ರೈತನ ಹೊಲಕ್ಕೆ ನುಗ್ಗಿದ ಚರಂಡಿ ನೀರು

ನೀರು ಹೆಚ್ಚಾಗಿ ಕೊಳೆಯುತ್ತಿದೆ ಕಬ್ಬು

Team Udayavani, Apr 4, 2022, 2:51 PM IST

14

ರಬಕವಿ-ಬನಹಟ್ಟಿ: ಕಳೆದ ಒಂದು ತಿಂಗಳಿಂದ ರಬಕವಿ- ಬನಹಟ್ಟಿ ನಗರಸಭೆ ವ್ಯಾಪ್ತಿಯ ರಾಮಪುರ ಹೊಸೂರ ಮಧ್ಯ ಭಾಗದಲ್ಲಿರುವ ಎರಡು ಎಕರೆ ಕಬ್ಬಿನ ಗದ್ದೆಯಲ್ಲಿ ಚರಂಡಿ ನೀರು ನುಗ್ಗಿ ಹರಿದು ಹೋಗಲಾರದೆ ನಿಂತಲ್ಲೇ ನಿಂತ ಪರಿಣಾಮ ಕಬ್ಬು ಸಂಪೂರ್ಣ ಹಾಳಾಗಿದೆ. ನೀರು ಹೆಚ್ಚಾಗಿ ಕೊಳೆತು ಹೋಗಿದ್ದರಿಂದ ರೈತ ಕಣ್ಣೀರಿಡುವಂತಾಗಿದೆ.

ಜನರು ಬಳಸಿದ ನೀರು ಚರಂಡಿ ಮೂಲಕ ಹರಿದು ಬಂದು ರಾಮಪುರ ರೈತ ತಮ್ಮಣ್ಣಿ ಮಾಯನ್ನವರ ಅವರಿಗೆ ಸೇರಿದ ಎರಡು ಎಕರೆ ಕಬ್ಬಿನ ಗದ್ದೆಗೆಯೊಳಗೆ ನಿಲ್ಲುತ್ತಿದೆ. ಇದರಿಂದ ನಮಗೆ ತೊಂದರೆಯಾಗಿದೆ ಎಂದು ಹಲವು ಬಾರಿ ನಗರಸಭೆಗೆ ಭೇಟಿ ನೀಡಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು.

ಚರಂಡಿ ನೀರು ಲೋಕೋಪಯೋಗಿ ಇಲಾಖೆಯಡಿಯ ರಸ್ತೆ ಕೆಳ ಬದಿಯಲ್ಲಿರುವ ನಾಲೆ ಮುಖಾಂತರ ಹೋಗುತ್ತಿತ್ತು. ಪಕ್ಕದ ಜಮೀನಿನವರು ಈ ಚರಂಡಿ ನೀರನ್ನು ಬಾವಿಯಲ್ಲಿ ಸಂಗ್ರಹಿಸಿಕೊಂಡು ತಮ್ಮ ಹೊಲಗದ್ದೆಗೆ ಬಳಸಿಕೊಳ್ಳುತ್ತಿದ್ದರು. ಈಗ ಆ ಜಮೀನನ್ನು ಪ್ಲಾಟ್‌ ಮಾಡಲು ಮಾರಾಟ ಮಾಡಿದ್ದರಿಂದ ಆ ಬಾವಿ ಮುಚ್ಚಿ ನೀರು ಹೋಗುವ ನಾಲೆಗೆ ಅಡ್ಡಲಾಗಿ ಗೋಡೆ ನಿರ್ಮಿಸಿದ್ದರಿಂದ ನೀರು ಗದ್ದೆಗೆ ನುಗ್ಗಿದೆ ಎನ್ನುತ್ತಾರೆ ರೈತ ತಮ್ಮಣ್ಣಿ ಮಾಯನ್ನವರ.

ಈ ವಿಷಯ ನಮ್ಮ ಗಮನಕ್ಕೆ ಬಂದಿದೆ. ಇದು ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಬರುವುದರಿಂದ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನೀರು ಸರಾಗವಾಗಿ ಹೋಗಲು ರಸ್ತೆಗೆ ಅಡ್ಡಲಾಗಿ ಕೆಳಭಾಗದಲ್ಲಿ ನಾಲೆಯಿತ್ತು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಲೆ ಗುರುತಿಸಿ ಕೊಟ್ಟರೆ ಅದರ ನಿರ್ವಹಣೆಗಾಗಿ ನಗರಸಭೆ ವತಿಯಿಂದ 27 ಲಕ್ಷ ಹಣವನ್ನು ಈಗಾಗಲೇ ಕಾಯ್ದಿರಿಸಿದ್ದೇವೆ. ತಕ್ಷಣ ಕಾಮಗಾರಿ ಪ್ರಾರಂಭಿಸಿ ರೈತರಿಗಾಗುವ ತೊಂದರೆಗೆ ಸ್ಪಂದಿಸುತ್ತೇವೆ. –ಶ್ರೀನಿವಾಸ ಜಾಧವ, ಪೌರಾಯುಕ್ತರು ನಗರಸಭೆ ರಬಕವಿ-ಬನಹಟ್ಟಿ

ಜಮಖಂಡಿ-ಕುಡಚಿ ರಾಜ್ಯ ಹೆದ್ದಾರಿ ರಸ್ತೆ ರಾಮಪುರ ಮಾರ್ಗವಾಗಿ ಹೋಗಿದ್ದು. ಸಮಸ್ಯೆ ಉದ್ಬವಿಸಿದ ಸ್ಥಳದಲ್ಲಿನ ರಸ್ತೆ ತಳಭಾಗದಲ್ಲಿ ನಾಲೆಯಿದೆ. ಅದರ ಮುಖಾಂತರ ನೀರು ಈ ಮೊದಲಿನಿಂದಲೂ ಹರಿದು ಹೋಗುತ್ತಿತ್ತು. ಯಾರು ತಡೆದಿದ್ದಾರೆ ಎನ್ನುವುದರ ಕುರಿತು ವಿಚಾರಿಸುತ್ತೇವೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುತ್ತೇವೆ. ನಗರಸಭೆ ಅಧಿ ಕಾರಿಗಳು ನಗರದ ಜನ ಬಳಸಿದ ನೀರು ಹರಿದು ಹೋಗಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸಿ ರೈತರ ಗದ್ದೆಗೆ ನೀರು ಹರಿದು ಹೋಗದಂತೆ ಸರಿಪಡಿಸುತ್ತೇವೆ. –ಶಂಕರ ಬಂಡಿವಡ್ಡರ, ಎಇಇ ಜಮಖಂಡಿ ಪಿಡಬ್ಲೂಡಿ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.