ಪೌರತ್ವ ಕಾಯಿದೆ ತಿದ್ದುಪಡಿಗೆ ಡಿಎಸ್‌ಎಸ್‌ ಆಕ್ರೋಶ


Team Udayavani, Jan 18, 2020, 12:25 PM IST

bk-tdy-1

ಬಾಗಲಕೋಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ ಪಿಆರ್‌ ಕಾಯಿದೆ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶುಕ್ರವಾರ ಜಿಲ್ಲಾಡಳಿತ ಭವನ ಎದುರಿಗೆ ಪ್ರತಿಭಟಿಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಪರಶುರಾಮ ನೀಲನಾಕಯ ಮಾತನಾಡಿ, ತಲಾತಲಾಂತರದಿಂದ ಭಾರತದ ಭೂಮಿಯಲ್ಲಿ ನೆಲೆ ಊರಿರುವ ಬಹುಜನರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಆದಿವಾಸಿಗಳು, ಅಲೆಮಾರಿ ಬುಡಕಟ್ಟು ಜನಾಂಗದವರು ಸೇರಿದಂತೆ ಈ ದೇಶದ ಮೂಲ ನಿವಾಸಿಗಳ ಹತ್ತಿರ ಸರ್ಕಾರದ ಕಾಯಿದೆ ಮೂಲಕ ಪೌರತ್ವ ಸಾಬೀತು ಪಡಿಸಲು ಅಗತ್ಯ ದಾಖಲೆಗಳಿಲ್ಲ. ಲಭ್ಯವಿರುವ ದಾಖಲೆಗಳಾದ ಆಧಾರ ಕಾರ್ಡ್‌, ರೇಷನ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿಯಿಂದ ಇವರೆಲ್ಲರೂ ಭಾರತೀಯರೆಂದು ಈಗಾಗಲೇ ಸಾಬೀತಾಗಿದೆ. ಆದರೂ ಕೇಂದ್ರ ಸರ್ಕಾರ ಉದ್ದೇಶ ಪೂರ್ವಕ ಈ ಕಾಯಿದೆ ಜಾರಿಗೆ ಮೂಲಕ ದೇಶದ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.

ದೇಶದ ಜಿಡಿಪಿ ಸಂಪೂರ್ಣ ಕುಸಿದಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿನ ಕೈಗಾರಿಕೆಗಳು ಬಾಗಿಲು ಮುಚ್ಚುತ್ತಿವೆ. ವಿದ್ಯಾವಂತ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ಜನವಿರೋಧಿ  ಕಾಯಿದೆ ಜಾರಿಗೆ ಮೂಲಕ ಹಿಟ್ಲರ್‌ ಆಡಳಿತ ನಡೆಸುತ್ತಿದೆ ಎಂದು ದೂರಿದರು. ಭಾರತ ದೇಶ ಬಹುತ್ವದ ನೆಲೆಯ ಮೇಲೆ ನಿಂತಿರುವ ಜಾತ್ಯತೀತ ರಾಷ್ಟ್ರವಾದ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುವ ಹುನ್ನಾರ ತೆರೆಮರೆಯ ಹಿಂದೆ ನಡೆದಿದೆ. ಈ ದೇಶದ ಜನರನ್ನು ಗಣನೆಗೆ ತೆಗೆದುಕೊಂಡು ಸಂವಿಧಾನದ ಉಳಿವಿಗಾಗಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯಿದೆ ಕೂಡಲೇ ನಿಷೇಧ ಮಾಡಬೇಕು. ಈ ವಿಷಯವನ್ನು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿ ಜಾರಿ ಮಾಡಿರುವ ಕೇಂದ್ರ ಸರ್ಕಾರ, ಕೂಡಲೇ ನೈತಿಕ ಹೊಣೆ ಹೊತ್ತು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದರು.

ಡಿಎಸ್‌ಎಸ್‌ನ ಜಿಲ್ಲಾ ಸಂಚಾಲಕ ಮುತ್ತಣ್ಣ ಚಲವಾದಿ, ಸಿದ್ದು ಮಾದರ, ಮೆಹಬೂಬ ಸೌದಾಗರ, ಸಲಿಂ ಶೇಖ, ಬಂದೇನವಾಜ ಸೌದಾಗರ, ನರಸಪ್ಪ ಹಿರೇಮಾನಿ, ಅಂಜು ಬಾನು, ಲವ ಹರೇಮಾನಿ, ವಿಠಲ ಮಿರ್ಜಿ, ತುಳಜರಾಮ ನೀಲನಾಯಕ, ಸುಧಾಕರ ಬೆಂಡಿಗೇರಿ, ಮಲ್ಲು ವಡಗೇರಿ, ರವಿ ಮಾಚಕನೂರ, ಆನಂದ ನೀಲನಾಯಕ, ಶಿವಾನಂದ ಗಲಗಲಿ, ರಮೇಶ ಮಾದರ, ಶಿಡ್ಲಪ್ಪ ಮಾದರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.