ಬಾಗಿಲು ಮುಚ್ಚಿದ ಕುಡಿವ ನೀರಿನ ಘಟಕಗಳು

•ನಿರ್ವಹಣೆ ನಿರ್ಲಕ್ಷ್ಯ •ಸ್ಥಗಿತಗೊಂಡಿವೆ ಐದು ಘಟಕಗಳು •ಸಾರ್ವಜನಿಕರಿಗೆ ಈಗ ಶುದ್ಧ ನೀರು ಮರೀಚಿಕೆ

Team Udayavani, May 18, 2019, 11:04 AM IST

bagalkote-tdy-4..

ಅಮೀನಗಡ: ಎರಡು ವರ್ಷದಿಂದ ಸ್ಥಗಿತಗೊಂಡ ಪಟ್ಟಣದ 16ನೇ ವಾರ್ಡ್‌ನ ಶುದ್ಧ ಕುಡಿಯುವ ನೀರಿನ ಘಟಕ.

ಅಮೀನಗಡ: ಪಪಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸದಸ್ಯರ ತಾತ್ಸಾರದಿಂದ ಪಟ್ಟಣದ ಐದು ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ.

ಪಟ್ಟಣದ 16ನೇ ವಾರ್ಡ್‌ನ ಚಿತ್ತರಗಿ ಕ್ರಾಸ್‌ ಹತ್ತಿರವಿರುವ ಪಪಂ ಅನುದಾನದಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಎರಡೂವರೆ ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. ಆರಂಭದಲ್ಲಿ ಈ ಘಟಕ ಉತ್ತಮವಾಗಿಯೇ ನಡೆಯುತ್ತಿತ್ತು. ಆದರೆ ಪಪಂ ಅಧಿಕಾರಗಳ ನಿರ್ಲಕ್ಷ್ಯ ಹಾಗೂ ಸದಸ್ಯರುಗಳ ತಾತ್ಸಾರದಿಂದ ಸ್ಥಗಿತಗೊಂಡಿದ್ದು, ವಾರ್ಡ್‌ಗಳ ಜನತೆ ಕುಡಿಯುವ ನೀರಿಗಾಗಿ ಬೇರೆ ವಾರ್ಡ್‌ಗಳಿಗೆ ಅಲೆಯುವ ಪರಿಸ್ಥಿತಿ ಎದುರಾಗಿದೆ.

ಪಟ್ಟಣದ 8 ಮತ್ತು 16ನೇ ವಾರ್ಡ್‌ಗಳ ಸೆಂಟರ್‌ ಪಾಯಿಂಟ್ ಗುರುತಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಎರಡು ವಾರ್ಡ್‌ಗಳ ಜನರಿಗೆ ಈ ಘಟಕ ಬಹಳ ಅನುಕೂಲವಾಗಿತ್ತು. ಈ ಘಟಕ ಕೆಟ್ಟಿರುವುದರಿಂದ ಎರಡೂ ವಾರ್ಡ್‌ನ ನೂರಾರು ಜನರಿಗೆ ತೀವ್ರ ತೊಂದರೆಯಾಗಿದೆ.

ಘಟಕ ಬಂದಾಗಲು ಕಾರಣವೇನು? ಘಟಕ ಸ್ಥಾಪನೆ ಮಾಡುವಾಗಲೇ ಗುಣಮಟ್ಟದ ಸಾಮಾನುಗಳನ್ನು ಬಳಸಿಲ್ಲ. ವಾರ್ಡ್‌ನ ಜನತೆಗೆ ಉಪಯುಕ್ತವಾಗಲಿ ಎಂಬ ಉದ್ದೇಶದಿಂದ ಆರಂಭಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಆರಂಭದಿಂದಲೇ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಈ ಘಟಕದ ಬಗ್ಗೆ ಪಪಂ ಎಂಜಿನಿಯರ್‌ ಮತ್ತು ಅಧಿಕಾರಿಗಳು ಮತ್ತು ಸದಸ್ಯರು ಸರಿಯಾಗಿ ಗಮನ ನೀಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದೆ.

ಪಟ್ಟಣದಲ್ಲಿರುವ ಒಟ್ಟು ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿದೆ. ಐದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪತ್ರಿಕಟ್ಟಿ ಹತ್ತಿರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿದೆ. ಉಳಿದ 5ನೇ ವಾರ್ಡ್‌ನಲ್ಲಿರುವ ಘಟಕ ಇನ್ನೂ ಆರಂಭವಾಗಿಲ್ಲ. 16ನೇ ವಾರ್ಡ್‌ನ ಸಂಗಮ ಕ್ರಾಸ್‌ದಲ್ಲಿರುವ ಘಟಕಗಳು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಚಾಲುಕ್ಯ ಡಾಬಾ ಹತ್ತಿರವಿರುವ ಘಟಕ ಮತ್ತು ಮೂರನೇ ವಾರ್ಡ್‌ನ ನೀರಿನ ಘಟಕದಲ್ಲಿ ಮೆಮರಿಯನ್‌ ಕೆಟ್ಟು ನಿಂತಿದೆ. ಇದರಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನೇ ನಂಬಿರುವ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುವ ಟೆಂಡರ್‌ ಮುಗಿದಿದ್ದು, ಈ ಹಿಂದೆ ಟೆಂಡರ್‌ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆದಾರನಿಗೆ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ನೀಡಿದ್ದಾರೆ. ಆದರೆ, ಗುತ್ತಿಗೆದಾರನಿಗೆ ಪಟ್ಟಣ ಪಂಚಾಯಿತಿ ಅಗತ್ಯ ಸಾಮಗ್ರಿ ಪೂರೈಸದ ಕಾರಣ ಅವೆಲ್ಲ ಸರಿಯಾಗಿ ನಿರ್ವಹಣೆಯಾಗಿಲ್ಲ ಎಂಬ ಮಾತು ಕೇಳಿ ಬಂದಿದೆ.

ಪಟ್ಟಣದಲ್ಲಿರುವ ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಚಾಲ್ತಿಯಲ್ಲಿದೆ. 16ನೇ ವಾರ್ಡ್‌ನ ಘಟಕ ಸುಮಾರು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸದಸ್ಯರ, ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಬರದಿಂದ ವಾರಕೊಮ್ಮೆ ನೀರು ಬರುತ್ತದೆ. ಶುದ್ಧ ಕುಡಿಯುವ ನೀರಿನ ಘಟಕ ಕೂಡಾ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು.-ನಿಜಾಮುದ್ದಿನ್‌ ಖಾದ್ರಿ, ಯುವ ಮುಖಂಡರು, ಅಮೀನಗಡ

•ಎಚ್.ಎಚ್.ಬೇಪಾರಿ

ಟಾಪ್ ನ್ಯೂಸ್

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.