ಮಳೆಹಾನಿ ಪರಿಹಾರಕ್ಕೆ ತುರ್ತು ಕ್ರಮ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಸೂಚನೆ

Team Udayavani, May 27, 2022, 10:57 AM IST

6

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಹಾನಿಗೀಡಾಗಿರುವ ಮನೆ, ಜನ-ಜಾನುವಾರು, ಕೃಷಿ ಮತ್ತು ತೋಟಗಾರಿಕೆ ಬೆಳೆ ಪರಿಹಾರಕ್ಕಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಅತಿವೃಷ್ಟಿಯಿಂದ ಉಂಟಾದ ಹಾನಿ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾದ ಹಾನಿ ವಿವರ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಬೇಕು. ಎಸ್‌ಡಿಎಫ್‌-ಎನ್‌ಡಿಎಫ್‌ ಮಾರ್ಗಸೂಚಿ ಪ್ರಕಾರ ಪರಿಹಾರ ವಿತರಣೆಗೆ ಕ್ರಮ ವಹಿಸಬೇಕು. ಪರಿಹಾರದಲ್ಲಿ ಯಾವುದೇ ರೀತಿಯ ಬಾಕಿ ಉಳಿಸಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಿಡಿಲು ಬಡಿದು ಮೃತಪಟ್ಟಾಗ ತಕ್ಷಣ ವರದಿ ಪಡೆದು 24 ಗಂಟೆಯೊಳಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕು. ಈ ಬಗ್ಗೆ ಮುಖ್ಯಮಂತ್ರಿ ಪರಿಹಾರ ನೀಡುವಲ್ಲಿ ಯಾವುದೇ ರೀತಿಯಲ್ಲಿ ವಿಳಂಬ ಆಗಬಾರದೆಂದು ನಿರ್ದೇಶನ ನೀಡಿದ್ದು, ಅವಶ್ಯಕತೆ ಇದ್ದಾಗ ಮಾತ್ರ ಶವದ ಪೋಸ್ಟ್‌ ಮಾರ್ಟಮ್‌ ವರದಿ ಪಡೆದುಕೊಳ್ಳಬೇಕು ಎಂದ ಅವರು, ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಈಗಾಗಲೇ ನೀಡಿರುವ ಪರಿಹಾರ ಕುರಿತು ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿಯಿಂದ 4 ಜೀವಹಾನಿ ಆಗಿದ್ದು, ತಲಾ 5 ಲಕ್ಷದಂತೆ 20 ಲಕ್ಷ ಪರಿಹಾರ ನೀಡಿರುವುದಾಗಿ ತಿಳಿಸಿದ ಅವರು, ಒಟ್ಟು 34 ಜಾನುವಾರುಗಳು ಹಾನಿಗೊಳಗಾಗಿದ್ದು, ಒಟ್ಟಾರೆಯಾಗಿ ಇಲ್ಲಿವರೆಗೆ 4.48 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ತೋಟಗಾರಿಕೆ ಬೆಳೆ 59.4 ಹೆಕ್ಟೇರ್‌, ಕೃಷಿ 85 ಹೆಕ್ಟೇರ್‌ ಬೆಳೆ ಹಾನಿಗೊಳಗಾಗಿದೆ.

ಅದೇ ರೀತಿ 669 ಮನೆಗಳು ಭಾಗಶಃ ಮನೆಗಳು ಹಾನಿಗೊಳಗಾಗಿವೆ. ಎಸ್‌ ಡಿಎಫ್‌ ಮಾರ್ಗಸೂಚಿ ಪ್ರಕಾರ ಪರಿಹಾರಕ್ಕೆ 2 ದಿನದೊಳಗಾಗಿ ಕ್ರಮವಹಿಸಲು ಸೂಚಿಸಿದರು. ಪರಿಹಾರ ವಿತರಣೆಗೆ ಬಾಕಿ ಉಳಿಸಿಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಲಾಗುವುದು ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಉಪ ಕಾರ್ಯದರ್ಶಿ ಬಸರಿಗಿಡದ, ಅಗ್ನಿಶಾಮಕ ದಳದ ಅಧಿಕಾರಿ ಮಲ್ಲಿಕಾರ್ಜುನಪ್ಪ, ತೋಟಗಾರಿಕೆ ಉಪ ನಿರ್ದೇಶಕ ರಾಹುಲ್‌ ಕುಮಾರ ಬಾವಿದಡ್ಡಿ, ಪಶು ಇಲಾಖೆ ಅಧಿಕಾರಿ ಪದರಾ, ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಇತರರಿದ್ದರು.

ಪ್ರವಾಹ ಸಂಭವಿಸುವ ಪೂರ್ವದಲ್ಲಿ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು. ರೆಸ್ಕೂಗೆ ಸಂಬಂಧಿಸಿದ ಎಲ್ಲ ವಸ್ತು ಪರಿಶೀಲಿಸಬೇಕು. ನಡುಗಡ್ಡೆ ಪ್ರದೇಶಗಳಾದ ಜಮಖಂಡಿ ತಾಲೂಕಿನ ಮುತ್ತೂರು ಮತ್ತು ಕಂಕಣವಾಡಿ ಗ್ರಾಮಗಳಲ್ಲಿ ಹೆಚ್ಚಿನ ನಿಗಾವಹಿಸುವ ಕಾರ್ಯವಾಗಬೇಕು. ಬೋಟ್‌ಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಪೂರ್ಣ ತಯಾರಿಯಲ್ಲಿರಬೇಕು. ಪಿ. ಸುನೀಲ್‌ಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.