ದಸರಾ ಸಂಭ್ರಮದಲ್ಲಿ ಬಾಗಲಕೋಟೆ ವೈಭವ!

ಮುಧೋಳ ಶ್ವಾನ-ಇಳಕಲ್ಲ ಸೀರೆ-ಐಹೊಳೆಯ ದುರ್ಗಾ ದೇವಾಲಯ ; ಗಮನ ಸೆಳೆದ ಸ್ತಬ್ಧ ಚಿತ್ರಗಳು

Team Udayavani, Oct 6, 2022, 10:39 AM IST

6

ಬಾಗಲಕೋಟೆ: ನಾಡಹಬ್ಬ ಎಂದೇ ಖ್ಯಾತಿ ಪಡೆದ ಪ್ರಖ್ಯಾತ ಮೈಸೂರಿನ ದಸರಾ ಸಂಭ್ರಮದಲ್ಲಿ ಬಾಗಲಕೋಟೆಯ ಜಿಲ್ಲೆಯ ಐತಿಹಾಸಿಕ ಸ್ತಬ್ಧ ಚಿತ್ರಗಳು ಗಮನ ಸೆಳೆದಿವೆ.

ಹೌದು, ದಸರಾ ಸಂಭ್ರಮದಲ್ಲಿ ನಾಡಿನ ಹಲವು ಸ್ಥಳ, ವಿಶೇಷತೆಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ಮೂಲಕ ಅವುಗಳಿಗೆ ವಿಶೇಷ ಗೌರವ ಸೂಚಿಸುವುದು ಪರಂಪರೆ. ಈ ಬಾರಿ ಬಾಗಲಕೋಟೆ ಜಿಲ್ಲೆಯ ಪ್ರಸಿದ್ಧ ಇಳಕಲ್ಲ ಸೀರೆ, ದೇಶದ ಸಂಸತ್ತು ಭವನ ನಿರ್ಮಾಣಕ್ಕೆ ಪ್ರೇರಣೆ ಎನ್ನಲಾದ ಐಹೊಳೆಯ ದುರ್ಗಾ ದೇವಾಲಯ ಹಾಗೂ ದೇಶದ ಗಡಿ ಕಾಯಲು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಭದ್ರತಾ ಪಡೆಯಲ್ಲಿ ಸ್ಥಾನ ಪಡೆದಿರುವ ಮುಧೋಳ ಶ್ವಾನಗಳ ಸಹಿತ ಒಟ್ಟು ಮೂರು ಸ್ತಬ್ಧ ಚಿತ್ರಗಳು ಈ ಬಾರಿಯ ದಸರಾದಲ್ಲಿ ವಿಶೇಷ ಆಕರ್ಷಣೆಯಾಗಿದ್ದವು.

ಬಡಕಲು ದೇಹ-ಬಲು ಚುರುಕು: ವಿಶ್ವದ ಹಲವು ತಳಿಯ ಶ್ವಾನಗಳಲ್ಲಿ ಮುಧೋಳ ಶ್ವಾನ ತನ್ನ ವಿಶೇಷತೆಯಿಂದಲೇ ಗಮನ ಸೆಳೆದಿದೆ. ಇದು ಅತ್ಯಂತ ಜಾಣ, ಚುರುಕುತನ ಹಾಗೂ ಅತ್ಯಂತ ವಿಶ್ವಾಸಾರ್ಹ ಪ್ರಾಣಿಗಳಲ್ಲಿ ಮುಂಚೂಣಿ ಎನಿಸಿಕೊಂಡಿದೆ. 13ರಿಂದ 14 ವರ್ಷ ಆಯಸ್ಸು, 29ರಿಂದ 35 ಇಂಚು ಎತ್ತರ ಹೊಂದಿರುವ ಮೂಧೋಳ ಶ್ವಾನ, ಪಾಶಾಮಿ, ಕಾಠವಾರ ಹಾಗೂ ಕಾರವಾನ ಎಂಬ ವಿವಿಧ ಹೆಸರಿನಿಂದ ಕರೆಯಲ್ಪಡುತ್ತದೆ.

ಅಪ್ಪಟ ದೇಶೀಯ ತಳಿಯ ಈ ಶ್ವಾನ, ಮೊದಲ ದೇಶೀಯ ನಾಯಿ ಇದಾಗಿದ್ದು, ಭಾರತೀಯ ಸೇನೆಗೂ ಆಯ್ಕೆಯಾಗಿದೆ. ದೇಶೀಯ ನಾಯಿಗಳನ್ನು ಅಪರಾಧ ಪತ್ತೆ ಹಚ್ಚುವಿಕೆ, ಭಯೋತ್ಪಾದನೆ ಚಟುವಟಿಕೆಗಳ ಮೇಲೆ ನಿಗಾ ಇಡಲು, ಸೇನೆಯ ವಿವಿಧ ಚಟುವಟಿಕೆಗಳಲ್ಲಿ, ಪೊಲೀಸ್‌ ಇಲಾಖೆಯ ಜತೆಗೆ ಪ್ರಧಾನಮಂತ್ರಿಗಳ ಭದ್ರತಾ ಪಡೆಗೂ ಆಯ್ಕೆಯಾಗಿರುವುದು ಮುಧೋಳ ಶ್ವಾನದ ವಿಶೇಷ. ಇದೀಗ ವೈಭವದ ದಸರಾ ಸಂಭ್ರಮದಲ್ಲಿ ಗಮನ ಸೆಳೆದಿರುವುದು ಮತ್ತೂಂದು ವಿಶೇಷ.

ಬಲು ಅಂದ ಇಳಕಲ್ಲ ಸೀರೆ: ಇನ್ನು ಅತ್ಯಂತ ಮೃದುವಾದ, ಮಹಿಳೆಯರ ಅಂದ ಹೆಚ್ಚಿಸುವ ಇಳಕಲ್ಲ ಸೀರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. 8ನೇ ಶತಮಾನದಲ್ಲಿ ಇಳಕಲ್ಲ ನಗರ ಹತ್ತಿ ಮತ್ತು ರೇಷ್ಮೆ ಬಣ್ಣಕ್ಕೆ, ನೇಕಾರಿಕೆಗೆ ಪ್ರಸಿದ್ಧ ಪಡೆದ ವಿಶೇಷ ಸ್ಥಳವಾಗಿತ್ತು. ಸೃಜನಶೀಲ ನೇಕಾರರು, ಆವಿಷ್ಕಾರ ಮಾಡಿದ ಸೀರೆಯೇ ಇಂದು, ಇಳಕಲ್ಲ ಸೀರೆಯಾಗಿ ಎಲ್ಲೆಡೆ ಖ್ಯಾತಿ ಪಡೆದಿದೆ.

ಇಳಕಲ್ಲ ಸೀರೆ ನೇಯಲಾಗುವ ವಿನ್ಯಾಸದ ಧಡಿ ಹಾಗೂ ಸೆರಗು ಪ್ರಕೃತಿಯಿಂದ ಸ್ಪೂರ್ತಿ ಪಡೆದ ಹಿನ್ನೆಲೆಯಲ್ಲಿ ಉಷ್ಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಅತ್ಯಂತ ಪ್ರತಿಕೂಲವಾದ ಉಡುಪು ಕೂಡ. ಹತ್ತಿ ಸೀರೆಗಳ ವಿನ್ಯಾಸ ಹಾಗೂ ಪರಂಪರೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ, ಭೌಗೋಳಿಕ ಸಂಕೇತಗಳ ನೋಂಡಣಿ ಮಾಡಿದೆ. ಇಳಕಲ್ಲ ಸೀರೆ, ಪ್ರಾಕೃತಿಕ ಹಾಗೂ ವಿನ್ಯಾಸದ ಅಂಶಗಳ ಮೇರೆಗೆ ಇಳಕಲ್ಲ ಸೀರೆ ಮತ್ತು ಗುಳೇದಗುಡ್ಡ ಖಣ ಉತ್ತಮ ಕ್ಯಾಂಬಿನೇಶನ್‌ ಉಡುಪು ಎಂಬ ಪ್ರತೀತಿ ಕೂಡ ಪಡೆದಿವೆ.

ಸಂಸತ್‌ ಭವನಕ್ಕೆ ಪ್ರೇರಣೆ !: ದೇಶದ ಸಂಸತ್‌ ಭವನ ನಿರ್ಮಾಣಕ್ಕೆ ಪ್ರೇರಣೆ ಎಂಬ ಖ್ಯಾತಿ ಪಡೆದ ಜಿಲ್ಲೆಯ ಐತಿಹಾಸಿಕ ಐಹೊಳೆಯ ದುರ್ಗಾದೇವಾಲಯ ಕೂಡ ಈ ಬಾರಿಯ ದಸರಾ ವೈಭವದಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿರುವುದು ಜಿಲ್ಲೆಯ ಮತ್ತೂಂದು ಹೆಮ್ಮೆ. ಬಾದಾಮಿ ಚಾಲುಕ್ಯರ ವಾಸ್ತುಶಿಲ್ಪದ ದೊಡ್ಡ ಕೇಂದ್ರವೇ ಈ ಐಹೊಳೆ. ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎಂಬ ಖ್ಯಾತಿಯೂ ಈ ಗ್ರಾಮ ಪಡೆದಿದೆ. ಇಲ್ಲಿನ ದೇವಾಲಯಗಳಲ್ಲಿ ದುರ್ಗಾ ದೇವಾಲಯ ಪ್ರಮುಖವಾಗಿದೆ. ಇದನ್ನು ಸೂರ್ಯ ದೇವಾಲಯ ಎಂದೂ ಕರೆಯಲಾಗುತ್ತದೆ.

ಕ್ರಿ.ಶ.742ರಲ್ಲಿ 2ನೇ ವಿಕ್ರಮಾದಿತ್ಯನ ಅಳಿಯ ಕೋಮಾರ್‌ ಸಿಂಗ್‌ ಎಂಬುವವನು ನಿರ್ಮಿಸಿದನು ಎಂಬ ಉಲ್ಲೇಖ ಇತಿಹಾಸದ ಪುಟಗಳಲ್ಲಿದೆ. ಅಸಂಖ್ಯಾತ ಕಲ್ಲಿನ ಕಂಬಗಳು ಹಾಗೂ ಇಂಗ್ಲಿಷ್‌ ಅಕ್ಷರದ ಯು ಆಕಾರದಲ್ಲಿ ವಿಶಿಷ್ಟವಾಗಿ ರಚಿಸಲಾಗಿದೆ. ಹೀಗಾಗಿ ದೆಹಲಿಯ ಸಂಸತ್‌ ಭವನ ನಿರ್ಮಾಣಕ್ಕೆ ಇದೇ ದುರ್ಗಾ ದೇವಾಲಯ ಪ್ರೇರಣೆ ಕೂಡಾ ಆಗಿದೆ ಎನ್ನಲಾಗಿದೆ.

ಮಲಪ್ರಭಾ ನದಿಯ ದಡದಲ್ಲಿರುವ ಈ ದೇವಾಲಯದ ಮುಖ ಮಂಟಪವು ರಾಮ-ಲಕ್ಷ್ಮಣ, ಸೀತಾ ಮಾತೆಯನ್ನು ಗುಹ-ನಾವೆಯ ನೆರವಿನಿಂದ ನದಿ ದಾಟಿಸಿದ ಸುಂದರ ವಾಸ್ತುಶಿಲ್ಪದ ಪುಣ್ಯ ಕಥೆಗಳನ್ನು ಈ ದೇವಾಲಯದಲ್ಲಿ ಮೂಡಿ ಬಂದಿವೆ. ಒಟ್ಟಾರೆ, ಜಿಲ್ಲೆಯ ಒಂದು ಐತಿಹಾಸಿಕ ಸ್ಥಳ, ಸುಂದರ ಉಡುಪು ಹಾಗೂ ವಿಶಿಷ್ಟತೆಯಿಂದ ಗಮನ ಸೆಳೆದ ಶ್ವಾನ ಸಹಿತ 3 ಸ್ತಬ್ಧ ಚಿತ್ರಗಳು ಮೈಸೂರು ದಸರಾದಲ್ಲಿ ವಿಶೇಷ ಗಮನ ಸೆಳೆದಿರುವುದು ಜಿಲ್ಲೆಯ ಹೆಮ್ಮೆ ಎಂದು ಸಂಭ್ರಮಿಸಲಾಗುತ್ತಿದೆ.

ಬಾಗಲಕೋಟೆ ಜಿಲ್ಲೆ, ಹಲವು ವಿಶೇಷತೆ ಹಾಗೂ ವೈಶಿಷ್ಟ್ಯತೆಯಿಂದ ಗಮನ ಸೆಳೆದಿದೆ. ನಾಡಿನ ಪ್ರಸಿದ್ಧ ಮೈಸೂರು ದಸರಾದಲ್ಲಿ ಈ ಬಾರಿ ನಮ್ಮ ಜಿಲ್ಲೆಯ ಮುಧೋಳ ಶ್ವಾನ, ಇಳಕಲ್ಲ ಸೀರೆ ಹಾಗೂ ಐಹೊಳೆಯ ದುರ್ಗಾ ದೇವಾಲಯದ ಸ್ತಬ್ಧಚಿತ್ರಗಳು ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಮೆ ತಂದಿದೆ. ದಸರಾ ಉತ್ಸವ ಕಮೀಟಿಯಿಂದ ಈ ಕುರಿತು ಸಂದೇಶ ಬಂದಾಗ, ಜಿಲ್ಲೆಯಿಂದ ಈ ಮೂರು ಸ್ತಬ್ಧ ಚಿತ್ರಗಳನ್ನು ಸಿದ್ಧಗೊಳಿಸಿ ಕಳುಹಿಸಲಾಗಿದೆ.  –ಟಿ.ಭೂಬಾಲನ್‌, ಜಿಪಂ ಸಿಇಒ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.