ಕೋಚಿಂಗ್‌ ಪಡೆಯದೇ ಎಂಟು ಸರ್ಕಾರಿ ಹುದ್ದೆ ಪಡೆದ ಸಾಧಕಿ


Team Udayavani, May 9, 2019, 12:02 PM IST

bag-2

ಮಹಾಲಿಂಗಪುರ: ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್‌ಸಿಪಿ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಯಲ್ಲವ್ವಾ ಮಾಳೇದ ಯಾವುದೇ ಕೋಚಿಂಗ್‌ ಪಡೆಯದೇ 8 ಸರ್ಕಾರಿ ಹುದ್ದೆ ಪಡೆದಿದ್ದಾರೆ.

ತೇರದಾಳ ಪಟ್ಟಣದ ಕೂಲಿಕಾರರಾದ ಭೀಮಪ್ಪ ಮತ್ತು ಸುಭದ್ರಾ ಮಾಳೇದ ಪುತ್ರಿಯಾದ ಯಲ್ಲವ್ವಾ ಬೆಳೆದದ್ದು ಕಷ್ಟದ ಹಾದಿಯಲ್ಲಿಯೇ. ಇರಲು ಗೇಣುದ್ದ ಜಾಗವಿಲ್ಲ. ಮನೆ, ಹೊಲವಂತೂ ಇಲ್ಲವೇ ಇಲ್ಲ. ಅಜ್ಜಿಯ ಮನೆಯೇ ಇವರಿಗಾಸರೆ.

ಕಾಲೇಜಿನ ಫೀ ಪಾವತಿಸಲು ಪರದಾಟ ನಡೆಸಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಯಲ್ಲವ್ವಾ ಸಮೀರವಾಡಿ ಸೋಮೈಯಾ ಶುಗರ್ ಫ್ಯಾಕ್ಟರಿ ನೀಡಿದ ವಿದ್ಯಾರ್ಥಿ ವೇತನದಿಂದ ಶಿಕ್ಷಣ ಪುನರಾರಂಭಿಸಿ ಬಿಎಸ್ಸಿ, ಎಂಎಸ್ಸಿ ಅಧ್ಯಯನ ಮಾಡಿದ್ದಾರೆ. ಸುಮಾರು ಒಂದು ವರ್ಷದವರೆಗೂ ಹಸಿವು, ನಿದ್ರೆಯೆನ್ನದೇ ಓದಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ.

ಈಗ ಏಕಕಾಲಕ್ಕೆ ನವೋದಯ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು, ಮಹಾನಗರ ಪಾಲಿಕೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ಮಹಾನಗರ ಪಾಲಿಕೆಯ ಕರ ವಸೂಲಿಗಾರರು, ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು, ಗ್ರೇಡ್‌-2 ಮುಖ್ಯಾಧಿಕಾರಿ, ಅಲ್ಪಸಂಖ್ಯಾತರ ಇಲಾಖೆಯ ವರಿಷ್ಠಾಧಿಕಾರಿ, ದತ್ತಾಂಶ ವರದಿಗಾರರು, ರೈಲ್ವೆ ಇಲಾಖೆಯ ಗ್ರೂಪ್‌ ‘ಡಿ’ ಹುದ್ದೆ ಸೇರಿದಂತೆ ಎಂಟು ಸರ್ಕಾರಿ ಹುದ್ದೆಗಳು ಇವರನ್ನು ಅರಸಿ ಬಂದಿವೆ. ಈ ಎಂಟು ಹುದ್ದೆಗಳಲ್ಲಿ ಯಲ್ಲವ್ವಾ ಮಾಳೇದ ಮಹಾನಗರ ಪಾಲಿಕೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸತತ ಪ್ರಯತ್ನ, ಶ್ರದ್ಧೆಯಿಂದ ಓದಿ ಶ್ರಮಪಟ್ಟಿದ್ದರ ಫಲವಾಗಿ ಇವರ ಬಾಳಲ್ಲಿ ಬೆಳಕಿನ ಆಶಾಕಿರಣ ಮೂಡಿದೆ.

ಯಾವುದೇ ಒಂದು ಕ್ಷೇತ್ರದಲ್ಲಿ ಸಾಧಕರಾಗಲು ಶ್ರೀಮಂತ, ಬಡವ ಅನ್ನುವುದಕ್ಕಿಂತ ಸತತ ಪ್ರಯತ್ನ, ಶ್ರದ್ಧೆ ಪ್ರಾಮಾಣಿಕತೆ ಮುಖ್ಯವಾಗಿದೆ. ನಾನು ತುಂಬಾ ಕಷ್ಟಪಟ್ಟು ಓದಿದ್ದೇನೆ. ನನ್ನ ಪರಿಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಇನ್ಮುಂದೆ ನಮ್ಮ ಕುಟುಂಬಕ್ಕೆ ಯಾವುದೇ ಕಷ್ಟ ಇಲ್ಲ.
•ಯಲ್ಲವ್ವಾ ಮಾಳೇದ, 8 ಸರಕಾರಿ ನೌಕರಿ ಪಡೆದ ಸಾಧಕಿ
•ವಿದ್ಯಾರ್ಥಿ ವೇತನದಿಂದಲೇ ಓದಿ ಯಶಸ್ವಿ
•ಮನೆ-ಹೊಲವಿಲ್ಲ ಅಜ್ಜಿಯ ಮನೆಯೇ ಆಸರೆ
ಮಗಳ ಸಾಧನೆಯಿಂದ ಖುಷಿಯಾಗಿದೆ. ನಮ್ಮ ಬಡತನ ಇಂದಿಗೆ ಮುಗಿಯುತೆಂದು ಅನ್ನಿಸುತ್ತಿದೆ. ನನ್ನ ಮಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು.
•ಸುಭದ್ರಾ ಮಾಳೇದ, ಸಾಧಕಿಯ ತಾಯಿ

ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.