ಬರ ತೀವ್ರತೆ; ಜಾನುವಾರುಗಳದ್ದೇ ಚಿಂತೆ

•1.69 ಲಕ್ಷ ಮೆಟ್ರಿಕ್‌ ಮೇವು ಲಭ್ಯ•ಜಾನುವಾರುಗಳಿಗೆ ನೀರೊದಗಿಸಲು ಗಂಭೀರ ಯತ್ನ

Team Udayavani, May 17, 2019, 12:29 PM IST

bagalkote-1..

ಬಾಗಲಕೋಟೆ: ನಗರ ಹೊರ ವಲಯದ ಖಾಸಗಿ (ಪಾಂಜರಪೋಳ) ಗೋ ಶಾಲೆಯಲ್ಲಿ ಆಶ್ರಯ ಪಡೆದ ಜಾನುವಾರುಗಳು.

ಬಾಗಲಕೋಟೆ: ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಜಾನುವಾರುಗಳಿಗೆ ನೀರು-ಮೇವು ಒದಗಿಸಲು ಜಿಲ್ಲಾಡಳಿತ ಪ್ರಯಾಸ ಪಡುತ್ತಿದೆ.

ಜಿಲ್ಲೆಯಲ್ಲಿ 4,65,563 (ಎಮ್ಮೆ, ಎತ್ತು, ಹಸು) ಜಾನುವಾರುಗಳಿದ್ದು, ಮೇವಿನ ಸಮಸ್ಯೆ ಇಲ್ಲ. ಆದರೆ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಒಂದಷ್ಟು ಗಂಭೀರ ಪ್ರಯತ್ನದಲ್ಲಿ ಜಿಲ್ಲಾಡಳಿತ ತೊಡಗಿದೆ. ಜಿಲ್ಲೆಯ ಆರು ತಾಲೂಕುಗಳ ಪೈಕಿ ಜಮಖಂಡಿ ತಾಲೂಕಿನಲ್ಲಿ ಅತೀ ಹೆಚ್ಚು 1,53,643 ಜಾನುವಾರುಗಳಿದ್ದು, ಇಲ್ಲಿ 46,562 ಮೆಟ್ರಿಕ್‌ ಟನ್‌ ಮೇವು ಇದ್ದು, ಅದು ಮುಂದಿನ 9 ವಾರಗಳವರೆಗೆ ಸಾಕಾಗಲಿದೆ ಎಂದು ಅಂದಾಜಿಸಲಾಗಿದೆ. ಜಮಖಂಡಿ ಹೊರತುಪಡಿಸಿದರೆ, ಬಾದಾಮಿ-ಮುಧೋಳ ತಾಲೂಕಿನಲ್ಲಿ ಅತಿ ಹೆಚ್ಚು ಜಾನುವಾರುಗಳಿದ್ದು, ಹುನಗುಂದದಲ್ಲಿ 17 ವಾರ, ಮುಧೋಳದಲ್ಲಿ 9 ವಾರಕ್ಕೆ ಆಗುವಷ್ಟು ಮೇವಿದೆ. ಜಿಲ್ಲೆಯಲ್ಲಿ ಸದ್ಯ 1.69 ಲಕ್ಷ ಮೆಟ್ರಿಕ್‌ ಮೇವು ಲಭ್ಯವಿದೆ.

ಮೇವು ಖರೀದಿ-ಗೋ ಶಾಲೆಗೆ ಸಿದ್ಧತೆ: ಜಿಲ್ಲೆಯ ಜಾನುವಾರುಗಳ ಅಗತ್ಯಕ್ಕೆ ಸಾಕಾಗುವಷ್ಟು ಮೇವು ಸಂಗ್ರಹವಿದ್ದು, ಹೀಗಾಗಿ ಗೋ ಶಾಲೆ ಆರಂಭಿಸುವ ಪ್ರಮೇಯ ಬಂದಿಲ್ಲ. ಗೋ ಶಾಲೆಗಾಗಿ ಜಿಲ್ಲೆಯ ಯಾವ ಭಾಗದಿಂದಲೂ ಬೇಡಿಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

ಸದ್ಯ ಜಿಲ್ಲೆಯಲ್ಲಿ 10 ವಾರಕ್ಕಾಗುವಷ್ಟು ಮೇವಿದೆ. ಅಲ್ಲದೇ ಬಾದಾಮಿ ಎಪಿಎಂಸಿಯಲ್ಲಿ 8.11 ಮೆಟ್ರಿಕ್‌ ಟನ್‌, ಬಾಗಲಕೋಟೆ ಎಪಿಎಂಸಿಯಲ್ಲಿ 8.05 ಮೆಟ್ರಿಕ್‌ ಟನ್‌ ಒಣ ಮೇವು (ಭಪರ್‌ ಸ್ಟಾಕ್‌) ಸಂಗ್ರಹಿಸಲಾಗಿದೆ. ಒಂದು ವೇಳೆ ಮೇವಿನ ಸಮಸ್ಯೆ, ಗೋ ಶಾಲೆ ತೆರೆಯಬೇಕಾದ ಅನಿವಾರ್ಯತೆ ಎದುರಾದರೆ ಅದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಆಯಾ ತಹಶೀಲ್ದಾರರು ತಮ್ಮ ತಾಲೂಕಿನಲ್ಲಿ ಮೇವಿನ ಅವಶ್ಯಕತೆಗೆ ಅನುಗುಣವಾಗಿ ಮೇವು ಖರೀದಿಗೂ ಅನುಮತಿ ನೀಡಲಾಗಿದೆ. ಸದ್ಯ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ಡಿಸಿ ವಿವರಿಸಿದರು.

ಹಸಿರು ಮೇವು: ಜಿಲ್ಲೆಯಲ್ಲಿ ಒಣ ಮೇವು ಸಾಕಷ್ಟು ಸಂಗ್ರಹವಿದೆ. ಅಲ್ಲದೇ ಬಹುತೇಕ ಕಬ್ಬು ಬೆಳೆಯುವ ಪ್ರದೇಶಗಳಿದ್ದು, ಮೇವಿನ ಕೊರತೆ ನೀಗಿಸಿವೆ. ನೀರಾವರಿ ಸೌಲಭ್ಯ ಹೊಂದಿದ ರೈತರಿಗೆ 32,431 ಮೇವಿನ ಬೀಜದ ಮಿನಿ ಕಿಟ್ ಪೂರೈಸಿದ್ದು, ಇದರಿಂದ 32,431 ಮೆಟ್ರಿಕ್‌ ಟನ್‌ ಮೇವು ಲಭ್ಯವಾಗುವ ನಿರೀಕ್ಷೆ ಇದೆ. ಇದು 32,405 ರೈತರು ತಮ್ಮಲ್ಲಿರುವ ಜಾನುವಾರುಗಳಿಗೆ ನೀಡಲು ಬಳಸಲು ತಿಳಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ ಹೆಗಡೆ ‘ಉದಯವಾಣಿ’ಗೆ ತಿಳಿಸಿದರು.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.