ಕೋಚಿಂಗ್‌ ಪಡೆಯದೇ ಎಂಟು ಸರ್ಕಾರಿ ಹುದ್ದೆ ಪಡೆದ ಸಾಧಕಿ


Team Udayavani, May 9, 2019, 12:02 PM IST

bag-2

ಮಹಾಲಿಂಗಪುರ: ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್‌ಸಿಪಿ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಯಲ್ಲವ್ವಾ ಮಾಳೇದ ಯಾವುದೇ ಕೋಚಿಂಗ್‌ ಪಡೆಯದೇ 8 ಸರ್ಕಾರಿ ಹುದ್ದೆ ಪಡೆದಿದ್ದಾರೆ.

ತೇರದಾಳ ಪಟ್ಟಣದ ಕೂಲಿಕಾರರಾದ ಭೀಮಪ್ಪ ಮತ್ತು ಸುಭದ್ರಾ ಮಾಳೇದ ಪುತ್ರಿಯಾದ ಯಲ್ಲವ್ವಾ ಬೆಳೆದದ್ದು ಕಷ್ಟದ ಹಾದಿಯಲ್ಲಿಯೇ. ಇರಲು ಗೇಣುದ್ದ ಜಾಗವಿಲ್ಲ. ಮನೆ, ಹೊಲವಂತೂ ಇಲ್ಲವೇ ಇಲ್ಲ. ಅಜ್ಜಿಯ ಮನೆಯೇ ಇವರಿಗಾಸರೆ.

ಕಾಲೇಜಿನ ಫೀ ಪಾವತಿಸಲು ಪರದಾಟ ನಡೆಸಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಯಲ್ಲವ್ವಾ ಸಮೀರವಾಡಿ ಸೋಮೈಯಾ ಶುಗರ್ ಫ್ಯಾಕ್ಟರಿ ನೀಡಿದ ವಿದ್ಯಾರ್ಥಿ ವೇತನದಿಂದ ಶಿಕ್ಷಣ ಪುನರಾರಂಭಿಸಿ ಬಿಎಸ್ಸಿ, ಎಂಎಸ್ಸಿ ಅಧ್ಯಯನ ಮಾಡಿದ್ದಾರೆ. ಸುಮಾರು ಒಂದು ವರ್ಷದವರೆಗೂ ಹಸಿವು, ನಿದ್ರೆಯೆನ್ನದೇ ಓದಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ.

ಈಗ ಏಕಕಾಲಕ್ಕೆ ನವೋದಯ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು, ಮಹಾನಗರ ಪಾಲಿಕೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ಮಹಾನಗರ ಪಾಲಿಕೆಯ ಕರ ವಸೂಲಿಗಾರರು, ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು, ಗ್ರೇಡ್‌-2 ಮುಖ್ಯಾಧಿಕಾರಿ, ಅಲ್ಪಸಂಖ್ಯಾತರ ಇಲಾಖೆಯ ವರಿಷ್ಠಾಧಿಕಾರಿ, ದತ್ತಾಂಶ ವರದಿಗಾರರು, ರೈಲ್ವೆ ಇಲಾಖೆಯ ಗ್ರೂಪ್‌ ‘ಡಿ’ ಹುದ್ದೆ ಸೇರಿದಂತೆ ಎಂಟು ಸರ್ಕಾರಿ ಹುದ್ದೆಗಳು ಇವರನ್ನು ಅರಸಿ ಬಂದಿವೆ. ಈ ಎಂಟು ಹುದ್ದೆಗಳಲ್ಲಿ ಯಲ್ಲವ್ವಾ ಮಾಳೇದ ಮಹಾನಗರ ಪಾಲಿಕೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸತತ ಪ್ರಯತ್ನ, ಶ್ರದ್ಧೆಯಿಂದ ಓದಿ ಶ್ರಮಪಟ್ಟಿದ್ದರ ಫಲವಾಗಿ ಇವರ ಬಾಳಲ್ಲಿ ಬೆಳಕಿನ ಆಶಾಕಿರಣ ಮೂಡಿದೆ.

ಯಾವುದೇ ಒಂದು ಕ್ಷೇತ್ರದಲ್ಲಿ ಸಾಧಕರಾಗಲು ಶ್ರೀಮಂತ, ಬಡವ ಅನ್ನುವುದಕ್ಕಿಂತ ಸತತ ಪ್ರಯತ್ನ, ಶ್ರದ್ಧೆ ಪ್ರಾಮಾಣಿಕತೆ ಮುಖ್ಯವಾಗಿದೆ. ನಾನು ತುಂಬಾ ಕಷ್ಟಪಟ್ಟು ಓದಿದ್ದೇನೆ. ನನ್ನ ಪರಿಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಇನ್ಮುಂದೆ ನಮ್ಮ ಕುಟುಂಬಕ್ಕೆ ಯಾವುದೇ ಕಷ್ಟ ಇಲ್ಲ.
•ಯಲ್ಲವ್ವಾ ಮಾಳೇದ, 8 ಸರಕಾರಿ ನೌಕರಿ ಪಡೆದ ಸಾಧಕಿ
•ವಿದ್ಯಾರ್ಥಿ ವೇತನದಿಂದಲೇ ಓದಿ ಯಶಸ್ವಿ
•ಮನೆ-ಹೊಲವಿಲ್ಲ ಅಜ್ಜಿಯ ಮನೆಯೇ ಆಸರೆ
ಮಗಳ ಸಾಧನೆಯಿಂದ ಖುಷಿಯಾಗಿದೆ. ನಮ್ಮ ಬಡತನ ಇಂದಿಗೆ ಮುಗಿಯುತೆಂದು ಅನ್ನಿಸುತ್ತಿದೆ. ನನ್ನ ಮಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು.
•ಸುಭದ್ರಾ ಮಾಳೇದ, ಸಾಧಕಿಯ ತಾಯಿ

ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.