ಬರ ತೀವ್ರತೆ; ಜಾನುವಾರುಗಳದ್ದೇ ಚಿಂತೆ

•1.69 ಲಕ್ಷ ಮೆಟ್ರಿಕ್‌ ಮೇವು ಲಭ್ಯ•ಜಾನುವಾರುಗಳಿಗೆ ನೀರೊದಗಿಸಲು ಗಂಭೀರ ಯತ್ನ

Team Udayavani, May 17, 2019, 12:29 PM IST

bagalkote-1..

ಬಾಗಲಕೋಟೆ: ನಗರ ಹೊರ ವಲಯದ ಖಾಸಗಿ (ಪಾಂಜರಪೋಳ) ಗೋ ಶಾಲೆಯಲ್ಲಿ ಆಶ್ರಯ ಪಡೆದ ಜಾನುವಾರುಗಳು.

ಬಾಗಲಕೋಟೆ: ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಜಾನುವಾರುಗಳಿಗೆ ನೀರು-ಮೇವು ಒದಗಿಸಲು ಜಿಲ್ಲಾಡಳಿತ ಪ್ರಯಾಸ ಪಡುತ್ತಿದೆ.

ಜಿಲ್ಲೆಯಲ್ಲಿ 4,65,563 (ಎಮ್ಮೆ, ಎತ್ತು, ಹಸು) ಜಾನುವಾರುಗಳಿದ್ದು, ಮೇವಿನ ಸಮಸ್ಯೆ ಇಲ್ಲ. ಆದರೆ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಒಂದಷ್ಟು ಗಂಭೀರ ಪ್ರಯತ್ನದಲ್ಲಿ ಜಿಲ್ಲಾಡಳಿತ ತೊಡಗಿದೆ. ಜಿಲ್ಲೆಯ ಆರು ತಾಲೂಕುಗಳ ಪೈಕಿ ಜಮಖಂಡಿ ತಾಲೂಕಿನಲ್ಲಿ ಅತೀ ಹೆಚ್ಚು 1,53,643 ಜಾನುವಾರುಗಳಿದ್ದು, ಇಲ್ಲಿ 46,562 ಮೆಟ್ರಿಕ್‌ ಟನ್‌ ಮೇವು ಇದ್ದು, ಅದು ಮುಂದಿನ 9 ವಾರಗಳವರೆಗೆ ಸಾಕಾಗಲಿದೆ ಎಂದು ಅಂದಾಜಿಸಲಾಗಿದೆ. ಜಮಖಂಡಿ ಹೊರತುಪಡಿಸಿದರೆ, ಬಾದಾಮಿ-ಮುಧೋಳ ತಾಲೂಕಿನಲ್ಲಿ ಅತಿ ಹೆಚ್ಚು ಜಾನುವಾರುಗಳಿದ್ದು, ಹುನಗುಂದದಲ್ಲಿ 17 ವಾರ, ಮುಧೋಳದಲ್ಲಿ 9 ವಾರಕ್ಕೆ ಆಗುವಷ್ಟು ಮೇವಿದೆ. ಜಿಲ್ಲೆಯಲ್ಲಿ ಸದ್ಯ 1.69 ಲಕ್ಷ ಮೆಟ್ರಿಕ್‌ ಮೇವು ಲಭ್ಯವಿದೆ.

ಮೇವು ಖರೀದಿ-ಗೋ ಶಾಲೆಗೆ ಸಿದ್ಧತೆ: ಜಿಲ್ಲೆಯ ಜಾನುವಾರುಗಳ ಅಗತ್ಯಕ್ಕೆ ಸಾಕಾಗುವಷ್ಟು ಮೇವು ಸಂಗ್ರಹವಿದ್ದು, ಹೀಗಾಗಿ ಗೋ ಶಾಲೆ ಆರಂಭಿಸುವ ಪ್ರಮೇಯ ಬಂದಿಲ್ಲ. ಗೋ ಶಾಲೆಗಾಗಿ ಜಿಲ್ಲೆಯ ಯಾವ ಭಾಗದಿಂದಲೂ ಬೇಡಿಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

ಸದ್ಯ ಜಿಲ್ಲೆಯಲ್ಲಿ 10 ವಾರಕ್ಕಾಗುವಷ್ಟು ಮೇವಿದೆ. ಅಲ್ಲದೇ ಬಾದಾಮಿ ಎಪಿಎಂಸಿಯಲ್ಲಿ 8.11 ಮೆಟ್ರಿಕ್‌ ಟನ್‌, ಬಾಗಲಕೋಟೆ ಎಪಿಎಂಸಿಯಲ್ಲಿ 8.05 ಮೆಟ್ರಿಕ್‌ ಟನ್‌ ಒಣ ಮೇವು (ಭಪರ್‌ ಸ್ಟಾಕ್‌) ಸಂಗ್ರಹಿಸಲಾಗಿದೆ. ಒಂದು ವೇಳೆ ಮೇವಿನ ಸಮಸ್ಯೆ, ಗೋ ಶಾಲೆ ತೆರೆಯಬೇಕಾದ ಅನಿವಾರ್ಯತೆ ಎದುರಾದರೆ ಅದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಆಯಾ ತಹಶೀಲ್ದಾರರು ತಮ್ಮ ತಾಲೂಕಿನಲ್ಲಿ ಮೇವಿನ ಅವಶ್ಯಕತೆಗೆ ಅನುಗುಣವಾಗಿ ಮೇವು ಖರೀದಿಗೂ ಅನುಮತಿ ನೀಡಲಾಗಿದೆ. ಸದ್ಯ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ಡಿಸಿ ವಿವರಿಸಿದರು.

ಹಸಿರು ಮೇವು: ಜಿಲ್ಲೆಯಲ್ಲಿ ಒಣ ಮೇವು ಸಾಕಷ್ಟು ಸಂಗ್ರಹವಿದೆ. ಅಲ್ಲದೇ ಬಹುತೇಕ ಕಬ್ಬು ಬೆಳೆಯುವ ಪ್ರದೇಶಗಳಿದ್ದು, ಮೇವಿನ ಕೊರತೆ ನೀಗಿಸಿವೆ. ನೀರಾವರಿ ಸೌಲಭ್ಯ ಹೊಂದಿದ ರೈತರಿಗೆ 32,431 ಮೇವಿನ ಬೀಜದ ಮಿನಿ ಕಿಟ್ ಪೂರೈಸಿದ್ದು, ಇದರಿಂದ 32,431 ಮೆಟ್ರಿಕ್‌ ಟನ್‌ ಮೇವು ಲಭ್ಯವಾಗುವ ನಿರೀಕ್ಷೆ ಇದೆ. ಇದು 32,405 ರೈತರು ತಮ್ಮಲ್ಲಿರುವ ಜಾನುವಾರುಗಳಿಗೆ ನೀಡಲು ಬಳಸಲು ತಿಳಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ ಹೆಗಡೆ ‘ಉದಯವಾಣಿ’ಗೆ ತಿಳಿಸಿದರು.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.