ಬರ ಹೆಚ್ಚು ಬಳಸಿ ಅವಶ್ಯವಿದ್ದಾಗ ಮಾತ್ರ ರಾಸಾಯನಿಕ ಗೊಬ್ಬರ ಬಳಸಿ ಅಲ್ಪಾವಧಿಯಲ್ಲಿಯೇ ಉತ್ತಮ ಕೃಷಿಕರೆನಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.